Home / ಕವನ / ಅನುವಾದ / ನಾವು ಬಹಳ ಜನ

ನಾವು ಬಹಳ ಜನ

ನಾನು ಯಾರು ಯಾರೋ ಆಗಿ ಬಿಟ್ಟಿದ್ದೇನೆ,
ನಿಜವಾಗಿ
ಯಾರಾಗಿರಬೇಕೆಂದು ನಿರ್ಧಾರಮಾಡಲು ಆಗಿಯೇ ಇಲ್ಲ.
ನನ್ನ ಅಂಗಿಯೊಳಗೆ ಕಳೆದು ಹೋಗಿರುವ ಅವರೆಲ್ಲ
ಬೇರೆ ಬೇರೆ ಊರುಗಳಿಗೆ ಹೋಗಿಬಿಟ್ಟಿದ್ದಾರೆ.
ಹಾಂ ಈಗೆಲ್ಲ ಸರಿಯಾಗಿದೆ ಅನ್ನಿಸಿ
ನಾನು ಜಾಣನಂತೆ ಕಾಣಬೇಕೆಂದು ಸಿದ್ಧನಾದಾಗ
ನನ್ನೊಳಗಡಗಿರುವ ಒಬ್ಬ ಮೂರ್ಖ
ನನ್ನ ಬಾಯನ್ನು ತುಂಬಿ ನಾಲಗೆಯ ಮೇಲೆ ನರ್ತಿಸುತ್ತಾನೆ.
ಮತ್ತೆ ಕೆಲವೊಮ್ಮೆ ಹಲವು ಗಣ್ಯರ ನಡುವೆ
ನಾನು ತೂಕಡಿಸುತ್ತಿರುವಾಗ
ಒಳಗಿನ ಧೈರ್‍ಯವನ್ನೆಲ್ಲ ಕೂಡಿಸಿಕೊಂಡು
ಧೀರನಂತಿರಬೇಕೆಂದರೆ
ನನಗೆ ಗೊತೇ ಇರದ ಹೇಡಿ ಸಾವಿರ ಹಿಂಜರಿಕೆಗಳೊಂದಿಗೆ.
ನನ್ನ ಇಡೀ ಅಸ್ತಿಪಂಜರದ ಮೇಲೆ
ಸವಾರಿ ಮಾಡುತ್ತಾನೆ,
ನಾಲ್ಕಂತಸ್ತಿನ ಸುಂದರ ಮನೆಗೆ ಬೆಂಕಿ ಬಿದ್ದಾಗ
ಫೈರ್ ಮ್ಯಾನನ್ನು ಕರೆದರೆ
ಡಿಡಿಟಿ ಹೊಡೆಯುವವನು ಓಡಿಬರುತ್ತಾನೆ :
ನಾನೇ ಅವನು. ನಾನು ಮಾಡಬಹುದಾದ್ದು ಏನೂ ಇಲ್ಲ.
ನನ್ನನ್ನು ನಾನು ಹೇಗೆ ಒಗ್ಗೂಡಿಸಿಕೊಳ್ಳಲಿ?
ನಾನು ಓದುವ ಪುಸಕಗಳಲ್ಲಿ ಹೀರೊಗಳು
ಸಿಂಹ ಸದೃಶರು, ಆತ್ಮ ವಿಶ್ವಾಸ ಭರಿತರು.
ಅವರ ಕಥೆ ಓದಿದರೆ ನನಗೋ
ಅಸೂಯೆಯಿಂದ ಸಾಯಬೇಕೆನಿಸುತ್ತದೆ.
ಸಿನಿಮಾಕ್ಕೆ ಹೋದರೆ
ಗಾಳಿಯಲ್ಲಿ ಸುಂಯ್ ಗುಡುವ ಬುಲೆಟ್ಟುಗಳ ನಡುವೆ
ಆರಾಮವಾಗಿ ಓಡಾಡುವ ಕೌಬಾಯ್ಗಳನ್ನು ಕಂಡು ಹೊಟ್ಟೆಕಿಚ್ಚಾಗುತ್ತದೆ.
ಎಲಾ, ಅವರ ಕುದುರೆಗೂ ಎಷ್ಟೊಂದು ಧೈರ್ಯ ಅನ್ನಿಸಿಬಿಡುತ್ತದೆ.
ಒಳಗಿನ ಉತ್ಸಾಹಿಯನ್ನು ಬಾರೆಂದು ಕರೆದರೆ
ನನ್ನೊಳಗಿಂದ ಅದೇ ಮುದಿ ಸೋಮಾರಿ ಆಲಸಿ ಕಾಣಿಸಿಕೊಳ್ಳುತ್ತಾನೆ.
ಅದಕ್ಕೆಂದೇ ನಾನೆಂದರೆ ಯಾರೆಂದು ನನಗೆ ತಿಳಿಯುವುದೇ ಇಲ್ಲ.
ನಾನೆಂದರೆಷ್ಟು ಜನ? ಈಗಿರುವವರು ಯಾರು?
ಗೊತ್ತೇ ಆಗುವುದಿಲ್ಲ,
ರಾಜನಂತೆ ಕರೆಗಂಟೆಯೊತ್ತಿ, ನನ್ನನ್ನು, ನನ್ನೊಳಗಿನ ನಿಜವಾದ ನನ್ನನ್ನು
ಕರೆಯಬೇಕು ನಾನು. ನಿಜವಾದ ನಾನು ಸಿಗಬೇಕಾದರೆ
ನಾನು ಮರೆಯಾಗಿಬಿಡಬಾರದಲ್ಲ.
ಈಗ, ಬರೆಯುತಿರುವಾಗ, ನಾನು ದೂರದಲ್ಲಿದ್ದೇನೆ;
ವಾಪಸ್ಸು ಬರುವಷ್ಟು ಹೊತ್ತಿಗೆ ನಾನು ಹೊರಟುಹೋಗಿರುತ್ತೇನೆ.
ಹೀಗೆ ನನಗೆ ಆಗುವ ಹಾಗೇ ಬೇರೆಯವರಿಗೆ ಕೂಡಾ,
ಆಗುತ್ತದೆಯೇ ಎಂದು ತಿಳಿಯುವ ಆಸೆ ನನಗೆ.
ನನಗೆ ನಾನು ಕಾಣಿಸುವಂತೆ ಅವರಿಗೂ ಅವರು ಕಾಣುತ್ತಾರೆಯೋ?
ಈ ಸಮಸ್ಯೆ ತಳಮುಟ್ಟ ಶೋಧಿಸಿದ ಮೇಲೆ
ಸ್ಕೂಲಿಗೆ ಹೋಗಿ ಪಾಠ ಹೇಳುತ್ತೇನೆ.
ನನ್ನ ಸಮಸ್ಯೆ ವಿವರಿಸಲು ಹೊರಟರೆ
ನನ್ನ ಬಗ್ಗೆ ಅಲ್ಲ, ಭೂಗೋಳದ ಬಗ್ಗೆಮಾತಾಡುತ್ತೇನೆ.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...