Home / ಕಥೆ / ಕಿರು ಕಥೆ / ಡಿಸೆಲ್ ಭಾಗ್ಯ

ಡಿಸೆಲ್ ಭಾಗ್ಯ

ದೊಡ್ಡ ಟ್ರಾನ್ಸ್‌ಪೋರ್ಟ್ ಕಂಪನಿಯ ಟ್ರಕ್ ಡ್ರೈವರನೊಬ್ಬ ಮನೆ ಕಟ್ಟಿಸಿದ. ಗೃಹ ಪ್ರವೇಶಕ್ಕೆ ಬಹಳಷ್ಟು ಜನ ಬಂದಿದ್ದರು. ಮಧ್ಯಾಹ್ನ ಬಂದವರಿಗೆಲ್ಲ ಸುಗ್ರಾಸ ಭೋಜನ. ಮತ್ತೆ ರಾತ್ರಿ ತನ್ನ ಖಾಸಾ ಜನರಿಗೆ ಭಾರೀ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ ಏರ್ಪಡಿಸಿದ್ದ ಡ್ರೈವರ್‍.

ಇಬ್ಬರು ಡ್ರೈವರುಗಳು ಊಟ ಮಾಡಿಕೊಂಡು ದಾರಿಯುದ್ದಕ್ಕೂ ಮಾತಾಡುತ್ತ ಹೊರಟರು.

“ರಾಮುದಾದಾನ ಮನೆ ಬಹಳ ಸುಂದರವಾಗಿದೆ” ಎಂದ ಒಬ್ಬ.

“ಕಿಟಕಿ, ಬಾಗಿಲು ಎಲ್ಲಾ ಸಾಗವಾಣಿಯದಂತೆ” ಮತ್ತೊಬ್ಬನೆಂದ.

“ಗೋಡೆಗಳಿಗೆ, ನೆಲಕ್ಕೆ ಹಾಕಿಸಿದ ಗ್ರಾನೈಟ್ ಕಲ್ಲಿಗೆ ಲಕ್ಷ ರೂಪಾಯಿಗಳಂತೆ.”

“ರಾಮುದಾದಾ ನಮ್ಮ ಗಾಡಿಯಲ್ಲಿ ಕ್ಲೀನರ್‍ ಆಗಿದ್ದ. ಅವನು ಡ್ರೈವರ್‍ ಆಗಿದ್ದೆ ನಾಲ್ಕು ವರ್ಷದ ಹಿಂದೆ.”

“ಅವನು ಕಷ್ಟಪಟ್ಟು ದುಡಿದಿದ್ದಾನೆ.”

“ನಾನೂ ಅವನಂತೆ ಇಪ್ಪತ್ತು ವರ್ಷ ದುಡಿದಿದ್ದೇನೆ. ನಮಗೊಂದು ಸ್ವಂತ ಜಾಗಾ ಮಾಡಿಕೊಳ್ಳಲು ಆಗಿಲ್ಲ. ನಮ್ಮಂತೆ ಗುಡಿಸಲಲ್ಲಿ ಇದ್ದ ರಾಮುದಾದಾ ಈಗ ಭವ್ಯ ಬಂಗಲೆ ಕಟ್ಟಿಸಿದ.”

“ಅದೆಲ್ಲ ಅವನ ಭಾಗ್ಯ!”

“ಅಲ್ಲ; ಅದು ಡಿಸೆಲ್ ಭಾಗ್ಯ!”

“ಅಂದರೆ…..?”

“ನೀನು ರಾಮುದಾದಾನ ಮನೆಯ ಗೋಡೆಗಳನ್ನು ಮೂಸಿ ನೋಡಲಿಲ್ಲವೆ? ಅಲ್ಲಿ ಡಿಸೆಲ್ ವಾಸನೆಯೇ ತುಂಬಿತ್ತು”.

*****
ಹುಡುಕು ಪದ: ಡೀಸೆಲ್, ಡ್ರೈವರ್‍

ಕೀಲಿಕರಣ:
ವ್ಯಾಕರಣ ದೋಷ ತಿದ್ದುಪಡಿ: ಕಿಶೋರ್‍ ಚಂದ್ರ

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...