Home / ಕಥೆ / ಕಿರು ಕಥೆ / ನಾನು ಬದುಕುತ್ತೇನೆ

ನಾನು ಬದುಕುತ್ತೇನೆ

ಸ್ಫರದ್ರೂಪಿ ಯವಕನೊಬ್ಬ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಉನ್ನತ ಅಧಿಕಾರಿಯಾಗಿದ್ದ. ಅವನು ತನ್ನ ತಾಯಿ ತಂದೆ ಸಂಬಂಧಿಕರೊಂದಿಗೆ ಬಂದು ಆ ಚೆಲುವಾದ ಹುಡುಗಿಯನ್ನು ನೋಡಿದ. ಅವಳ ಮಾತು, ಅರ್ಹತೆಗಳೆಲ್ಲ ಅವನಿಗಿಷ್ಟವಾದವು. ಹುಡುಗಿಯೂ ಅವನನ್ನು ಮೆಚ್ಚಿಕೊಂಡಳು.

ಎರಡೂ ಕಡೆಯ ಹಿರಿಯರು ಮಾತುಕತೆ ಆರಂಭಿಸಿಯೇಬಿಟ್ಟರು.

“ನಮ್ಮ ಮಗನಿಗೆ ಒಂದು ಲಕ್ಷ ವರದಕ್ಷಿಣೆ ಕೊಡಬೇಕು” ಹುಡುಗನ ತಾಯಿ ಮೊದಲು ಬೇಡಿಕೆ ಇತ್ತಳು.

“ಕಿಮ್ಮತ್ತಿನ ಎರಡು ಜತೆ ಬಟ್ಟೆ, ಉಂಗುರ, ಚೈನು, ವಾಚು ಕೊಡಬೇಕು” ಸಂಬಂಧಿಕರಲ್ಲಿ ಒಬ್ಬರು ತಮ್ಮ ಅಹವಾಲು ಸಲ್ಲಿಸಿದರು.

“ನನಗೆ ಓಡಾಡಲು ಇಂಡಿಕಾ ಕಾರು ಬೇಕು” ಹುಡುಗ ತನ್ನ ಡಿಮ್ಯಾಂಡ್ ಮುಂದಿಟ್ಟ.

“ನಮ್ಮ ಹುಡುಗ ದೊಡ್ಡ ಸ್ಥಾನದಲ್ಲಿದ್ದವನು. ಅವನ ಮದುವೆಯನ್ನು ನಾವು ಹೇಳಿದ ಕಲ್ಯಾಣ ಮಂಟಪದಲ್ಲಿಯೇ ಮಾಡಿಕೊಡಬೇಕು” ಎಂದು ಕರಾರು ಹಾಕಿದರು ಹುಡುಗನ ತಂದೆ.

ಇದುವರೆವಿಗೂ ಸುಮ್ಮನೆ ಕುಳಿತಿದ್ದ ಹುಡುಗಿಯ ಕಡೆಯ ಹಿರಿಯರೊಬ್ಬರು: “ವರೋಪಚಾರದಲ್ಲಿ ಕೊರತೆ ಇರುವುದಿಲ್ಲ. ನಿಮ್ಮ ಮರ್ಯಾದೆಗೆ ಕುಂದು ಬಾರದಂತೆ ನಾವು ಮದುವೆ ಮಾಡಿಕೊಡುತ್ತೇವೆ. ಆದರೆ ಇಂಥದ್ದೆ ಬೇಕು. ಇಷ್ಟು ಬೇಕು ಎಂದು ಗೆರೆಕೊರೆದು ಹೇಳಬೇಡಿರಿ” ಎಂದರು.

ಅವರು ಮಾತಿನಿಂದ ವ್ಯಗ್ರಗೊಂಡ ಹುಡುಗನ ತಾಯಿ “ನಾವೇನು ಭಿಕಾರಿಗಳಲ್ಲ” ಎಂದಳು.

“ಅಂಥವರಾಗಿದ್ದರೆ ಎಷ್ಟೊ ಒಳ್ಳೆಯದಿತ್ತು. ಕನಿಷ್ಟ ಪಕ್ಷ ಅವರಿಗೆ ಮನುಷ್ಯತ್ವವಾದರೂ ಇರುತ್ತಿತ್ತು. ನೀವು ದರೋಡೆಕೋರರು!” ಬಾಗಿಲಲ್ಲಿ ನಿಂತು ಹೇಳಿದಳು ಹುಡುಗಿ.

ಅವಳ ಮಾತಿನಿಂದ ಅಪಮಾನಿತರಾದ ಹುಡುಗನ ಕಡೆಯವರ ಮೂಗಿನ ಹೊರಳೆ ಹಿಗ್ಗಿದವು. “ಹುಡುಗಿ ಮದುವೆ ಮೊದಲೆ ಹೀಗೆ. ನಾಳೆ ಏನು ಗತಿ?” ಅವರ ಜತೆಗೆ ಬಂದ ಮುದುಕ ಮುಖದ ಮೇಲೆ ಹೊಡೆದಂತೆ ಹೇಳಿದ.

“ಹುಡುಗಿ ಒಳ್ಳೆಯವಳು. ಆದರೆ ನೇರ” ಮೊಮ್ಮಗಳನ್ನು ಸಮರ್ಥಿಸಿಕೊಂಡಳು ಅಜ್ಜಿ.

“ನೀವು ನ್ಯಾಯವಾಗಿ ಮಾತಾಡಿರಿ” ಎಂದರು ಹುಡುಗಿಯ ತಂದೆ.

“ಅಪ್ಪ ಇವರೊಂದಿಗೆ ಚೌಕಾಸಿ ವ್ಯವಹಾರ ಬೇಡ” ನಿಷ್ಠುರವಾಗಿ ಹೇಳಿದಳು ಹುಡುಗಿ.

ಹುಡುಗನ ಕಡೆಯವರು ಎದ್ದು ಬಿರುಗಾಳಿಯಂತೆ ಹೊರಟರು. ಹುಡುಗನ ತಾಯಿ ಹೊಸ್ತಿಲು ದಾಡುವಾಗ “ಈ ಜನ್ಮದಲ್ಲೇ ನಿನಗೆ ಮದುವೆ ಆಗುವುದಿಲ್ಲ” ಎಂದು ಶಪಿಸಿದಳು.

“ಆಗದಿದ್ದರು ಚಿಂತೆಯಿಲ್ಲ. ನಾನು ಬದುಕುತ್ತೇನೆ” ಗಟ್ಟಿಯಾಗಿ ಹೇಳಿದಳು ಹುಡುಗಿ.

*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...