Home / ಕವನ / ಕವಿತೆ / ಊರ್ಮಿಳೆ

ಊರ್ಮಿಳೆ

ಕರೆದರೂ ತಿರುಗದೆ
ಜಿಗಿದು ಓಡಿದಳಲ್ಲ,
ಯಾರಿವಳು ಎರಳೆಮರಿ ಎಂದಿರೆ?
ಇವಳೆ ಊರ್ಮಿಳೆ, ತುಂಬುಜಂಬುನೇರಳೆ
ನಮ್ಮ ಮಲೆನಾಡ ಸಿಹಿಪೇರಲೆ.
ನನಗು ಇವಳಿಗು ಸ್ನೇಹ ತೀರ ಈಚೆಗೆ ಎನ್ನಿ
ನನ್ನ ಕಂಡರೆ ನಾಚಿಕೆ,
ಪ್ರೀತಿಯಲಿ ಬಾ ಎಂದು ರಮಿಸಿದರೆ ನಿಲ್ಲುವಳು
ನಾಲ್ಕಾರು ಮಾರಾಚೆಗೆ –
ಮತ್ತೊಮ್ಮೆ ಕರೆದಾನೆ ಎಂಬಾಸೆ ಮಿನುಗುವುದು
ಕಣ್ಣ ತಿಳಿತೆರೆಯಾಚೆಗೆ.
ನಮ್ಮ ನಡುವಿನ ಇಂಥ ಅಂತರಕೆ ನಾನಿಟ್ಟೆ
ಚಾಕಲೇಟಿನ ಸೇತುವೆ!

ಪುಟ್ಟ ಕಣ್ದೊಟ್ಟಿಲಲಿ
ಮಿಂಚರಸದಲಿ ನೆನೆದ ಎರಡು ಕರಿಗೋಲಿ,
ಬಾನು ಕಡಲರಿಯದದರಾಳದಲಿ ಬ್ರಹ್ಮಾಂಡ
ಹೊಡೆಯುವುದು ಜೋಲಿ,
ತುಟಿ ತೆರೆದರಿವಳು-
ಬಾನು ಬುವಿಯನು ತಬ್ಬಿ
ಹಗಲು ಇರುಳನು ದಬ್ಬಿ
ಮರಮರದಿ ಹಾಡುವುವು ಹಕ್ಕಿ ಕೊರಳುಬ್ಬಿ;
ಹೂ ಸುರಿದು ಹಣ್ ಬಿರಿದು
ದಡದಡನೆ ಹೊಳೆ ಹರಿದು
ಇಳೆಗೆ ಮಳೆ ತುಳುಕುವುದು ಹೂಬಿಸಿಲು ಹಬ್ಬಿ!

ಕಿಲಕಿಲನೆ ನಕ್ಕಳೆಂದರೆ ಇವಳು
ಜಡಕು ಕಚಗುಳಿಯನಿಟ್ಟಂತೆ,
ಹರಿದ ಕರಿಮುಗಿಲಲ್ಲಿ ಮಲಗಿರುವ ಬಾನಿಗೆ
ಹುಣ್ಣಿಮೆಯ ಹಾಲು ಹರಿದಂತೆ,
ಕರಿಯ ಕಿರುಜಡೆ ಬೆಣ್ಣೆಗನ್ನೆ ಮೇಲಿಳಿದಿರಲು
ಮಿಂಚು ಮುಗಿಲಾಟದಂತೆ,
ಹೂಗಾಲನಿಟ್ಟು ಜಿಗಿದರೆ ಅದರ ಸ್ಪರ್ಶಕೇ
ಪುಳಕ ನೆಲಕೆ!

ತುಂಬುಕಿತ್ತಲೆಗೆನ್ನೆ ಮಿಂಚುಗಣ್ಣಿನ ಹುಡುಗಿ
ಹೂಮೈಯ ಬೆಡಗಿ!
ತಿಂಗಳನೆ ನಾಚಿಸುವ ಬೆಣ್ಣೆಗೆನ್ನೆಯೊಳೊಂದು
ಕಪ್ಪು ಕಲೆ ಮಿರುಗಿ
ಮುದ್ದು ಮುಖದೊಳಗೊಮ್ಮೆ ತುಂಟನಗೆ ತುಳುಕಿಸಲು
ನಾ ಮೈಯ ಮರೆತು,
ಮುತ್ತಮಳೆ ಸುರಿಸುವೆನು ನೋಯುವುದೊ ಹೂಗೆನ್ನೆ
ಎಂಬುದನೂ ಮರೆತು.

ನಿನ್ನಂಥ ನೆರೆಯಿರಲು
ಯಾವ ಭಾಗ್ಯಕೆ ನನಗೆ ಕಡಮೆ ಹೇಳು?
ನೀ ನನ್ನ ಬಳಿಯಲಿರೆ
ಮುಕ್ತಿಯೂ ಬೇಡ ಸಾಕಿಂಥ ಬಾಳು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...