Home / ಕಥೆ / ಕಿರು ಕಥೆ / ಉತ್ತರಾಧಿಕಾರಿ

ಉತ್ತರಾಧಿಕಾರಿ

ಅಮರಪ್ಪನವರು ತಮ್ಮ ಇಡೀ ಆಯುಷ್ಯವನ್ನು ರಾಜಕೀಯದಲ್ಲೇ ಕಳೆದರು.  ಅಧಿಕಾರದ ಸುಖ ಅನುಸರಿಸುವರು.  ಸಾಕಷ್ಟು ಧನ, ಕನ, ಸಂಪತ್ತು ವರ್ಧಿಸಿಕೊಂಡರು.  ದೆಹಲಿ, ಬೆಂಗಳೂರು, ಸ್ವಂತ ಊರು ಎಲ್ಲೆಂದರಲ್ಲಿ ಬಂಗ್ಲೆ ಪ್ಲಾಟು ಹೊಂದಿದ್ದರು.

ದೇಶದ ರಾಜಕಾರಣಕ್ಕೆ ಅನಿವಾರ್ಯವೆನ್ನುವಂತಿದ್ದ ಅವರಿಗೆ ಇತ್ತಿತ್ತಲಾಗಿ ಸಕ್ಕೆ ಕಾಯಿಲೆ, ಹೃದಯ ಬೇನೆ, ಬೆನ್ನು ನೋವು, ಮಂಡಿ ಬೇನೆ, ಉಬ್ಬನ, ಗಂಟಲು ಬೇನೆ ಹೀಗೆ ವಿವಿಧ ಕಾಯಿಲೆಗಳು ಒಮ್ಮೆಲೆ ಅಕ್ರಮಿಸಿಕೊಂಡು ಅವರ ಜೀವದ ಸೊಗಸನ್ನೇ ಹಿಂಡಿ ಹಾಕಿದ್ದವು.  ಬೆನ್ನುವ ನೋವು, ಗಂಟಲು ನೋವಿನ ಚಿಕಿತ್ಸೆಗೆಂದು ಅವರು ಸರಕಾರಿ ಖರ್ಚಿನಲ್ಲಿ ವಿದೇಶಕ್ಕೂ ಹೋಗಿ ಬಂದಿದ್ದರು.  ವೈದ್ಯರು ಅವರಿಗೆ ಹಚ್ಚು ಮಾತಾಡದಿರಲು ಎಚ್ಚರಿಸಿದ್ದರು.  ತೆವಲುಗಳಿಂದ ದೂರವಿರಲು, ಆಹಾರದ ಬಗ್ಗೆ ಕಟ್ಟುನಿಟ್ಟು ಪಲಿಸಲು, ಹೇಳಿದ್ದೂ ಅಲ್ಲದೆ ಆವೇಶಕ್ಕೆ ಅವಕಾಶ ನೀಡಬಾರದೆಂದು ಸ್ಪಷ್ಟವಾಗಿ ಹೇಳಿದ್ದರು.  ಅಮರಪ್ಪನವರು ತಮ್ಮ ಹತವೈಭವವನ್ನು ನೆನಪು ಮಾಡಿಕೊಳ್ಳುತ್ತ ಇರಬೇಕಾದ ಪರಿಸ್ಥಿತಿ ಒದಗಿತು.

ಕೊನೆಗೂ ತಮ್ಮ ಅಭಿಮಾನಿಗಳ ಸಮಾವೇಶವನ್ನು ನಡೆಸಿ ತಾವು ರಾಜಕೀಯ ಸನ್ಯಾಸ ಸ್ವೀಕರಿಸುವುದಾಗಿ ಘೋಷಿಸಿದರು.  ಕೂಡಿದ ಜನ ಬೇಸರದಿಂದ “ನಾವು ಅದಕ್ಕೆ ಅವಕಾಸ ನೀಡುವುದಿಲ್ಲ” ಎಂದರು.  “ನೀವೇ ನಮಗೆ ದಿಕ್ಕು ದೆಸೆ ನಮ್ಮನ್ನು ಅನಾಥರನ್ನಾಗಿ ಮಾಡಬೇಡಿರಿ” ಎಂದು ಗೋಳಾಡಿದರು.  ತಮ್ಮ ಅಭಿಮಾನಿಗಳ ಪ್ರೀತಿ ವಿಶ್ವಾಸಕ್ಕೆ ಮಾರು ಹೋದ ಅಮರಪ್ಪನವರು “ನಾನು ನಿಮ್ಮೊಂದಿಗೆ ಇರುತ್ತೇನೆ.  ನಿಮ್ಮೆಲ್ಲರ ಅನುಕೂಲಕ್ಕಾಗಿ ನನ್ನ ಉತ್ತರಾಧಿಕಾರಿಯೊಬ್ಬ ಇರುತ್ತಾನೆ.  ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ನಿಷ್ಠೆ, ಗೌರವ, ಅಭಿಮಾನದ ಬೆಂಬಲವನ್ನು ನೀವು ಅವನಿಗೂ ಕೊಡಬೇಕು.  ನಾನೆಂದರೆ ಅವನು;  ಅವನೆಂದರೆ ನಾನು ಎಂದು ತಿಳಿಯಬೇಕು” ಎಂದರು.

ಅವರು ಹಾಗೆ ಹೇಳುತ್ತಿರುವಂತೆ ವೇದಿಕೆಯ ಮೆಲಿದ್ದ ಐದಾರು ಯುವಕರ ಮುಖ ಅರಳಿಕೊಂಡವು.  ಅವರೆಲ್ಲ ಅಮರಪ್ಪನವರ ಖಾಸಾ ಆದ್ಮಿಗಳಾಗಿದ್ದರು.  ಹಗಲಿರುಳು ಅವರ ಏಳ್ಗೆಗಾಗಿ, ಪ್ರತಿಷ್ಠೆಗಾಗಿ ರಕ್ತ ಸುಟ್ಟುಕೊಂಡಿದ್ದರು.  ನಿಷ್ಠೆಯಿಂದ ಶ್ರಮಿಸಿದ್ದರು.  ಬದುಕು ಸವೆಸಿದ್ದರು.  ಅನೇಕ ಸಂದರ್ಭಗಳಲ್ಲಿ ಅಮರಪ್ಪ ಆ ತರುಣರ ಬಗ್ಗೆ ಮೆಚ್ಚುಗೆ ಮಾತು ಆಡುತ್ತ ನಾಯಕರನ್ನಾಗಿಸುವ ಆಸೆ ತೋರುತ್ತಲೇ ಬಂದಿದ್ದರು.  ಈಗ ಅಂಥ ಅವಕಶ ಬಂದೀತೆಂದು ತರುಣರು ಹಿಗ್ಗಿಕೊಂಡು ತಮ್ಮ ಗರಿಗರಿ ಅಂಗಿ ತೀಡಿಕೊಂಡು ಮೈಯೆಲ್ಲಾ ಕಿವಿಯಾಗಿ ಕುಳಿತರು.  ಅಮರಪ್ಪ ಅವರತ್ತ ದೃಷ್ಟಿ ಚೆಲ್ಲಿ ತಮ್ಮ ಉತ್ತರಾಧಿಆರಯಿನ್ನು ಸಾರಿಯೇ ಬಿಟ್ಟು “ಮಹಾಜನಗಳೆ, ನಿಮಗೆಲ್ಲರಿಗೂ ಇನ್ನು ಮುಂದೆ ನನ್ನ ಮಗನೆ ನಾಯಕ!”

*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...