Home / ಕವನ / ಕವಿತೆ / ಸೀಮಂತಿನಿ

ಸೀಮಂತಿನಿ

ಯಾರಿವಳು?
ಇದ್ದಕ್ಕಿದ್ದಂತೆ ಪಕ್ಕದಲೆ ಬದಲಾದವಳು?
ಗಂಡನೆಂಬವನನ್ನ ಕಂಡ ಕಂಡಂತೆಯೇ
ಕಂದ ಎಂಬಂತೆ ಮಮತೆಯಲಿ ಮಾತಾಡುವಳು!
ಅಪ್ಪ ಬಂದವನನ್ನು ತಪ್ಪು ಮಾಡಿದ ಎಳೆಯನಂತೆ
ಉಡಿಯಲ್ಲಿ ಹಾಕಿ ಶಮಿಸಿದವಳು
ಗುಟುರು ಮದವನು ಮೆಟ್ಟಿ ಎದ್ದ ಹೆಡೆಯನು ತಟ್ಟಿ
ಹೊಲೆಗಸದ ತೊಟ್ಟಿಯನು ಹೀಗೆ ತೊಳೆದವಳು?

ಇವಳೆ
ಬೆನ್ನ ಬಳಿ ಬಂದು ಕೊರಳಿಗೆ ತೂಗುತಿದ್ದವಳು?
ಕೈಯ ಪುಸ್ತಕವನ್ನು ಕಿತ್ತು ಗೂಡೊಳಗೆಸೆದು
ಸಾಕು ಬಿಡಿ ಸನ್ಯಾಸ ಎಂದು ತೋಳೆಳೆದವಳು!
ಕೆನ್ನೆಯಲಿ ಬೆರಳಿಟ್ಬು
ಕೊರಳ ಸರ ತುಟಿಗಿಟ್ಬು
ಏನೊ ಕಕಮಕ ಹಿಡಿಸಿ ಗೆದ್ದು ನಕ್ಕವಳು?
ಈಗ ಅದೆ ಹುಡುಗಿ
ಬೇಸಿಗೆಯ ಉರಿಗಣ್ಣ
ಬೆಳುದಿಂಗಳಲಿ ತೊಳೆದು
ಗರ್ಭಗುಡಿ ಹಣತೆಯನು ಹಚ್ಚಿರುವಳು ;
ಮೊನ್ನೆ ಸೀಮಂತದಲಿ ಹಸೆಯೇರಿದಾಗಿಂದ
ಜಗದಂಬೆ ಭಾವಕ್ಕೆ ಸಂದಿರುವಳು!

ಒಲೆ ಮೇಲೆ ಅನ್ನ ಸೀಯುತ್ತೆಲಿದೆ ಮೊನ್ನೆ;
ಎದುರಿಗೇ ಕುಳಿತು
ಹಾಲಪಾತ್ರೆಗೆ ಬಿದ್ದ ಇರುವೆಗಳ ಮೇಲೆತ್ತಿ
ನೆಲಕಿಳಿಸಿ ಹರಿಯಬಿಡುತಿದ್ದಾಳೆ, ಒಂದೊಂದೆ !
ಪೊರಕೆ ತುದಿಯಲಿ ಹಿಂದೆ
ಜಿರಲೆಗಳ ಬಡಿದವಳು ಇವಳೆ ?

“ಪಾಪ” ಎಂದರೆ – ‘ಅಹ! ಶುದ್ದ ಕನ್ನಡಿಗ’
ಎ೦ದು ಛೇಡಿಸಿದವಳು!
ಈಗ ಹೊರಳಿದೆ ಕರುಳು,
ಮೊದಲ ಬಾರಿಗೆ ಬಸಿರ ಸವರಿದೆ ಯಶೋದೆಯ
ಬೆಣ್ಣೆ ಬೆರಳು.

ಎಲ್ಲಿ ತಲೆಮರೆಸಿಕೊಂಡುವೊ ಏನೊ ಈಗಿವಳ
ಸಿನಿಮ ಹೋಟೆಲುಗಳಿಗೆ ಅಲೆವ ಚೆಪಲ,
ಆಗೀಗ (ನನ್ನನೂ ಜೊತೆಗೆಳೆದುಕೊಂಡು!)
ದೇವಸ್ಥಾನ ಯಾತ್ರೆಯಷ್ಟೇ ಈಗ ಎಲ್ಲ!
ಮುಡಿತುಂಬ ಹಣೆತುಂಬ ಕೈತುಂಬ ತನ್ನೆಲ್ಲ
ಮಾಂಗಲ್ಯ ಸೌಭಾಗ್ಯ ಮೆರೆಸಿ,
ಶಾಂತಮುಖದೊಳಗೊಂದು ಮರುಳುನಗೆ ನಿಲಿಸಿ,
ಇವಳೀಗ ಕಾರ್ತೀಕದಾಗಸದ ಹಾಡು,
ಕಣ್ಣೊ ಹುಣ್ಣಿಮೆಯಿರುಳ ಕಡಲ ಬೀಡು!

ಜೊತೆಗೆ ನಡೆವಾಗ
ನನ್ನ ಹೆಜ್ಜೆಗು ಹೆಜ್ಜೆ ಮುಂದೆಯಿಟ್ಬು,
ಈಗ? ಎಂಬಂತೆ ಹುಬ್ಬೆತ್ತರಿಸಿ ನಕ್ಕು ಸ್ಪರ್ಧಿಸಿದ್ದವಳು
ಈಗೆಲ್ಲ ಅಬ್ಬರ ಬಿಟ್ಟು
ಕಾಲೆಳೆಯುವಳು ಏಕೊ ತೀರ.
ಕನಸುಗಣ್ಣಿಗೆ ದಾರಿಯಲ್ಲು ಏನೋ ಧ್ಯಾನ,
ಮೈ ಮಾತ್ರ ಇಲ್ಲಿ ಮನಸೆಲ್ಲೊ ಹೊರಟಿದೆ ಯಾನ,
ಅಡಿಗಡಿಗು ಒ೦ದೊ೦ದು ಗುಡಿಕಟ್ಚಿ ಬಾಗಿಲಲಿ
ಹೊರಳಿ ಬೇಡಿದೆ ಮಗುವಿಗಭಯದಾನ.
ಎಲ್ಲ ಬಾಳಲಿ ಎಂಬ ಭಾವ
ಚೆಲ್ಲುತಿದೆ ಕಣ್ಣು, ಅಲುಗಿದೆ ಹೊಟ್ಟೆಯೊಳಗಿರುವ ಪುಟ್ಟ ಜೀವ;
ಗಟ್ಚಿ ಸ್ವಾರ್ಥಕೆ ಈಗ ಮಳೆ ಬಿದ್ದು ಮೈಯೊಡೆದು
ಉಸಿರಾಡುತಿದೆ ಮಣ್ಣ ತೇವ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...