Home / ಕವನ / ಕವಿತೆ / ಸಾವು

ಸಾವು

ಕಂಡಿರುವೆ ಮೂರು ಸಲ ಇವನ ಮೋರೆ,
ಮನೆಯಂಗಳಕೆ ನುಗ್ಗಿ ಹೀಚು ಹರಿವಾಗ,
ನೋಡುವರ ಕೈಕಟ್ಟಿ ಹಗಲೆ ಲೂಟಿಯ ಹೊಡೆವ ದರೋಡೆಕೋರ
ಹಂಡೆಯಂಥಾ ಹೊಟ್ಟೆ, ಕಿರುಬೆಂಡುಗಾಲು,
ಉಂಡದ್ದು ಉದರ ಸೇರದ ಯಾವ ರೋಗವೋ!
ತಿನಿಮೋರೆ ಚಂದವೋ, ಅರಕೆ ಅತೃಪ್ತಿಗಳೆ
ತೇದ ಇದ್ದಿಲಿನಲ್ಲಿ ಗೆರೆನಿಂತೆ ಬರಲುಮುಖ;
ರೆಪ್ಪೆ ತಡೆಯೂ ಇರದ ಬತ್ತುಗಣ್ಣೊಡಲಲ್ಲಿ
ನೆತ್ತರನೆ ಹೆಪ್ಪುಗಟ್ಟಿಸುವ ಥಣ್ಣನೆ ಬೆಳಕುಗೋಲಿ,
ಜೋಲ್ವ ಗೊಣೆಸಿಂಬಳದ ಬಣ್ಣದಾಲಿ;
ಕಪ್ಪು ಹಾವಂಥ ಉದ್ದನೆ ನಂಜುಗೈ ಚಾಚಿ,
ಉತ್ತಬಿತ್ತಗಳನ್ನೆ ಹೆಕ್ಕಿ,
ಹುಬ್ಬೆತ್ತಿ ನಗುವ ಲೊಟಕರಿಸಿ ನೆಕ್ಕಿ.

ಈಚೀಚೆ ಎಲ್ಲೆಲ್ಲು ಇವನ ನೆರಳು-
ಮೂಳೆಗಣ್ಣಿನ ಸುತ್ತ ಕರಿಯುಂಗುರವ ಬೆಳೆದ
ಮೂವತ್ತು ದಾಟಿರುವ ಬ್ರಹ್ಮಚಾರಿ;
ಆಳತೋಳಿಗೆ ದಬ್ಬಿ ಮಗುವನು, ಸಮಾಜದಲಿ
ಭಾಷಣದ ಸೇವೆ ನಡೆಸಿಹ ಶ್ರೀಮತಿ;
ಅಕ್ಕಿಯಂಗಡಿ ಮುಂದೆ ಮೈಲುದ್ದ ಕ್ಯೂನಿಂತು,
ಬೆವರಿಡುವ ಮುಖವ ಚೀಲದಲೆ ಒರೆಸುತ್ತಿರುವ
ಕಂಗಾಲುಗಣ್ಣಿನ ಸ್ವತಂತ್ರ ಗಣರಾಜ್ಯ;
ತಿವಿದಾಗ ಎಚ್ಚತ್ತು ಗಡಬಡಿಸಿ ಕೈಯೆತ್ತಿ
ನಿರ್ಣಯವ ಪಾಸುಮಾಡುವ ಪಕ್ಷ ಬಹುಮತ;
– ಇಲ್ಲೆಲ್ಲ ಆಡಿದಂತಿದೆ ಇವನ ಬೆರಳು.

ಇವನ ಮೈ ಒಮ್ಮೊಮ್ಮೆ ಬೆಳೆದು ಹರಡುವುದು
ಮಣ್ಣು ಮುಗಿಲಿನ ನಡುವೆ ನಂಜುತೆರೆಯಾಗಿ
ನಡುನಡುವೆ ಹರುಕಾಗಿ ಮೋಡಿ ಕೂಗುವುದು.
ಕಾರು ಮೋಟರು ರೈಲು ಕೈಗಾಡಿ ಪ್ಲೇನು,
ನರ ನಾಯಿ ಗಿಡ ಬಳ್ಳಿ ಕಾಗೆ ಗಿಳಿ ಮೀನು,
ಮಗು ಮುದುಕ ಮೊಳಕೆ ಮರ ಮಿಡಿ ಹೀಚು ಹಣ್ಣು-
ಎಲ್ಲಕ್ಕು ಸ್ಫರ್ಧೆ ಆಗ
ಹರುಕಿನಲಿ ತೂರುವಾಗ.
ತೆರೆ ತೂರಿದರೆ ಉಳಿವು
ತಡೆದು ಕೆಡೆದರೆ ಮುಗಿವು.
ತೆರೆ ಬಡಿದು ಸಿಡಿದ ಹರಣದ ಹರಹು ಕಂಡಾಗ
ಬೆರಗಾಗಿ ಬುದ್ಧಿಗನಿಸುವುದು,
ಸಾವೆ ಪ್ರಕೃತಿ, ಬಾಳೆ ವಿಕೃತಿ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...