Home / ಕವನ / ಕವಿತೆ / ಗಣಪತಿ

ಗಣಪತಿ

ಹೊಗಳುವರು ಭಟ್ಟಂಗಿಗಳು ನಿನ
ಗಗಣಿತಾರೋಪಗಳ ಮಾಡುತ
ಹಗರಣದ ಕಾಮುಕರು ನಿನ್ನರಿತವರು ಅವರಲ್ಲ

ಸುಗುಣ ನಿರ್‍ಗುಣ ರೂಪ ನೀನೈ
ಜಗಕೆ ಮಂಗಳ ಕಾರಿ ನೀನೈ
ಮಗುಳೆ ನಮ್ಮಲಿ ಹೊಳೆವ ತೇಜವೆ! ಹೊರತೆ ನೀ ಯಮಗೆ

ನೊಂದಿ ಮೈತ್ರಿಯು ತಮದಲಿರುಳಲಿ
ಕಂದರೆಲ್ಲರು, ಕಂದಿ ತಮ್ಮೊಳ
ಗಿಂದು ನೊಂದಿಹರೆನುತ ಗಣಪನು ಗಿರಿಜೆಯೊಡಗೂಡಿ

ಬಂದು ನಿಂದಿಹ ನಿದುಗೊ! ಹೊಸಿಲಲಿ
ಒಂದೂಗೂಡಿಸಿ ನೊಂದ ಕರಗಳ
ಸಂದ ಪ್ರೇಮಾಂಜಲಿಯ ಪುಟದಲಿ ನೀಡಿರರ್ಘ್ಯವನು

ಮಳೆಯ ಕರೆಯಲು ಮೇಘ ಘಟೆಗಳು
ಬಳಲಿ ತೊಳಲಿದ ಧರಣಿ ತಣಿಯಲು
ಹೊಳೆಗಳೇರಲು ನರರು ಹರುಷಿಸೆ! ಪರಿಯನರಿಯದಲೆ

ಎಳೆಯ ಸುಳಿಗಳು ಪೂಗಳರಳಲು
ಇಳೆಯಕೇದಿಗೆ ಬಿರಿದು ಹೊಗಳಲು
ಸುಳಿದು ಸುಯ್ಯನೆ! ಗಾಳಿಯುಸರಿತು ಗಣಪ ಬರತಿಹನು

ಬರಹಗಾರರ ಗುರುವು ನೀನೈ
ಹರನ ಸುತ ಚಿರ ವಟುವು ನೀನೈ
ಹಿರಿದು ಸೇವೆಯ ಮಾಡಲೆಮಗರಿವಿತ್ತು ಸಲಹುತಿರು

ಇರವನಿಡು ಶಿವಸುಖದ ಬೆಳಕಲಿ
ಇರಿದು ಅಂಕುಶದಲ್ಲಿ ಶಂಕೆಯ
ಧರೆಯ ಸುಖಗಳ ಕರಿವೆ ಭಕುತಿಯಲೀವೆ ಮೋದಕವ

ಅರಿತು ನೋಡಲು ನಾಡ ಒಲುಮೆಗೆ
ಹರಿವ ವೀರ್‍ಯಕೆ ಭಾವಿ ಸೌಖ್ಯಕೆ
ಹರನ ಸುತ ಸ್ವಾತಂತ್ರಜೀವಿಗೆ ನೀನೆ ರಕ್ಷಕನು

ಭರತಮಾತೆಯ ಬೆಮರ ಮಣ್ಣೊಳ
ಗುರಿದಮೂರುತಿ ಭರತಗಣಪತಿಯೆ
ಅರಿತುನಿನ್ನನು ಭಜಿಸಿ ನಲಿವೆವು! ಜಗದ ಜನರೆಲ್ಲ

ನಡುವ ಬಿಗಿಯುವೆ ಪಾಶ ಬಂಧದಿ
ಹಿಡೆವನಂಕುಶ ಕೊಲಲು ಶಂಕೆಯ
ಒಡಲ ಕಟ್ಟುವೆ ಪರರ ಸೇವೆಗೆ ಪೊರೆವೆನಾರ್‍ತರನು

ಹಿಡಿವೆ ಲೇಖನಿ ಬರಿವೆ ಭಾರತ
ದೊಡಲ ಬೇಗೆಯ ಭವ್ಯ ಚರಿತೆಯ
ಒಡೆಯ! ಗಣಪನ ಮಾಡಲೆನ್ನನು ಘಳಿಗೆಯೋಲವಿನಲಿ
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...