Home / ಕವನ / ಕವಿತೆ / ಬಸವಣ್ಣನವರಿಗೆ

ಬಸವಣ್ಣನವರಿಗೆ

ನೀನೇನೊ ನಿಜವಾಗಿ ಮಂತ್ರಿ.
ಬಿಜ್ಜಗಿಜ್ಜಳರ ಸಭೆಗಲ್ಲ ನಾ ಹೇಳುವುದು,
ಕಂತ್ರಿಜನಗಳ ಬಿಡು,
“ಇಟ್ಟರೆ ಸಗಣಿಯಾಗಿ, ತಟ್ಟಿದರೆ ಕುರುಳಾಗಿ
ಸುಟ್ಟರೆ ನೊಸಲಿಗೆ ವಿಭೂತಿಯಾಗಿ
ತಟ್ಟದೇ ಹಾಕಿದರೆ” ಕೊಳವೆ ಗೊಬ್ಬರವಾಗಿ
ನಾರಿದರು ಬೀಗಿ ಮೆರೆಯುವ ಭಂಡರನು ಸುಡು.
ತಂತ್ರಗಳ ಮರೆಯಿರದೆ ಮಂತ್ರವಾಯಿತು ಮಾತು ನಿನ್ನಲ್ಲಿ;
ಎಸೆದ ಮಾತೆಲ್ಲ ಮಸೆದಲುಗಾಗಿ ಇಂದಿಗೂ
ಆಡುತಿದೆ ದಟ್ಟೈಸಿ ಬೆಳೆದ ಕಗ್ಗಾಡಲ್ಲಿ.

ಲಿಂಗಕಲ್ಲಿನ ಮೇಲೆ ಬದುಕ ಒಗೆಯಲು ಹೊರಟ
ರಜಕ ನಿನಗೆ
ಎಲ್ಲರೂ ಬಳಗ, ನಾಟಕದ ಜಗಲಿಯ ಮೇಲೆ
ಲೋಕಸಂವಾದ, ಕಟ್ಟೀಕಾಂತ ಒಳಗೆ.
ಬಾಳಬಲ್ಲದೆ ಸಂತೆಯಲಿ ಸಲಗ? ಆದರೂ
ಸಿಕ್ಕಿಬಿದ್ದಿದೆ ಕಡೆಗೆ ದೊಂಬಿದಾಸರ ಕೈಗೆ!
ಗಂಟೆ, ಮಂಟಪ, ಭಾರಿ ಬೆಳ್ಳಿ ಸಂಪುಟದಲ್ಲಿ
ಅದಕ್ಕೆ ಊರಿನ ನಡುವೆ ಮೆರವಣಿಗೆ.
(ನಾ ಬಲ್ಲೆ ಒಳಗೊಳಗೆ ನಗು ನಿನಗೆ)
ನಿನ್ನೆ ಪಟದೆದುರಿಗೇ
ತಲೆವಾಗುತಿದೆ ಏತ,
ಕೈಮುಗಿದು ಇಕ್ಕುಳ
ಗಿಳಿಯ ಹಿಂಡೇ ನೆರೆದು ಕಲಿತಿದ್ದ ಒದರುತಿದೆ.
ಅಯ್ಯಾ
ನಾವು ಗಳಿಸಿದ್ದೆಲ್ಲ
ನೀ ಕೊಟ್ಟ ದ್ರಾಕ್ಷಿಗಳ ಹುಳಿಸಿ
ಮದ್ಯವ ಇಳಿಸಿ
ಕುಡಿವ ಕಲೆಯ,
ಓಡೆತ್ತ ಬಲ್ಲುದೊ ಅವಲಕ್ಕಿಯ ಸವಿಯ?
ಕತ್ತೆ ತಿಳಿದೀತೆ ಹೊತ್ತಿರುವ ಗಂಧದ ಬೆಲೆಯ?
ಜನ ಬಾಳಲೆಂದು ದುಡಿದವ ನೀನು ಉತ್ಸವದ ಚಿತ್ರವಾಗಿ
ನಿನ್ನ ನುಡಿ ಅಚ್ಚಾಗಿ ಬೈಂಡಾಗಿ
ಬೀರುವಿಗೆ ಸಿಂಗಾರವಾಗಿ,
ಸಂದ ಗೌರವಕಾಗಿ
ನಗು ನಿನಗೆ,
ಕಣ್ಣೀರು ನನಗೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...