Home / ಕಥೆ / ಕಿರು ಕಥೆ / ರಾಜಕೀಯ ಬಿಸಿನೆಸ್ಸು

ರಾಜಕೀಯ ಬಿಸಿನೆಸ್ಸು

ಅವರು ಕೋಟ್ಯಾಧೀಶ ಮನುಷ್ಯ. ಹತ್ತಾರು ಬಿಸಿನೆಸ್ಸುಗಳಿಂದ ಭಾರಿ ವರ್ಚಸ್ಸು ಗಳಿಸಿದ್ದರು. ದುಡ್ಡು ಅವರಲ್ಲಿ ಕೊಳೆಯಾಗಿ ಬಿದ್ದಿದೆಯೆಂದು ಜನ ಮಾತಾಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯದು ತುಂಬು ಸಂಸಾರ. ನಾಲ್ಕು ಜನ ಗಂಡು ಮಕ್ಕಳು. ನಾಲ್ಕು ಜನ ಹೆಣ್ಣನು ಮಕ್ಕಳು. ಗಂಡು ಮಕ್ಕಳಿಗೆ ಮತ್ತು ನಾಲ್ಕು ಜನ ಅಳಿಯಂದಿರೂ ಒಂದೊಂದು ಬಿಸಿನೆಸ್ಸಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯನ್ನು ಮೊದಲ್ಗೊಂಡು ಪ್ರತಿಯೊಬ್ಬರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿದ್ದರು. ಚುನಾವಣಾ ಸಮಯದಲ್ಲಿ ತಮ್ಮ ತಮ್ಮ ಪಕ್ಷಗಳಿಗೆ ಅಭ್ಯರ್ಥಿಗಳಿಗೆ ಅವರು ಸಹಾಯ ಮಾಡುತ್ತಿದ್ದರು. ಆದರೆ ಅವರೆಂದೂ ರಾಜಕೀಯ ಅಧಿಕಾರಕ್ಕಾಗಿ ಹಾತೊರೆಯಲಿಲ್ಲ. ಇದನ್ನು ಗಮನಿಸುತ್ತ ಬಂದಿದ್ದ ಪತ್ರಕರ್ತನೊಬ್ಬ ಕೋಟ್ಯಾಧೀಶರನ್ನು ಸಂದರ್ಶಿಸಿದ.

“ನೀವು ಬಹಳ ದಿನಗಳಿಂದಲೂ ಈ ರಾಜಕೀಯ ಪಕ್ಷದಲ್ಲಿದ್ದೀರಿ. ಯಾಕೆ ಎಂ.ಎಲ್.ಎ ಅಥವಾ ಎಂ.ಪಿ. ಆಗುವ ಮನಸ್ಸು ಮಾಡಿಲ್ಲ?” ಕುತೂಹಲದಿಂದ ಕೇಳಿದ ಪತ್ರಕರ್ತ.

“ರಾಜಕೀಯ ಅಧಿಕಾರದಲ್ಲಿ ನನಗೆ ಚೂರು ಆಸಕ್ತಿಯಿಲ್ಲ” ಕೋಟ್ಯಾಧೀಶರು ಸ್ಪಷ್ಟವಾಗಿಯೇ ಹೇಳಿದರು.

“ಆದರೆ ನೀವು, ನಿಮ್ಮ ಮಕ್ಕಳು, ಅಳಿಯಂದಿರು ಬೇರೆ ಬೇರೆ ರಾಜಕೀಯ ಪಕ್ಷದಲ್ಲಿ ಇದ್ದೀರಲ್ಲ.”

“ಪಕ್ಷದಲ್ಲಿದ್ದರೆ ಅಧಿಕಾರದಲ್ಲಿರಬೇಕಂತ ಎಲ್ಲಿದೆ?”

“ಬೇರೆ ಬೇರೆ ಪಕ್ಷಗಳಲ್ಲಿರುವುದರಿಂದ ನಿಮ್ಮ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟುವುದಿಲ್ಲವೆ?”

“ಖಂಡಿತವಾಗಿಯೂ ಇಲ್ಲ”

“ಒಂದೇ ಪಕ್ಷದಲ್ಲಿರುವವರ ನಡುವೆ ಸಹಮತ ಇರುವುದಿಲ್ಲ ಇದು ನಿಮಗೆ ಹೇಗೆ ಸಾಧ್ಯ?”

“ಸಾಧ್ಯವಿದೆ. ನಮಗೆ ಬಿಸಿನೆಸ್ಸು ಮುಖ್ಯ. ರಾಜಕೀಯ ಮುಖ್ಯವಲ್ಲ. ನಮ್ಮ ವ್ಯವಹಾರಕ್ಕೆ ಆಡಳಿತ ಪಕ್ಷ, ವಿರೋಧ ಪಕ್ಷ, ಎರಡೂ ಬೇಕು, ಅವುಗಳ ತತ್ವ ಸಿದ್ಧಾಂತಗಳಲ್ಲ. ರಾಜಕೀಯ ಅಧಿಕಾರ ತಾತ್ಕಾಲಿಕ. ಬಿಸಿನೆಸ್ಸು ನಿರಂತರ, ನಾವು ಎಲ್ಲ ಪಕ್ಷಗಳಲ್ಲಿರುವುದರಿಂದ ನಮಗೆ ಆತಂಕವಿಲ್ಲ” ಒಳಸತ್ಯವನ್ನು ಬಹಿರಂಗಗೊಳಿಸಿದರು ಕೋಟ್ಯಾಧೀಶರು.

ಪತ್ರಕರ್ತ ಅವರನ್ನು ಅದ್ಭುತ ಎಂಬಂತೆ ದೃಷ್ಟಿಸುತ್ತ ಕುಳಿತ.

*****

 

 

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...