Home / ಕವನ / ಅನುವಾದ / ಇವತ್ತು ರಾತ್ರಿ ಬರೆಯಬಹುದು ….

ಇವತ್ತು ರಾತ್ರಿ ಬರೆಯಬಹುದು ….

ಇವತ್ತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಹೀಗೆ, ‘ರಾತ್ರಿ ಚೂರು ಚೂರಾಗಿದೆ,
ದೂರದಲ್ಲಿ ನಕ್ಪತ್ರ ಮಿನುಗಿದೆ’.
ರಾತ್ರಿಯ ಗಾಳಿ ಆಕಾಶದಲ್ಲಿ ಸುಳಿದು ಹಾಡುತ್ತಿದೆ.
ಇವತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಅವಳನ್ನು ಪ್ರೀತಿಸಿದೆ. ಒಮ್ಮೊಮ್ಮೆ ಅವಳೂ ನನ್ನ ಪ್ರೀತಿಸಿದಳು.
ಇಂಥ ರಾತ್ರಿಗಳಲ್ಲಿ ಅವಳನ್ನು ಅಪ್ಪಿ ಹಿಡಿದೆ.
ಮೋಡವಿರದ ಸ್ವಚ್ಛ ಆಕಾಶ. ಮತೆ ಮತ್ತೆ ಮುತಿಟ್ಟೆ.
ಅವಳು ಪ್ರೀತಿಸಿದಳು. ಒಮ್ಮೊಮ್ಮೆ ನಾನೂ ಅವಳನು ಪ್ರೀತಿಸಿದೆ.
ಅಂಥ ವಿಶಾಲ ನಿಶ್ಚಲ ಕಣ್ಣು, ಪ್ರೀತಿಸದಿರುವುದು ಹೇಗೆ.
ಇವತ್ತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಅವಳನ್ನು ಪ್ರೀತಿಸುವುದಿಲ್ಲ. ಅವಳನ್ನು ಕಳೆದುಕೊಂಡೆ.
ಅಗಾಧ ರಾತ್ರಿ. ಅವಳಿಲ್ಲದೆ ಇನ್ನೂ ಅಗಾಧವಾಗಿದೆ.
ಹುಲ್ಲ ಮೇಲೆ ಇಬ್ಬನಿ ಬೀಳುವ ಸದ್ದಿನಂತೆ ಆತ್ಮದ ಮೇಲೆ ಕವಿತೆಯ ಹನಿಗಳು.
ನನ್ನ ಪ್ರೀತಿ ಅವಳನ್ನುಳಿಸಿಕೊಳ್ಳದಿದ್ದರೆ ಏನಂತೆ.
ರಾತ್ರಿ ಛಿದ್ರವಾಗಿದೆ. ಅವಳಿಲ್ಲ ನನ್ನೊಡನೆ.
ಅಷ್ಟೆ. ದೂರದಲ್ಲಿ ಯಾರದೋ ಹಾಡು. ದೂರದಲ್ಲಿ.
ಅವಳನ್ನು ಕಳೆದುಕೊಂಡು ಆತ್ಮಕ್ಕೆ ತೃಪಿಯಿಲ್ಲ.
ನೋಟ ಅವಳನ್ನು ಹುಡುಕುತ್ತದೆ, ಬಳಿಸಾರಲೆಂದು.
ಹೃದಯ ನೋಡುತ್ತದೆ ಅವಳನ್ನು, ನನ್ನೊಡನೆ ಅವಳಿಲ್ಲ.
ಅದೇ ಇರುಳು ಅದೇ ಮರದ ಮೇಲೆ ಅದೇ ತಿಂಗಳು ಸುರಿದಿದೆ.
ನಾವು ಮಾತ್ರ ಅದೇ ನಾವು ಅಲ್ಲ, ಅದೇ ನಾವು ಆಗಿ ಉಳಿದಿಲ್ಲ.
ಅವಳ ಮೇಲೆ ಪ್ರೀತಿಯಿಲ್ಲ. ಖಂಡಿತ. ಎಷ್ಟೊಂದು ಪ್ರೀತಿ ಇತ್ತು.
ಅವಳ ಕಿವಿಯ ಮುಟ್ಟಲೆಂದು ನನ್ನ ದನಿ ಗಾಳಿಯಾಗಿ ಸುಳಿದಿತ್ತು.
ಇನ್ನು ಮೇಲೆ ಅವಳು ಮತ್ತೊಬ್ಬರಿಗೆ, ಮೊದಲು ನಾನು ಕೊಟ್ಟ ಮುತ್ತುಗಳಂತೆ,
ಅವಳ ದನಿ, ಅವಳ ಹೊಳೆವ ಮೈ, ಅವಳ ಅನಂತ ನೋಟ ಇನ್ನೊಬ್ಬರಿಗೆ.
ಅವಳ ಮೇಲೆ ಈಗ ಪ್ರೀತಿ ಇಲ್ಲ, ಖಂಡಿತ.
ಪ್ರೀತಿ ಇರಬಹುದೇನೋ.
ಪ್ರೀತಿ ಎಷ್ಟು ಕಿರಿದು, ಮರೆವು ಎಷ್ಟು ಹಿರಿದು.
ಇಂಥ ರಾತ್ರಿಯಲ್ಲಿ ಅವಳನ್ನು ಅಪ್ಪಿದ್ದೆ
ಅವಳಿಲ್ಲದೆ ಈಗ ಆತ್ಮಕ್ಕೆ ತೃಪ್ತಿ ಇಲ್ಲ.
ಅವಳು ನನಗೆ ಕೊಡುವ ಕೊನೆಯ ನೋವು ಇದೇ ಇರಬಹುದು
ಅವಳ ಬಗ್ಗೆನಾನು ಬರೆಯುವುದು ಇದೇ ಕೊನೆಯ ಕವಿತೆ ಇರಬಹುದು.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...