Home / ಕವನ / ಅನುವಾದ / ಇವತ್ತು ರಾತ್ರಿ ಬರೆಯಬಹುದು ….

ಇವತ್ತು ರಾತ್ರಿ ಬರೆಯಬಹುದು ….

ಇವತ್ತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಹೀಗೆ, ‘ರಾತ್ರಿ ಚೂರು ಚೂರಾಗಿದೆ,
ದೂರದಲ್ಲಿ ನಕ್ಪತ್ರ ಮಿನುಗಿದೆ’.
ರಾತ್ರಿಯ ಗಾಳಿ ಆಕಾಶದಲ್ಲಿ ಸುಳಿದು ಹಾಡುತ್ತಿದೆ.
ಇವತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಅವಳನ್ನು ಪ್ರೀತಿಸಿದೆ. ಒಮ್ಮೊಮ್ಮೆ ಅವಳೂ ನನ್ನ ಪ್ರೀತಿಸಿದಳು.
ಇಂಥ ರಾತ್ರಿಗಳಲ್ಲಿ ಅವಳನ್ನು ಅಪ್ಪಿ ಹಿಡಿದೆ.
ಮೋಡವಿರದ ಸ್ವಚ್ಛ ಆಕಾಶ. ಮತೆ ಮತ್ತೆ ಮುತಿಟ್ಟೆ.
ಅವಳು ಪ್ರೀತಿಸಿದಳು. ಒಮ್ಮೊಮ್ಮೆ ನಾನೂ ಅವಳನು ಪ್ರೀತಿಸಿದೆ.
ಅಂಥ ವಿಶಾಲ ನಿಶ್ಚಲ ಕಣ್ಣು, ಪ್ರೀತಿಸದಿರುವುದು ಹೇಗೆ.
ಇವತ್ತು ರಾತ್ರಿ ಅತಿ ದುಃಖದ ಕವಿತೆ ಬರೆಯಬಹುದು.
ಅವಳನ್ನು ಪ್ರೀತಿಸುವುದಿಲ್ಲ. ಅವಳನ್ನು ಕಳೆದುಕೊಂಡೆ.
ಅಗಾಧ ರಾತ್ರಿ. ಅವಳಿಲ್ಲದೆ ಇನ್ನೂ ಅಗಾಧವಾಗಿದೆ.
ಹುಲ್ಲ ಮೇಲೆ ಇಬ್ಬನಿ ಬೀಳುವ ಸದ್ದಿನಂತೆ ಆತ್ಮದ ಮೇಲೆ ಕವಿತೆಯ ಹನಿಗಳು.
ನನ್ನ ಪ್ರೀತಿ ಅವಳನ್ನುಳಿಸಿಕೊಳ್ಳದಿದ್ದರೆ ಏನಂತೆ.
ರಾತ್ರಿ ಛಿದ್ರವಾಗಿದೆ. ಅವಳಿಲ್ಲ ನನ್ನೊಡನೆ.
ಅಷ್ಟೆ. ದೂರದಲ್ಲಿ ಯಾರದೋ ಹಾಡು. ದೂರದಲ್ಲಿ.
ಅವಳನ್ನು ಕಳೆದುಕೊಂಡು ಆತ್ಮಕ್ಕೆ ತೃಪಿಯಿಲ್ಲ.
ನೋಟ ಅವಳನ್ನು ಹುಡುಕುತ್ತದೆ, ಬಳಿಸಾರಲೆಂದು.
ಹೃದಯ ನೋಡುತ್ತದೆ ಅವಳನ್ನು, ನನ್ನೊಡನೆ ಅವಳಿಲ್ಲ.
ಅದೇ ಇರುಳು ಅದೇ ಮರದ ಮೇಲೆ ಅದೇ ತಿಂಗಳು ಸುರಿದಿದೆ.
ನಾವು ಮಾತ್ರ ಅದೇ ನಾವು ಅಲ್ಲ, ಅದೇ ನಾವು ಆಗಿ ಉಳಿದಿಲ್ಲ.
ಅವಳ ಮೇಲೆ ಪ್ರೀತಿಯಿಲ್ಲ. ಖಂಡಿತ. ಎಷ್ಟೊಂದು ಪ್ರೀತಿ ಇತ್ತು.
ಅವಳ ಕಿವಿಯ ಮುಟ್ಟಲೆಂದು ನನ್ನ ದನಿ ಗಾಳಿಯಾಗಿ ಸುಳಿದಿತ್ತು.
ಇನ್ನು ಮೇಲೆ ಅವಳು ಮತ್ತೊಬ್ಬರಿಗೆ, ಮೊದಲು ನಾನು ಕೊಟ್ಟ ಮುತ್ತುಗಳಂತೆ,
ಅವಳ ದನಿ, ಅವಳ ಹೊಳೆವ ಮೈ, ಅವಳ ಅನಂತ ನೋಟ ಇನ್ನೊಬ್ಬರಿಗೆ.
ಅವಳ ಮೇಲೆ ಈಗ ಪ್ರೀತಿ ಇಲ್ಲ, ಖಂಡಿತ.
ಪ್ರೀತಿ ಇರಬಹುದೇನೋ.
ಪ್ರೀತಿ ಎಷ್ಟು ಕಿರಿದು, ಮರೆವು ಎಷ್ಟು ಹಿರಿದು.
ಇಂಥ ರಾತ್ರಿಯಲ್ಲಿ ಅವಳನ್ನು ಅಪ್ಪಿದ್ದೆ
ಅವಳಿಲ್ಲದೆ ಈಗ ಆತ್ಮಕ್ಕೆ ತೃಪ್ತಿ ಇಲ್ಲ.
ಅವಳು ನನಗೆ ಕೊಡುವ ಕೊನೆಯ ನೋವು ಇದೇ ಇರಬಹುದು
ಅವಳ ಬಗ್ಗೆನಾನು ಬರೆಯುವುದು ಇದೇ ಕೊನೆಯ ಕವಿತೆ ಇರಬಹುದು.
*****
ಮೂಲ: ಪಾಬ್ಲೋ ನೆರುಡಾ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...