Home / ಕವನ / ಕವಿತೆ / ಪರಮಹಂಸ

ಪರಮಹಂಸ

ಏನಿದೀ ಜಿಗಿದಾಟ
ಕಿವಿಹರಿವ ಕೂಗಾಟ
ಇದುವರೆಗು ಕೇಳರಿಯದೀ ಆರ್ಭಟ?
ಕಳೆದ ಸಂತಮಹಾಂತರಾರು ಕಾಣದ ನೆಲೆಯ ಕಂಡನೆಂಬಂತೆ
ಇವನಾಡುವಾಟ!
ಅವರಿವರ ನಾಲಗೆಯ ಕಿತ್ತು
ತಲೆಯೊಳು ನೆಟ್ಟು
ಬೆಳೆಸಿಹನು ಇವನೊಂದು ಭಾರಿ ಮಂಡೆ.
ರಮಣ ಅರವಿಂದ ನುಡಿಯುವರು ಬುರುಡೆಯೊಳಿಂದ
ಅವರು ಹೊರಜಿಗಿಯೆ ಇದು ಖಾಲಿಹಂಡೆ!

ಯಾರದೋ ಗದ್ದೆಯಲಿ ನಿನ್ನ ದನ ಮೇಯಿಸುವುದಿನ್ನು ಸಾಕು;
ಕಂಡಕಂಡವರೆಲ್ಲ ತುಡುಗುದನ ಎಂದೊಯ್ದು
ದೊಡ್ಡಿಗಟ್ಟುವ ರಂಪ ಏಕೆ ಬೇಕು?
ಇರುವೆರಡು ಪುಡಿಕಾಸ
ನಾಲ್ಕು ಅಡಿ ನೆಲಕೊಳಲು ಹಾಕು,
ಆದ ಕೈಬಿಟ್ಟು
ನೆರೆಬೇಲಿ ತರಿದು
ನಾ ಸುರಭಿಕುಲಸ್ವಾಮಿಯೆನುವುದು ಬರಿ ಧಿಮಾಕು.

ಈಗೀಗ ನಡುಹರೆಯ,
ಮರ್ಮಸ್ಥಾನವ ಮೆಟ್ಟಿ ನಡೆದು ಬರುತಿದ್ದಾನೆ ನರ್ಮಸಚಿವ;
ಉತ್ಥಾನಪಾದರೆದೆ ಮೇಲೆಯೇ
ನಗುನಗುತ
ತುತ್ತುಗೊಳೆ ನಿಲುವಂಥ ಅಗ್ನಿಪಾದ.
ಸಪ್ತಸಾಗರದಡಿಯ ಪಾತಾಳದೊಡಲಲ್ಲಿ
ಅಬ್ಬರಿಸಿ ಒರಲುತಿರೆ ತೋಳ ಕರಡಿ, ಹೊರಗೆ
ಹಣೆಯ ಮಣೆಯಲಿ ಪರಮಹಂಸ ಪಾದದ ರಜವ
ಮೆರೆಸುವನು ‘ವೈರಾಗ್ಯ ಷಟ್ಕ’ ಹಾಡಿ.

ಅರಿವು ವರಿಸುವ ಮುಂಚೆ
ಗುರುಮಹಾರಾಜ ಪೀಠದ ಬಯಕೆ ಎದೆಯೊಳುರಿಯೆ,
ಕುಣಿದಾಡಿ ಬೊಬ್ಬಿಡಲು ಬಯಕೆ ಮುತ್ತಿದ ಜೀವ
ಮೌನದಲಿ ನಿಂತರಿವೆಗೆಣೆಯೆ?
ನಿನ್ನ ಪ್ರಾಣಕೆ ಪರಿಧಿಯೊಡ್ಡಿ ಸುತ್ತುತಲಿರಲು
ಈ ಮಣ್ಣ ನೂರು ಬಣ್ಣ,
ಅದ ಜಿಗಿದ ಮೇಲೆನ್ನು
‘ನನ್ನ ಸಾಧನೆಯ ಗುರಿ ಬ್ರಹ್ಮ, ಅದೆ ಅತ್ಮಕನ್ನ.’

ಸುಗ್ಗಿ ಬರೆ ಬೀಗಿ ಮಾಗಿಗೆ ಕೊರಗಿ ಬಳಲುವನು
ಈ ಪರಮಹಂಸ!
ಪಾಮರರು ಬನ್ನಿರೋ, ಅಡಿಯೊಳಿಡಿ ಹಣೆಯ
ಇವ ಅರವಿಂದರಂಶ!
ಎಲ್ಲೊ ಹುಟ್ಟಿದ ಗಿಡವನಿದರ ನಿಜಭೂಮಿಯೊಳು
ನೆಡಬಾರದೇನೊ ಭಗವಂತ?
ಬಿಸಿಲ ಹಣ್ಣಾಗದೆ ರಸತುಂಬಿ ಕಳಿವಂತೆ ಕೃಪೆಮಾಡೊ,
ಬದುಕಲೀ ಭ್ರಾಂತ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...