Home / ಕವನ / ಕವಿತೆ / ಅಪರೂಪದವನು

ಅಪರೂಪದವನು

ಬೆಟ್ಟದ ತಪ್ಪಲಲ್ಲೇ ಹುಟ್ಟಿ ಅಲ್ಲೇ ಬಾಳು ಕಟ್ಟಿದ್ದೇವೆ,
ಕೊಪ್ಪಲು ಬಿಟ್ಟು ಬೆಟ್ಟದ ನೆತ್ತಿ ಹತ್ತಲಾರದೆ ಹೋಗಿದ್ದೇವೆ.
ಇಲ್ಲೇ ಹುಟ್ಟಿದ ನೀನು
ಅಲ್ಲಿಗೆ ಮುಟ್ಟಿದ್ದಕ್ಕೆ
ನಗಾರಿ ಬಡಿದರು ಹೊರಗೆ
ನಡುಗಿದ್ದೇವೆ ಒಳಗೆ
ಅಲ್ಲಿಗೆ ಸೇರಿದ ನೀನು ಮಲ್ಲಿಗೆ ಪರಿಮಳವಾದೆ
ಗಾಳಿಸವಾರಿ ಹೊರಟು ದಿಗಂತದಲ್ಲಿ ಲಂಗರು ನಿಂತೆ
ನಾವೋ-
ಹಿಂಡು ಹಿಂಡಾಗಿ ಮೇವಿಗೆ
ಕಂಡ ಕಂಡಲ್ಲಿ ಅಲೆದಿದ್ದೇವೆ,
ಮುಟ್ಟಲೊಂದು ಗುರಿಯಿಲ್ಲದೆ ಉಟ್ಟಿದ್ದ ಬಿಚ್ಚಿ ಕುಣಿದಿದ್ದೇವೆ.

ಕಳೆದ ಕೆಲವು ದಿನ ಹಲವು ಸಲ ನೆನೆದಿದ್ದೇನೆ ಗಾಂಧಿ
ನನಗೆ ಏನೆಲ್ಲ ನೀನು ಎಂದು,
ಈ ಮಣ್ಣಿನ ಕುಡಿಕೆಯನ್ನ ಬಣ್ಣದ ಹೂಮಾಡಿ
ಆಕಾಶಕ್ಕೆ ಒದ್ದ ಮದ್ದು ಯಾವುದೆಂದು.
ನೀನು ಉರಿಹಗಲ ಗೆದ್ದು ಸಂಜೆ ಮುಗಿಲ ಹೊದ್ದು
ಗಿರಿ ಕಡಲುಗಳ ನುಡಿಸುವಾಗ
ನನಗೆ ಏಳರ ಬೆಳಗು
ಬೆಳೆಯದ ಒಳಗು
ತಲೆತುಂಬ ಕಪಿಗಳ ಲಾಗ.
ಆದರೂ ಆಗ ಕೈಯೆಟುಕಿಗೆ ಕಂಡ ಬಾನು
ಬರಬರುತ್ತ ಕನಸಿನ ಗಡಿಯೊಳಗೆ ಹೊರಳುತ್ತ
ಕಲ್ಪನೆಯನ್ನಷ್ಟೆ ಮುದ್ದಿಸಿದೆ,
ಮರುಳಾಗಿ ತೋಳೆತ್ತಿ ತಬ್ಬಲು ಹೋದರೆ
ಬರಿ ಬಯಲಷ್ಟೆ ಮೈಯನ್ನು ತಬ್ಬಿದೆ.

ತಪ್ಪಿದೆ ಮಹಾತ್ಮ ತಪ್ಪಿದೆ.
ಸಿಕ್ಕ ನೆಲದಲ್ಲೆಲ್ಲ ಸಂಶಯ ಬೆಳೆಯುವ ನಾನು
ಅದರ ಹೆಣವನ್ನು ಸಹ ಶ್ರದ್ಧೆಯಲ್ಲಿ ಸುಡುವ ನೀನು
ಎಲ್ಲಿಗೆ ಎಲ್ಲಿಯ ಮೇಳ?
ನಿಂತರೆ ಎದುರೆದುರು ನಾವು
ನಿಂತಂತೆ ಮುಖಮಾಡಿ ನೆಲಕ್ಕೆ ಬಾನು

ಗಾಂಧಿ, ನೀನು
ಹತ್ತು ಹುತ್ತಗಳಲ್ಲಿ ಕ್ಬೆಯಿಟ್ಟು ಹುಲಿಬಾಯ
ಮುತ್ತಿಟ್ಟು ಸಾಗಿದವನು,
ನಾವೆಲ್ಲ ಗೇಟಾಚೆ ಎಸೆದ ನಯನೀತಿಗಳ
ಮೈಯಲ್ಲಿ ನೆಟ್ಟು ಮರ ಬೆಳೆದು ಫಲಭಾರಕ್ಕೆ
ತಲೆಬಾಗಿದವನು;
ಸತ್ಯಶುಭಗಳ ಕಲ್ಪನೆಯ ಹಂಸತಲ್ಪದಲಿ
ಹೊರಳಿಯೂ ಮಣ್ಣನ್ನು ಮರೆಯದವನು;
ಗೊಬ್ಬರವಾಗಿ ಬಿದ್ದು
ಮಲ್ಲಿಗೆಯಾಗಿ ಎದ್ದು
ಹೆತ್ತ ಬಳ್ಳಿಗೆ ರತ್ನಕಿರೀಟವಾದವನು.

ನಿನ್ನ ಪ್ರಯೋಗಗಳೆಲ್ಲ ಪ್ರಾಣವಿಯೋಗದ ಜಾಡಲ್ಲೆ
ನಡೆದವಲ್ಲ!
ಸತ್ಯದ ಕಾಲರು ಹಿಡಿದು
ಕೆನ್ನೆಗೆ ಹೊಡೆದು
ಅದರ ಬಾಯಗಲಿಸಿ ಹಲ್ಲೆಣಿಸಲು ಹೋಗಿ ದಣಿದು
ಕಂಡ ಹದಿನಾಲ್ಕು ಲೋಕಕ್ಕೆ ತಲ್ಲಣಿಸಿ ಮಣಿದು
ಕಾಲಿಗೆ ಬಿದ್ದವನು,
ಬಿದ್ದ ವಿನಯಕ್ಕೆ ಗೌರೀಶಂಕರದಲ್ಲಿ ಎದ್ದವನು.

ಎಂದೂ ಬೇಕಾಗಲಿಲ್ಲ ನಿನಗೆ ಯಾರದೂ ದಯ
ಬೆತ್ತಲೆ ಇರುವವರಿಗೆ ಎತ್ತಲ ಭಯ? ಬದಲಿಗೆ
ನೀನು ನಿಂತರೆ ದೇಶ ನಿಂತಿತು – ನಿನಗೆ
ನೆಗಡಿಯಾದರೆ ಲೋಕ ಕೆಮ್ಮಿತು.
ಗೊತ್ತ ಗಾಂಧಿ ಏನಾಗಿದೆ ಈಗ?
ಒಡೆದು ಬಿದ್ದಿದೆ ಈ ಮಹಲ ಮರ್ಯಾದೆಯ ಬೀಗ,
ಹಾರು ಹೊಡೆದಿದೆ ಹೆಬ್ಬಾಗಿಲು
ಹಾಡಿದೆ ಕತ್ತಲು ರಾಗ :
ಎಲ್ಲ ರಾಣಿಯರೇ ಆಗಿ
ಬೆರಣಿ ತಟ್ಟುವರೇ ಇಲ್ಲವಾಗಿ
ಕಾಡಿದೆ ನಮ್ದನ್ನು ಪ್ರತಿಷ್ಠೆಯ ರೋಗ.
ಕಳ್ಳ ಮುತ್ತಿಟ್ಟರೆ ಹಲ್ಲೆಣಿಸಿಕೊಳ್ಳುವ ಕಾಲ,
ನೀ ಹಚ್ಚಿದ್ದ ಭಾವದಾದೇಗದುರಿಯಲ್ಲಿ
ಹಾಲುಕ್ಕಿ ಬಂದ ಶೀಲದ ಚೆಲುವು ಬತ್ತಿದೆ
ಉಳಿದಿದೆ ತಳ ಕರಿಗಟ್ಟಿದ ಖಾಲಿ ಪಾತ್ರೆ;
ಹರಿದ ಜೇಬಿಂದ ಎತ್ತಿದ ಹಣ
ಕಟ್ಟಿದ ಮಣಿ ಮಂಟಪದಲ್ಲಿ
ನಡೆದಿದೆ ಹೊಸಾ ಹೊಸ ದನಗಳ ಜಾತ್ರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...