Home / ಕಥೆ / ಕಿರು ಕಥೆ / ಸ್ವಂತದ್ದಲ್ಲ

ಸ್ವಂತದ್ದಲ್ಲ

ಅದು ಮದುವೆ ಮನೆ. ಅಕ್ಷತೆಯ ನಂತರ ಭೋಜನ ಪ್ರಾರಂಭವಾಯಿತು. ಉದ್ದ ನಾಲ್ಕು ಸಾಲುಗಳಲ್ಲಿ ಜನರು ಊಟಕ್ಕೆ ಕುಳಿತಿದ್ದರು. ಅದು ಪ್ರತಿಷ್ಠಿತ ವ್ಯಕ್ತಿಯ ಮಗನ ಮದುವೆಯಾಗಿರುವುದರಿಂದ ಸುಗ್ರಾಸ ಭೋಜನದ ವ್ಯವಸ್ಥೆ ಆಗಿತ್ತು. ಊಟದ ರುಚಿಯನ್ನು ಪ್ರೀತಿಯಿಂದ ಸವಿಯತೊಡಗಿದ್ದರು ಜನ. ಬಡಿಸುವವರು ಲವಲವಿಕೆಯಿಂದ ಊಟದೆಲೆಯ ಕಡೆಗೆ ಗಮನ ಹರಿಸಿದ್ದರು.

ಊಟಕ್ಕೆ ಬಡಿಸುವವರಲ್ಲಿ ಒಬ್ಬ ಕೆಲವರ ಹತ್ತಿರಕ್ಕೆ ಬಂದು ಅತಿಯಾದ ಕಾಳಜಿ ವ್ಯಕ್ತಪಡಿಸಿ “ಹೊಟ್ಟೆ ತುಂಬಾ ಊಟ ಮಾಡಿರಿ, ನಾಚಿಕೆ ಮಾಡಿಕೊಳ್ಳಬೇಡಿರಿ” ಎನ್ನುವನು. “ಈ ವಯಸ್ಸಿನಲ್ಲಿ ಉಣ್ಣದಿದ್ದರೆ ಹೇಗೆ… ಇನ್ನಷ್ಟು ತಗೋರಿ” ಎಂದು ಬಡಿಸುವನು. “ನಿಮ್ಮ ಪಾಲಿನದು ಹಾಕಿದೆ… ಇದು ನನ್ನ ಪಾಲಿನದು. ಮದುವೆ ಊಟ ಇದು ಹೊಟ್ಟೆ ಬಿರಿವಂತೆ ಉಣ್ಣಬೇಕು” ಎಂದು ಅವರು ಅಡ್ಡಾಗಿಟ್ಟ ಕೈಕೊಸರಾಡಿ ಎಲೆಗೆ ಪದಾರ್ಥ ಹಾಕುವನು. “ನನ್ನ ಒತ್ತಾಯಕ್ಕಾದರೂ ಇಷ್ಟು ನೀಡಿಸಿಕೊಳ್ಳಬೇಕು”, “ನಾನು ಪ್ರೀತಿಯಿಂದ ಬಡಿಸುತ್ತೇನೆ ತಗೊಳ್ಳಿರಿ”. “ಇದು ನಿಮ್ಮನೆ ಅಂತ ತಿಳ್ಕೊಳ್ಳಿರಿ” ಇಂಥವೇ ಮಾತುಗಳಿಂದ ಜಬರದಸ್ತಾಗಿ ಸಾಲುಗಳ ನಡುವೆ ಓಡಾಡುತ್ತಿದ್ದ.

ಊಟ ಮಾಡುವವರು ಬೇಡ… ಬೇಡ… ಸಾಕು… ಸಾಕು… ಎಂದು ಎಲೆಯನ್ನು ಪಕ್ಕಕ್ಕೆ ಎತ್ತಿಕೊಂಡರು. ಅದರ ಮೇಲೆ ಅಡ್ಡ ಬಿದ್ದರೂ ಅವನು ಹಟ ಮಾಡಿ ನೀಡುತ್ತಿದ್ದ. ಯಾರಾದರೂ ಹೊಟ್ಟೆ ಹಿಡಿದಷ್ಟು ತಿಂದಾರು. ಅವನು ಒತ್ತಾಯ ಮಾಡಿ ನೀಡಿದ್ದೆಲ್ಲ ಎಂಜಲಾಗಿ ಎಲೆ ತುಂಬಿದ್ದನ್ನು ಕಂಡು ಒಬ್ಬ “ಬೇಡ ಅಂದ್ರೂ ಜುಲಾಮಿ ಮಾಡಿ ಇಷ್ಟು ಅನ್ನ ಆಹಾರ ಕೆಡಿಸುತ್ತಿದ್ದಾನಲ್ಲ ಈ ಮನುಷ್ಯ!” ಎಂದು ವಿಷಾದದಿಂದ ಪೇಚಾಡಿಕೊಂಡ. ಅವನ ಪಕ್ಕದಲ್ಲಿದ್ದವನು ತಟ್ಟನೆ ಉದ್ಗರಿಸಿದ “ಹಾಳು ಮಾಡದೆ ಏನು ಮಾಡಿಯಾನು? ಅದು ಅವನ ಸ್ವಂತದ್ದಲ್ಲ!”

*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...