ರೋಜಾ

ಚಿತ್ರ: ಅಲೆಕ್ಸಾ / ಪಿಕ್ಸಾಬೇ
ಚಿತ್ರ: ಅಲೆಕ್ಸಾ / ಪಿಕ್ಸಾಬೇ

ಅಮಾವಾಸ್ಯೆಯ ಮರುದಿನ ಸಂಜೆಯಷ್ಟು ಹೊತ್ತಿಗೆ ಆಕಾಶದಲ್ಲಿ ಚಂದ್ರ ದರ್ಶನವಾಯಿತು.  ಗಲ್ಲಿಯಲ್ಲಿ ಸಂಭ್ರಮ.  ಸಾರಾಬೂ ಬೀದಿಗೆ ಬಂದು ತನ್ನ ನಾಲ್ಕು ಮಕ್ಕಳಿಗೂ ಚಂದ್ರನನ್ನು ತೋರಿಸಿದಳು.  “ನಾಳೆ ರೋಜಾ ಚಾಲು”  ಎಂದಳು.  ಅವಳ ಮೂರು ಗಂಡು ಮಕ್ಕಳು “ನಾವೂ ನಾಳೆಗೆ ರೋಜಾ ಇರ್ತೀವಿ” ಎಂದರು.

ಮಾತಿನಲ್ಲಿ ಚುರುಕಾಗಿದ್ದ ಎಂಟು ವರ್ಷದ ನಫೀಸಾ “ನಾನೂ ರೋಜಾ ಮಾಡ್ತೀನಿ ಅಮ್ಮಾ” ಎಂದಳು.

“ನಿನಗೆ ಆಗುದಿಲ್ಲ ಬಿಡು” ಎಂದ ಅವಳ ಅಣ್ಣ.

“ನಾನು ರೋಜಾ ಮಾಡ್ತೀನಿ” ನಫೀಸಾ ಹಟದ ಧೋರಣೆಯಲ್ಲಿ ಹೇಳಿದಳು.

“ಬೇಟಿ ರೋಜಾ ಅಂದ್ರ ಬಾಯಲ್ಲಿ ಹನಿ ನೀರೂ ಹಾಕಬಾರ್‍ದು.  ಹಾಗಾದರೆ ರೋಜಾ ಕಬುಲು ಆಗುವುದು.  ನೀನಿನ್ನೂ ಚಿಕ್ಕವಳು, ನಿನಗೆ ತ್ರಾಸಾಗುವುದು” ಸಾರಾಬೂ ಮಗಳನ್ನು ರಮಿಸಿದಳು.

“ನನ್ಗೇನೂ ಆಗುದಿಲ್ಲ ನಾನು ರೋಜಾ ಮಾಡ್ತೀನಿ” ಉತ್ಸಾಹ ತೋರಿದಳು ನಫೀಸಾ.

“ಒಂದು ಕಡ್ಡಿ ಕೂಡಾ ಬಾಯಲ್ಲಿ ಹಾಕಬಾರ್‍ದು.  ಅದೆಲ್ಲ ನಿನ್ನಿಂದ ಆಗುದಿಲ್ಲ.  ಇನ್ನಷ್ಟು ದೊಡ್ಡವಳಾದ ಮೇಲೆ ರೋಜಾ ಹಿಡಿಯುವಂತೆ ಬೇಟಿ” ತಂದೆ ಹುಸೇನಲಿ ಹೇಳಿದ.

“ನಾನು ರೋಜಾಮಾಡ್ತೀನಿ” ನಫೀಸಾ ಹಟ ಬಿಡಲಿಲ್ಲ.

“ಇನ್ ಷಾ ಅಲ್ಲಾ!” ಎಂದು ಸುಮ್ಮನಾದರು ಸಾರಾಬೂ-ಹುಸೇನಲಿ.

ಮಸೀದಿಯ ಮೀನಾರಿನಿಂದ ಸೈರಿಗೆ ಕರೆ ಕೇಳಿಸಿತು.  ಮಕ್ಕಳು ಉತ್ಸಾಹದಿಂದಲೇ ಎದ್ದರು.  ಮನೆಯಲ್ಲಿ ಇದ್ದದ್ದು ಮೂರು ರೊಟ್ಟಿ ಮಾತ್ರ.  ಮಕ್ಕಳು ಹಂಚಿಕೊಂಡು ತಿಂದು ನಿಯತ್ತು ಹೇಳಿ ರೋಜಾ ಹಿಡಿದರು.  ಸಾರಾಬೂ ಕರಿ ಚಹ ಕುಡಿದಳು.  ಹುಸೇನಲಿ ಹಮಾಲಿ ಮಾಡಬೇಕು ಅವನು ರೋಜಾ ಹಿಡಿಯಲಿಲ್ಲ.

ಹೊತ್ತೇರ ತೊಡಗಿದ್ದಂತೆ ಸಾರಾಬೂ ಚಿಂತೆಗೊಳಗಾದಳು.  ಮಗಳ ರೋಜಾ ಪೂರ್ತಿಯಾಗುವುದೋ ಇಲ್ಲವೋ ಎಂಬ ಅನುಮಾನ ಕಾಡಿತು.  “ಹೇ ಅಲ್ಲಾಹುವೆ!  ಮಗು ಉಪವಾಸ ಅರ್ಧಕ್ಕೆ ನಿಲ್ಲಿಸಿದರೆ ತಪ್ಪು ಮನ್ನಿಸು” ಎಂದು ಹತ್ತಾರು ಸಲ ಪ್ರಾರ್ಥಿಸಿದಳು.

ನಫೀಸಾ ಮಾತ್ರ ಲವಲವಿಕೆಯಿಂದಲೇ ಇದ್ದಳು.  ಶಾಲೆಗೂ ಹೋಗಿ ಬಂದಳು.  ಒಂದು ಹನಿ ನೀರೂ ಎನ್ನಲಿಲ್ಲ.  ಮಧ್ಯಾಹ್ನದ ಇಳಿ ಹೊತ್ತಿಗೆ ಆಟದಲ್ಲಿ ಮಗ್ನಳಾದಳು.

ಸೂರ್ಯ ಮುಳುಗಿದ.  ಅಂದಿನ ರೋಜಾದ ವ್ರತ ಮುಗಿಯಿತು.

“ಬೇಟಿ ನಿನಗೆ ಹಸಿವು ಅನಿಸಲಿಲ್ಲವೆ?” ಸಾರಾಬೂ ಕೇಳಿದಳು.

“ಇಲ್ಲಾ ಅಮ್ಮಾ”

“ಸ್ವಲ್ಪೂ ತ್ರಾಸು ಅನಿಸಿಲ್ಲ” ಕೆದಕಿ ಕೇಳಿದ ಹಿರಿಯಣ್ಣ.

“ರೋಜಾ ಅಂದ್ರ ಉಪವಾಸ.  ಅದು ನಮ್ಗ ರೂಢಿ ಐತಲ್ಲ ಭಯ್ಯಾ” ಎಂದು ಗಳಿಬಿಳಿ ಮಾತಾಡಿ ಒಣಚುರುಮುರಿಯನ್ನು ಬಾಯಿ ತುಂಬಿಕೊಂಡಳು ನಫೀಸಾ.  ಸಾರಬೂ ಕಣ್ಣಲ್ಲಿ ಹನಿಯೊಡೆದಿತ್ತು.

*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...