Home / ಕಥೆ / ಕಿರು ಕಥೆ / ಉತ್ತರಾಧಿಕಾರಿ

ಉತ್ತರಾಧಿಕಾರಿ

ಅಮರಪ್ಪನವರು ತಮ್ಮ ಇಡೀ ಆಯುಷ್ಯವನ್ನು ರಾಜಕೀಯದಲ್ಲೇ ಕಳೆದರು.  ಅಧಿಕಾರದ ಸುಖ ಅನುಸರಿಸುವರು.  ಸಾಕಷ್ಟು ಧನ, ಕನ, ಸಂಪತ್ತು ವರ್ಧಿಸಿಕೊಂಡರು.  ದೆಹಲಿ, ಬೆಂಗಳೂರು, ಸ್ವಂತ ಊರು ಎಲ್ಲೆಂದರಲ್ಲಿ ಬಂಗ್ಲೆ ಪ್ಲಾಟು ಹೊಂದಿದ್ದರು.

ದೇಶದ ರಾಜಕಾರಣಕ್ಕೆ ಅನಿವಾರ್ಯವೆನ್ನುವಂತಿದ್ದ ಅವರಿಗೆ ಇತ್ತಿತ್ತಲಾಗಿ ಸಕ್ಕೆ ಕಾಯಿಲೆ, ಹೃದಯ ಬೇನೆ, ಬೆನ್ನು ನೋವು, ಮಂಡಿ ಬೇನೆ, ಉಬ್ಬನ, ಗಂಟಲು ಬೇನೆ ಹೀಗೆ ವಿವಿಧ ಕಾಯಿಲೆಗಳು ಒಮ್ಮೆಲೆ ಅಕ್ರಮಿಸಿಕೊಂಡು ಅವರ ಜೀವದ ಸೊಗಸನ್ನೇ ಹಿಂಡಿ ಹಾಕಿದ್ದವು.  ಬೆನ್ನುವ ನೋವು, ಗಂಟಲು ನೋವಿನ ಚಿಕಿತ್ಸೆಗೆಂದು ಅವರು ಸರಕಾರಿ ಖರ್ಚಿನಲ್ಲಿ ವಿದೇಶಕ್ಕೂ ಹೋಗಿ ಬಂದಿದ್ದರು.  ವೈದ್ಯರು ಅವರಿಗೆ ಹಚ್ಚು ಮಾತಾಡದಿರಲು ಎಚ್ಚರಿಸಿದ್ದರು.  ತೆವಲುಗಳಿಂದ ದೂರವಿರಲು, ಆಹಾರದ ಬಗ್ಗೆ ಕಟ್ಟುನಿಟ್ಟು ಪಲಿಸಲು, ಹೇಳಿದ್ದೂ ಅಲ್ಲದೆ ಆವೇಶಕ್ಕೆ ಅವಕಾಶ ನೀಡಬಾರದೆಂದು ಸ್ಪಷ್ಟವಾಗಿ ಹೇಳಿದ್ದರು.  ಅಮರಪ್ಪನವರು ತಮ್ಮ ಹತವೈಭವವನ್ನು ನೆನಪು ಮಾಡಿಕೊಳ್ಳುತ್ತ ಇರಬೇಕಾದ ಪರಿಸ್ಥಿತಿ ಒದಗಿತು.

ಕೊನೆಗೂ ತಮ್ಮ ಅಭಿಮಾನಿಗಳ ಸಮಾವೇಶವನ್ನು ನಡೆಸಿ ತಾವು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಘೋಷಿಸಿದರು.  ಕೂಡಿದ ಜನ ಬೇಸರದಿಂದ “ನಾವು ಅದಕ್ಕೆ ಅವಕಾಸ ನೀಡುವುದಿಲ್ಲ” ಎಂದರು.  “ನೀವೇ ನಮಗೆ ದಿಕ್ಕು ದೆಸೆ ನಮ್ಮನ್ನು ಅನಾಥರನ್ನಾಗಿ ಮಾಡಬೇಡಿರಿ” ಎಂದು ಗೋಳಾಡಿದರು.  ತಮ್ಮ ಅಭಿಮಾನಿಗಳ ಪ್ರೀತಿ ವಿಶ್ವಾಸಕ್ಕೆ ಮಾರು ಹೋದ ಅಮರಪ್ಪನವರು “ನಾನು ನಿಮ್ಮೊಂದಿಗೆ ಇರುತ್ತೇನೆ.  ನಿಮ್ಮೆಲ್ಲರ ಅನುಕೂಲಕ್ಕಾಗಿ ನನ್ನ ಉತ್ತರಾಧಿಕಾರಿಯೊಬ್ಬ ಇರುತ್ತಾನೆ.  ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ನಿಷ್ಠೆ, ಗೌರವ, ಅಭಿಮಾನದ ಬೆಂಬಲವನ್ನು ನೀವು ಅವನಿಗೂ ಕೊಡಬೇಕು.  ನಾನೆಂದರೆ ಅವನು;  ಅವನೆಂದರೆ ನಾನು ಎಂದು ತಿಳಿಯಬೇಕು” ಎಂದರು.

ಅವರು ಹಾಗೆ ಹೇಳುತ್ತಿರುವಂತೆ ವೇದಿಕೆಯ ಮೆಲಿದ್ದ ಐದಾರು ಯುವಕರ ಮುಖ ಅರಳಿಕೊಂಡವು.  ಅವರೆಲ್ಲ ಅಮರಪ್ಪನವರ ಖಾಸಾ ಆದ್ಮಿಗಳಾಗಿದ್ದರು.  ಹಗಲಿರುಳು ಅವರ ಏಳ್ಗೆಗಾಗಿ, ಪ್ರತಿಷ್ಠೆಗಾಗಿ ರಕ್ತ ಸುಟ್ಟುಕೊಂಡಿದ್ದರು.  ನಿಷ್ಠೆಯಿಂದ ಶ್ರಮಿಸಿದ್ದರು.  ಬದುಕು ಸವೆಸಿದ್ದರು.  ಅನೇಕ ಸಂದರ್ಭಗಳಲ್ಲಿ ಅಮರಪ್ಪ ಆ ತರುಣರ ಬಗ್ಗೆ ಮೆಚ್ಚುಗೆ ಮಾತು ಆಡುತ್ತ ನಾಯಕರನ್ನಾಗಿಸುವ ಆಸೆ ತೋರುತ್ತಲೇ ಬಂದಿದ್ದರು.  ಈಗ ಅಂಥ ಅವಕಶ ಬಂದೀತೆಂದು ತರುಣರು ಹಿಗ್ಗಿಕೊಂಡು ತಮ್ಮ ಗರಿಗರಿ ಅಂಗಿ ತೀಡಿಕೊಂಡು ಮೈಯೆಲ್ಲಾ ಕಿವಿಯಾಗಿ ಕುಳಿತರು.  ಅಮರಪ್ಪ ಅವರತ್ತ ದೃಷ್ಟಿ ಚೆಲ್ಲಿ ತಮ್ಮ ಉತ್ತರಾಧಿಆರಯಿನ್ನು ಸಾರಿಯೇ ಬಿಟ್ಟು “ಮಹಾಜನಗಳೆ, ನಿಮಗೆಲ್ಲರಿಗೂ ಇನ್ನು ಮುಂದೆ ನನ್ನ ಮಗನೆ ನಾಯಕ!”

*****

Tagged:

Leave a Reply

Your email address will not be published. Required fields are marked *

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...