Home / ಕವನ / ಕವಿತೆ / ಪರಮಹಂಸ

ಪರಮಹಂಸ

ಏನಿದೀ ಜಿಗಿದಾಟ
ಕಿವಿಹರಿವ ಕೂಗಾಟ
ಇದುವರೆಗು ಕೇಳರಿಯದೀ ಆರ್ಭಟ?
ಕಳೆದ ಸಂತಮಹಾಂತರಾರು ಕಾಣದ ನೆಲೆಯ ಕಂಡನೆಂಬಂತೆ
ಇವನಾಡುವಾಟ!
ಅವರಿವರ ನಾಲಗೆಯ ಕಿತ್ತು
ತಲೆಯೊಳು ನೆಟ್ಟು
ಬೆಳೆಸಿಹನು ಇವನೊಂದು ಭಾರಿ ಮಂಡೆ.
ರಮಣ ಅರವಿಂದ ನುಡಿಯುವರು ಬುರುಡೆಯೊಳಿಂದ
ಅವರು ಹೊರಜಿಗಿಯೆ ಇದು ಖಾಲಿಹಂಡೆ!

ಯಾರದೋ ಗದ್ದೆಯಲಿ ನಿನ್ನ ದನ ಮೇಯಿಸುವುದಿನ್ನು ಸಾಕು;
ಕಂಡಕಂಡವರೆಲ್ಲ ತುಡುಗುದನ ಎಂದೊಯ್ದು
ದೊಡ್ಡಿಗಟ್ಟುವ ರಂಪ ಏಕೆ ಬೇಕು?
ಇರುವೆರಡು ಪುಡಿಕಾಸ
ನಾಲ್ಕು ಅಡಿ ನೆಲಕೊಳಲು ಹಾಕು,
ಆದ ಕೈಬಿಟ್ಟು
ನೆರೆಬೇಲಿ ತರಿದು
ನಾ ಸುರಭಿಕುಲಸ್ವಾಮಿಯೆನುವುದು ಬರಿ ಧಿಮಾಕು.

ಈಗೀಗ ನಡುಹರೆಯ,
ಮರ್ಮಸ್ಥಾನವ ಮೆಟ್ಟಿ ನಡೆದು ಬರುತಿದ್ದಾನೆ ನರ್ಮಸಚಿವ;
ಉತ್ಥಾನಪಾದರೆದೆ ಮೇಲೆಯೇ
ನಗುನಗುತ
ತುತ್ತುಗೊಳೆ ನಿಲುವಂಥ ಅಗ್ನಿಪಾದ.
ಸಪ್ತಸಾಗರದಡಿಯ ಪಾತಾಳದೊಡಲಲ್ಲಿ
ಅಬ್ಬರಿಸಿ ಒರಲುತಿರೆ ತೋಳ ಕರಡಿ, ಹೊರಗೆ
ಹಣೆಯ ಮಣೆಯಲಿ ಪರಮಹಂಸ ಪಾದದ ರಜವ
ಮೆರೆಸುವನು ‘ವೈರಾಗ್ಯ ಷಟ್ಕ’ ಹಾಡಿ.

ಅರಿವು ವರಿಸುವ ಮುಂಚೆ
ಗುರುಮಹಾರಾಜ ಪೀಠದ ಬಯಕೆ ಎದೆಯೊಳುರಿಯೆ,
ಕುಣಿದಾಡಿ ಬೊಬ್ಬಿಡಲು ಬಯಕೆ ಮುತ್ತಿದ ಜೀವ
ಮೌನದಲಿ ನಿಂತರಿವೆಗೆಣೆಯೆ?
ನಿನ್ನ ಪ್ರಾಣಕೆ ಪರಿಧಿಯೊಡ್ಡಿ ಸುತ್ತುತಲಿರಲು
ಈ ಮಣ್ಣ ನೂರು ಬಣ್ಣ,
ಅದ ಜಿಗಿದ ಮೇಲೆನ್ನು
‘ನನ್ನ ಸಾಧನೆಯ ಗುರಿ ಬ್ರಹ್ಮ, ಅದೆ ಅತ್ಮಕನ್ನ.’

ಸುಗ್ಗಿ ಬರೆ ಬೀಗಿ ಮಾಗಿಗೆ ಕೊರಗಿ ಬಳಲುವನು
ಈ ಪರಮಹಂಸ!
ಪಾಮರರು ಬನ್ನಿರೋ, ಅಡಿಯೊಳಿಡಿ ಹಣೆಯ
ಇವ ಅರವಿಂದರಂಶ!
ಎಲ್ಲೊ ಹುಟ್ಟಿದ ಗಿಡವನಿದರ ನಿಜಭೂಮಿಯೊಳು
ನೆಡಬಾರದೇನೊ ಭಗವಂತ?
ಬಿಸಿಲ ಹಣ್ಣಾಗದೆ ರಸತುಂಬಿ ಕಳಿವಂತೆ ಕೃಪೆಮಾಡೊ,
ಬದುಕಲೀ ಭ್ರಾಂತ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...