Home / ಕವನ / ಕವಿತೆ / ಬಸವಣ್ಣನವರಿಗೆ

ಬಸವಣ್ಣನವರಿಗೆ

ನೀನೇನೊ ನಿಜವಾಗಿ ಮಂತ್ರಿ.
ಬಿಜ್ಜಗಿಜ್ಜಳರ ಸಭೆಗಲ್ಲ ನಾ ಹೇಳುವುದು,
ಕಂತ್ರಿಜನಗಳ ಬಿಡು,
“ಇಟ್ಟರೆ ಸಗಣಿಯಾಗಿ, ತಟ್ಟಿದರೆ ಕುರುಳಾಗಿ
ಸುಟ್ಟರೆ ನೊಸಲಿಗೆ ವಿಭೂತಿಯಾಗಿ
ತಟ್ಟದೇ ಹಾಕಿದರೆ” ಕೊಳವೆ ಗೊಬ್ಬರವಾಗಿ
ನಾರಿದರು ಬೀಗಿ ಮೆರೆಯುವ ಭಂಡರನು ಸುಡು.
ತಂತ್ರಗಳ ಮರೆಯಿರದೆ ಮಂತ್ರವಾಯಿತು ಮಾತು ನಿನ್ನಲ್ಲಿ;
ಎಸೆದ ಮಾತೆಲ್ಲ ಮಸೆದಲುಗಾಗಿ ಇಂದಿಗೂ
ಆಡುತಿದೆ ದಟ್ಟೈಸಿ ಬೆಳೆದ ಕಗ್ಗಾಡಲ್ಲಿ.

ಲಿಂಗಕಲ್ಲಿನ ಮೇಲೆ ಬದುಕ ಒಗೆಯಲು ಹೊರಟ
ರಜಕ ನಿನಗೆ
ಎಲ್ಲರೂ ಬಳಗ, ನಾಟಕದ ಜಗಲಿಯ ಮೇಲೆ
ಲೋಕಸಂವಾದ, ಕಟ್ಟೀಕಾಂತ ಒಳಗೆ.
ಬಾಳಬಲ್ಲದೆ ಸಂತೆಯಲಿ ಸಲಗ? ಆದರೂ
ಸಿಕ್ಕಿಬಿದ್ದಿದೆ ಕಡೆಗೆ ದೊಂಬಿದಾಸರ ಕೈಗೆ!
ಗಂಟೆ, ಮಂಟಪ, ಭಾರಿ ಬೆಳ್ಳಿ ಸಂಪುಟದಲ್ಲಿ
ಅದಕ್ಕೆ ಊರಿನ ನಡುವೆ ಮೆರವಣಿಗೆ.
(ನಾ ಬಲ್ಲೆ ಒಳಗೊಳಗೆ ನಗು ನಿನಗೆ)
ನಿನ್ನೆ ಪಟದೆದುರಿಗೇ
ತಲೆವಾಗುತಿದೆ ಏತ,
ಕೈಮುಗಿದು ಇಕ್ಕುಳ
ಗಿಳಿಯ ಹಿಂಡೇ ನೆರೆದು ಕಲಿತಿದ್ದ ಒದರುತಿದೆ.
ಅಯ್ಯಾ
ನಾವು ಗಳಿಸಿದ್ದೆಲ್ಲ
ನೀ ಕೊಟ್ಟ ದ್ರಾಕ್ಷಿಗಳ ಹುಳಿಸಿ
ಮದ್ಯವ ಇಳಿಸಿ
ಕುಡಿವ ಕಲೆಯ,
ಓಡೆತ್ತ ಬಲ್ಲುದೊ ಅವಲಕ್ಕಿಯ ಸವಿಯ?
ಕತ್ತೆ ತಿಳಿದೀತೆ ಹೊತ್ತಿರುವ ಗಂಧದ ಬೆಲೆಯ?
ಜನ ಬಾಳಲೆಂದು ದುಡಿದವ ನೀನು ಉತ್ಸವದ ಚಿತ್ರವಾಗಿ
ನಿನ್ನ ನುಡಿ ಅಚ್ಚಾಗಿ ಬೈಂಡಾಗಿ
ಬೀರುವಿಗೆ ಸಿಂಗಾರವಾಗಿ,
ಸಂದ ಗೌರವಕಾಗಿ
ನಗು ನಿನಗೆ,
ಕಣ್ಣೀರು ನನಗೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...