Home / ಕವನ / ಕವಿತೆ / ವಿಷವದನ

ವಿಷವದನ

ಆಗಿನಿಂದಲು ಇವನು ಹೀಗೆಯೇ ರೋಗಿಯೇ,
ಮಾತಲ್ಲಿ ಮಾತ್ರ ಧನ್ವಂತರೀ ಶೈಲಿಯೇ;
ಇಷ್ಟು ದಿನ ಹುಚ್ಚೆದ್ದು ಊದಿರುವ ರಾಗದಲಿ
ಶೋಕ ವ್ಯಭಿಚಾರಿ, ಸ್ಥಾಯಿಯು ಮಾತ್ರ ಟೀಕೆಯೇ.
ಟೀಕೆ ಪರರಿಗೆ, ಆತ್ಮಾರ್ಚನೆಗೆ ನುಡಿಕೇದಗೆ!
ಇವನ ಬೊಜ್ಜು ಪಟಾಕಿ ಸಿಡಿತಕ್ಕೆ ಜಯಕಾರ
ಚಟಪಟಿಸಿ ಅಲೆಯುತಿದೆ ಚಿನಕುರುಳಿ ಮಂದೆ
ಹಿಂದೆ ಮುಂದೆ.

ಕೂದಲಿಗು ಹೆಚ್ಚು ಕನಸಿನ ಗಣಿತ ತಲೆಯಲ್ಲಿ;
ಮೈಯಲ್ಲಿ ಮರೆಸಿರುವ ಅಂಗಿ ಭಂಗಿಗಳೆಲ್ಲ
ತೀರ ಹೊಸಹೊಸದು, ಇಂಗ್ಲಿಷ್ ಪಿಕ್ಚರಲ್ಲಿ
ಕಾಮುವೋ ಭೀಮುವೋ ಬರೆದ ಪುಸ್ತಕದಲ್ಲಿ
ಮೊನ್ನೆ ನೋಡಿದ್ದು.

ಹಾಗಂತಲೇ ಇವನು ಮೂಲಂಗಿ ತಿಂದೂ
ಫರಂಗಿ ತೇಗಿದ್ದು;
ಬಾಳೆಮರ ಲಿಲಿಹೂವು ಬಿಟ್ಟಿತೆಂದದ್ದು;
ನ್ಯೂಯಾರ್ಕಿನಲ್ಲಿ ಮಳೆ ಬಿತ್ತೆಂದು ಶೇಷಾದ್ರಿ-
ಪುರದಲ್ಲಿ ಕೊಡೆಬಿಚ್ಚಿ ಉಳಿದವರ ನಕ್ಕಿದ್ದು.
ಈಗ-
ಬೇರೊಂದು ಹೊಸರಾಗ ಹಾಡುತ್ತಿದ್ದಾನೆ,
ಗುದ್ದಿ ಸುದ್ದಿಗೆ ಜಿಗಿದು, ಚುಟುಕು ಬೆಳಗುವ ರೋಗ
ನರಳುತ್ತಿದ್ದಾನೆ;
ಶಂಖ ಜಾಗಟೆ ಹಿಡಿದು
ನಾಮ ಬಳಿದು
ನಡಿಗೆಯಲಿ ಆಗೀಗ ಲಾಗ ಎಳೆದು
ಬಸ್ಸು ರಿಕ್ಷಾ ಕಾರು ಇಡಿಕಿರಿದ ರಸ್ತೆಯಲಿ
ನಟ್ಟ ನಡುವೆ ನಿಂತು ಕೂಗುತ್ತಿದ್ದಾನೆ.
ಸುತ್ತಲೂ ಮುಕ್ಕಿರಿವ ಜನಮಂದೆ ಕಂಡು
ಮಂಗ ಕುಣಿಸುವ ಕೊಂಗ ಪೂರ ದಂಗಾಗಿ
ಬೆಪ್ಪು ನೋಡಿದ್ದಾನೆ!

ನಿಂತೆಬಿಟ್ಟಿರ! ಅಯ್ಯೋ, ಕೂರಿ ಇವರೆ
ಗೊತ್ತೆ ಏನಾಯ್ತಂತ ಶನಿವಾರ ಬೆಳಗಾಗ?
ಸರ್ಕಲ್ಲ ಹೋಟಲಲಿ ಗುಂಪಲ್ಲಿ ಕಂಡ.
ಎದ್ದವನೆ ಬಳಿ ಬಂದು
“ಹಲೊ ಭಟ್ಟ ಹೊಲಿಸಯ್ಯ ಹೊಸ ಮೆಟ್ಚ” ಎಂದ!
“ಹೇಗಿದೆ ಪ್ರಾಸಗಳ ಗೇಲಿ ಕಂದ?
‘ಅನುಭವದ ಲಯ ಮುರಿದು ಅನುಭಾವಕೇರುವುದೆ
ಎಲ್ಲ ಸಾಹಿತ್ಯಗಳ ಪರಮೋಚ್ಚ ಗುರಿ.’
ಇದು ಖುದ್ದು ನನ್ನದೆ ಮಾತು ಈಗಷ್ಟೆ ಸ್ಫುರಿಸಿದ್ದು”
ಎಂದವನೆ ತನ್ನ ಎರಡೂ ಕೈಗಳನ್ನ
ಪ್ಯಾಂಟಿನೆಡಬಲದ ಎರಡೂ ಜೇಬಲ್ಲಿಟ್ಟು
ತಾಳ ಬಡಿಯುತ್ತ ಎರಡೂ ಕಾಲಿನಿಂದ
ಪ್ರಾಸಶೈಲಿಯಲೆ ಆತ್ಮಾಭಿನಯ ನೀಡಿದ.
ಹುಬ್ಬ ಕೊಂಕಿಸಿ
ಮುಖಕ್ಕೆ ಕೊಂಚ ನಗು ತರಿಸಿ
‘ಕೆಲಬಲದ ಮನ್ನೆಯರ’ ಗತ್ತಿಂದ ನೋಡಿದ.

ಇದ್ದಕ್ಕಿದ್ದಂತೆ ಎದ್ದಿತೊ ಭಾರಿ ಉದ್ಘೋಷ,
ಪತಿಪಾದ ಸೇವೆಯಲ್ಲಿ ಮೈಯ ಸಲ್ಲಿಸಲೆಂದು
ತವಕದಲ್ಲಿ ಕಾದ ಸತಿಭಾವದಾವೇಶ.
ಉಬ್ಬಿ ಚಿನಕುರುಳಿಗಳು ಬಿರುದ ಸಿಡಿಸಿದರಯ್ಯ ಮೆಚ್ಚುಗಣ್ಣಾಗಿ
ನಡೆದ ವಿಷವದನ ಹೊಗಳಲೂ ಬರದ ದಡ್ದರನ್ನು
ಕಾವ್ಯಶೈಲಿಯಲಿ ಚುಚ್ಚುತ್ತ
ಚಿನಕುರುಳಿಗಳ ತಲೆಯ ಸವರುತ್ತ!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...