Home / ಕವನ / ಅನುವಾದ / ನಾವು ಬಹಳ ಜನ

ನಾವು ಬಹಳ ಜನ

ನಾನು ಯಾರು ಯಾರೋ ಆಗಿ ಬಿಟ್ಟಿದ್ದೇನೆ,
ನಿಜವಾಗಿ
ಯಾರಾಗಿರಬೇಕೆಂದು ನಿರ್ಧಾರಮಾಡಲು ಆಗಿಯೇ ಇಲ್ಲ.
ನನ್ನ ಅಂಗಿಯೊಳಗೆ ಕಳೆದು ಹೋಗಿರುವ ಅವರೆಲ್ಲ
ಬೇರೆ ಬೇರೆ ಊರುಗಳಿಗೆ ಹೋಗಿಬಿಟ್ಟಿದ್ದಾರೆ.
ಹಾಂ ಈಗೆಲ್ಲ ಸರಿಯಾಗಿದೆ ಅನ್ನಿಸಿ
ನಾನು ಜಾಣನಂತೆ ಕಾಣಬೇಕೆಂದು ಸಿದ್ಧನಾದಾಗ
ನನ್ನೊಳಗಡಗಿರುವ ಒಬ್ಬ ಮೂರ್ಖ
ನನ್ನ ಬಾಯನ್ನು ತುಂಬಿ ನಾಲಗೆಯ ಮೇಲೆ ನರ್ತಿಸುತ್ತಾನೆ.
ಮತ್ತೆ ಕೆಲವೊಮ್ಮೆ ಹಲವು ಗಣ್ಯರ ನಡುವೆ
ನಾನು ತೂಕಡಿಸುತ್ತಿರುವಾಗ
ಒಳಗಿನ ಧೈರ್‍ಯವನ್ನೆಲ್ಲ ಕೂಡಿಸಿಕೊಂಡು
ಧೀರನಂತಿರಬೇಕೆಂದರೆ
ನನಗೆ ಗೊತೇ ಇರದ ಹೇಡಿ ಸಾವಿರ ಹಿಂಜರಿಕೆಗಳೊಂದಿಗೆ.
ನನ್ನ ಇಡೀ ಅಸ್ತಿಪಂಜರದ ಮೇಲೆ
ಸವಾರಿ ಮಾಡುತ್ತಾನೆ,
ನಾಲ್ಕಂತಸ್ತಿನ ಸುಂದರ ಮನೆಗೆ ಬೆಂಕಿ ಬಿದ್ದಾಗ
ಫೈರ್ ಮ್ಯಾನನ್ನು ಕರೆದರೆ
ಡಿಡಿಟಿ ಹೊಡೆಯುವವನು ಓಡಿಬರುತ್ತಾನೆ :
ನಾನೇ ಅವನು. ನಾನು ಮಾಡಬಹುದಾದ್ದು ಏನೂ ಇಲ್ಲ.
ನನ್ನನ್ನು ನಾನು ಹೇಗೆ ಒಗ್ಗೂಡಿಸಿಕೊಳ್ಳಲಿ?
ನಾನು ಓದುವ ಪುಸಕಗಳಲ್ಲಿ ಹೀರೊಗಳು
ಸಿಂಹ ಸದೃಶರು, ಆತ್ಮ ವಿಶ್ವಾಸ ಭರಿತರು.
ಅವರ ಕಥೆ ಓದಿದರೆ ನನಗೋ
ಅಸೂಯೆಯಿಂದ ಸಾಯಬೇಕೆನಿಸುತ್ತದೆ.
ಸಿನಿಮಾಕ್ಕೆ ಹೋದರೆ
ಗಾಳಿಯಲ್ಲಿ ಸುಂಯ್ ಗುಡುವ ಬುಲೆಟ್ಟುಗಳ ನಡುವೆ
ಆರಾಮವಾಗಿ ಓಡಾಡುವ ಕೌಬಾಯ್ಗಳನ್ನು ಕಂಡು ಹೊಟ್ಟೆಕಿಚ್ಚಾಗುತ್ತದೆ.
ಎಲಾ, ಅವರ ಕುದುರೆಗೂ ಎಷ್ಟೊಂದು ಧೈರ್ಯ ಅನ್ನಿಸಿಬಿಡುತ್ತದೆ.
ಒಳಗಿನ ಉತ್ಸಾಹಿಯನ್ನು ಬಾರೆಂದು ಕರೆದರೆ
ನನ್ನೊಳಗಿಂದ ಅದೇ ಮುದಿ ಸೋಮಾರಿ ಆಲಸಿ ಕಾಣಿಸಿಕೊಳ್ಳುತ್ತಾನೆ.
ಅದಕ್ಕೆಂದೇ ನಾನೆಂದರೆ ಯಾರೆಂದು ನನಗೆ ತಿಳಿಯುವುದೇ ಇಲ್ಲ.
ನಾನೆಂದರೆಷ್ಟು ಜನ? ಈಗಿರುವವರು ಯಾರು?
ಗೊತ್ತೇ ಆಗುವುದಿಲ್ಲ,
ರಾಜನಂತೆ ಕರೆಗಂಟೆಯೊತ್ತಿ, ನನ್ನನ್ನು, ನನ್ನೊಳಗಿನ ನಿಜವಾದ ನನ್ನನ್ನು
ಕರೆಯಬೇಕು ನಾನು. ನಿಜವಾದ ನಾನು ಸಿಗಬೇಕಾದರೆ
ನಾನು ಮರೆಯಾಗಿಬಿಡಬಾರದಲ್ಲ.
ಈಗ, ಬರೆಯುತಿರುವಾಗ, ನಾನು ದೂರದಲ್ಲಿದ್ದೇನೆ;
ವಾಪಸ್ಸು ಬರುವಷ್ಟು ಹೊತ್ತಿಗೆ ನಾನು ಹೊರಟುಹೋಗಿರುತ್ತೇನೆ.
ಹೀಗೆ ನನಗೆ ಆಗುವ ಹಾಗೇ ಬೇರೆಯವರಿಗೆ ಕೂಡಾ,
ಆಗುತ್ತದೆಯೇ ಎಂದು ತಿಳಿಯುವ ಆಸೆ ನನಗೆ.
ನನಗೆ ನಾನು ಕಾಣಿಸುವಂತೆ ಅವರಿಗೂ ಅವರು ಕಾಣುತ್ತಾರೆಯೋ?
ಈ ಸಮಸ್ಯೆ ತಳಮುಟ್ಟ ಶೋಧಿಸಿದ ಮೇಲೆ
ಸ್ಕೂಲಿಗೆ ಹೋಗಿ ಪಾಠ ಹೇಳುತ್ತೇನೆ.
ನನ್ನ ಸಮಸ್ಯೆ ವಿವರಿಸಲು ಹೊರಟರೆ
ನನ್ನ ಬಗ್ಗೆ ಅಲ್ಲ, ಭೂಗೋಳದ ಬಗ್ಗೆಮಾತಾಡುತ್ತೇನೆ.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...