Home / ಕವನ / ಕವಿತೆ / ಸಾವು

ಸಾವು

ಕಂಡಿರುವೆ ಮೂರು ಸಲ ಇವನ ಮೋರೆ,
ಮನೆಯಂಗಳಕೆ ನುಗ್ಗಿ ಹೀಚು ಹರಿವಾಗ,
ನೋಡುವರ ಕೈಕಟ್ಟಿ ಹಗಲೆ ಲೂಟಿಯ ಹೊಡೆವ ದರೋಡೆಕೋರ
ಹಂಡೆಯಂಥಾ ಹೊಟ್ಟೆ, ಕಿರುಬೆಂಡುಗಾಲು,
ಉಂಡದ್ದು ಉದರ ಸೇರದ ಯಾವ ರೋಗವೋ!
ತಿನಿಮೋರೆ ಚಂದವೋ, ಅರಕೆ ಅತೃಪ್ತಿಗಳೆ
ತೇದ ಇದ್ದಿಲಿನಲ್ಲಿ ಗೆರೆನಿಂತೆ ಬರಲುಮುಖ;
ರೆಪ್ಪೆ ತಡೆಯೂ ಇರದ ಬತ್ತುಗಣ್ಣೊಡಲಲ್ಲಿ
ನೆತ್ತರನೆ ಹೆಪ್ಪುಗಟ್ಟಿಸುವ ಥಣ್ಣನೆ ಬೆಳಕುಗೋಲಿ,
ಜೋಲ್ವ ಗೊಣೆಸಿಂಬಳದ ಬಣ್ಣದಾಲಿ;
ಕಪ್ಪು ಹಾವಂಥ ಉದ್ದನೆ ನಂಜುಗೈ ಚಾಚಿ,
ಉತ್ತಬಿತ್ತಗಳನ್ನೆ ಹೆಕ್ಕಿ,
ಹುಬ್ಬೆತ್ತಿ ನಗುವ ಲೊಟಕರಿಸಿ ನೆಕ್ಕಿ.

ಈಚೀಚೆ ಎಲ್ಲೆಲ್ಲು ಇವನ ನೆರಳು-
ಮೂಳೆಗಣ್ಣಿನ ಸುತ್ತ ಕರಿಯುಂಗುರವ ಬೆಳೆದ
ಮೂವತ್ತು ದಾಟಿರುವ ಬ್ರಹ್ಮಚಾರಿ;
ಆಳತೋಳಿಗೆ ದಬ್ಬಿ ಮಗುವನು, ಸಮಾಜದಲಿ
ಭಾಷಣದ ಸೇವೆ ನಡೆಸಿಹ ಶ್ರೀಮತಿ;
ಅಕ್ಕಿಯಂಗಡಿ ಮುಂದೆ ಮೈಲುದ್ದ ಕ್ಯೂನಿಂತು,
ಬೆವರಿಡುವ ಮುಖವ ಚೀಲದಲೆ ಒರೆಸುತ್ತಿರುವ
ಕಂಗಾಲುಗಣ್ಣಿನ ಸ್ವತಂತ್ರ ಗಣರಾಜ್ಯ;
ತಿವಿದಾಗ ಎಚ್ಚತ್ತು ಗಡಬಡಿಸಿ ಕೈಯೆತ್ತಿ
ನಿರ್ಣಯವ ಪಾಸುಮಾಡುವ ಪಕ್ಷ ಬಹುಮತ;
– ಇಲ್ಲೆಲ್ಲ ಆಡಿದಂತಿದೆ ಇವನ ಬೆರಳು.

ಇವನ ಮೈ ಒಮ್ಮೊಮ್ಮೆ ಬೆಳೆದು ಹರಡುವುದು
ಮಣ್ಣು ಮುಗಿಲಿನ ನಡುವೆ ನಂಜುತೆರೆಯಾಗಿ
ನಡುನಡುವೆ ಹರುಕಾಗಿ ಮೋಡಿ ಕೂಗುವುದು.
ಕಾರು ಮೋಟರು ರೈಲು ಕೈಗಾಡಿ ಪ್ಲೇನು,
ನರ ನಾಯಿ ಗಿಡ ಬಳ್ಳಿ ಕಾಗೆ ಗಿಳಿ ಮೀನು,
ಮಗು ಮುದುಕ ಮೊಳಕೆ ಮರ ಮಿಡಿ ಹೀಚು ಹಣ್ಣು-
ಎಲ್ಲಕ್ಕು ಸ್ಫರ್ಧೆ ಆಗ
ಹರುಕಿನಲಿ ತೂರುವಾಗ.
ತೆರೆ ತೂರಿದರೆ ಉಳಿವು
ತಡೆದು ಕೆಡೆದರೆ ಮುಗಿವು.
ತೆರೆ ಬಡಿದು ಸಿಡಿದ ಹರಣದ ಹರಹು ಕಂಡಾಗ
ಬೆರಗಾಗಿ ಬುದ್ಧಿಗನಿಸುವುದು,
ಸಾವೆ ಪ್ರಕೃತಿ, ಬಾಳೆ ವಿಕೃತಿ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...