Home / ಕವನ / ಕವಿತೆ / ಬರಡು

ಬರಡು

ಬಯಲ ಹೆಡೆಯಾಗಿ ನೆರಳ ಕೊಡೆಯಾಗಿ
ಫಲ ಸುರಿಸಲು ಬಯಸಿ,
ಮೊಳಕೆ ಒಡೆಯುತಿರುವಾಗಲೆ ಯಾವುದೊ
ನಂಜು ಗಾಳಿ ಬೀಸಿ,
ತೊಟ್ಟ ವಸ್ತ್ರವೇ ಜಗುಳಿ ಬಿದ್ದಂತೆ
ಎಲೆಯುದುರಿವೆ ಕೆಳಗೆ;
ಪ್ರಾಯದ ಗಿಡ ಆಯ ತಪ್ಪಿದಂತಿದೆ
ಈ ರೂಪವೆ ಇದಕೆ?
ಮೂಳೆಗೈಯಾಗಿ ಮುಗಿಲಿಗೆ ಚಾಚಿದ
ಬರದ ಭಿಕ್ಷಹಸ್ತ.
ಸತ್ತ ಸಿರಿಯನ್ನು ಎತ್ತಲು ನಿಲುಕದೆ
ಅಳುತಲಿರುವ ತ್ರಸ್ತ;
ಕಾಣುವ ಕಣ್ಣಿನ ಶಾಪ,
ಬಾಳಿನ ಹಾಳಿಗೆ ರೂಪ,
ಬೋಳು ಬಯಲಲ್ಲಿ, ಬೆಂಕಿ ಬಿಸಿಲಲ್ಲಿ
ಸ್ತಬ್ಧವಾದಂತೆ ಮಾರಿಗುಡಿಯಲ್ಲಿ
ಹೊಗೆಯಾಗೇಳುವ ಧೂಪ;
ಗಾಳಿಮೈಯ ಸೀಳುತ ನಿಂತಿರುವ
ಒರೆಗಳಚಿದ ಬಾಳು,
ಗತಿಸಿದ ಬದುಕಿಗೆ ತಪಿಸುತಿರುವ ಈ
ಮರದ ರೋಗಿಬಾಳು.
* * *

ಟೊಂಗೆಯೊಡೆದ ದಿನದಿಂದಲು ಗಿಡಕೆ
ಪಡೆಯಬೇಕು ಎಂಬುದೊಂದೆ ಬಯಕೆ
ತಿಳಿಯದಂತೆ ತಳದಿಂದಲೆ ಬೆಳೆದು
ಮೈಯೆಲ್ಲಾ ಹಸಿರ ವಸ್ತ್ರ ತಳೆದು,
ತುಳುಕಬೇಕು ಮೈ ತುಂಬಾ ಹಣ್ಣು
ತಣಿಯುವಂತೆ ಬೆಳೆಸಿದವನ ಕಣ್ಣು;
ಬಯಲಲೆಲ್ಲ ತನ್ನ ಕುಲವ ನಿಲಿಸಿ
ಬಾಳಬೇಕು ಎಂದು ಬೇರನಿಳಿಸಿ,
ಮಂತ್ರ ಜಲವ ಸಿಡಿಸಿದಂತೆ ಈ ಗಿಡ
ಭರ ಭರ ಬೆಳೆದಾಯಿತು ಪುಟ್ಟ ಮರ.
* * *

ರಸವತಿಯಾದರು ತನ್ನೊಡಲು
ಗುರಿಯೋ ತಳಕಾಣದ ಕಡಲು.
ಫಲ ಬಿಡದಿದ್ದರೆ ಏನಿದ್ದೇನು
ಮುಗಿಯಿತೆ ಬರಿ ಸುಖಪಡಲು?
ಕರಿಮುಗಿಲಿನ ಸಂತತ ರಸಧಾರೆಗು
ಮೊಗ್ಗನು ತಳೆಯದು ಮಡಿಲು :
ಗಂಗೆಗನಸ ಕಟ್ಟಿದ ಹೊಳೆ ಇಂಗಿದೆ
ಸುಡುಹೆಂಚಾಗಿದೆ ಒಡಲು ;
ಇಡಿ ಜಗ ಫಲವತಿಯಾದರು ನಿಯಮಕೆ
ಹೊರತಾಗಿದೆ ಈ ಗಿಡ,
ಎಷ್ಟೆ ನುಡಿಸಿದರು ಸುಸ್ವರ ಬರದಿದೆ
ಒಡೆದ ಮಡಕೆ ಈ ಘಟ.
ಗುಡಿಯನು ಬೆಳಗಲು ಬಯಸಿದ ಸೊಡರು
ಉರಿಯುತ್ತಿದೆ ಚಿತೆ ಸುಡಲು;
ಚಾಮರವಾಗುವ ಕನಸ ಕಂಡ ಗಿಡ
ಆಯಿತೆ ಕಸಗುಡಿಸುವ ಬರಲು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...