Home / ಕವನ / ಕವಿತೆ / ಯದುಮಣಿಯ ಜನುಮದಿನ

ಯದುಮಣಿಯ ಜನುಮದಿನ

ಯಾದವರ ಜಿವಸುಳಿ ವುರಿಗೆರೆಯು ಮೈಸೂರು
ಆದಿಯಲಿ ತೆಂಕಣಕೆ ಅಂಕಿತವ ನಿಡಲಿಳಿದು
ಮೇದಿನಿಯ ನಾಡಿಸಿದ ನಾಡಿಯಿದು ಬೆಳೆದಿಹುದು ದ್ವಾಪರದಿ ಕಲ್ಕಿಗೆನಲು

ಆದಿಯಿಂ ರಾಜ ಕಂಠೀರವರ ದೇವಚಾ
ಮೋದಧಿಯ ಚಂದ್ರ ಕೃಷ್ಣೇಂದ್ರನೆನೆ ಜ್ಯೋತಿಗಳ
ಮೋದದಲಿ ರಾಜಸಿರಿ ಹಾದಿಯಲಿ ಎಣಿಸಿಹಳು ಮಹಿಷರ ನೆನಹಿನಲ್ಲಿ

ದಳವಿ ನ್ನೊಂದರಳುತಲಿದೆ ನೋಡಿರಿ
ತಿಳಿಹೃದಯದ ತೆರೆ ತೆಗೆಯುತಲಿರುವುದು
ತಿಳಿ! ಯಾದವ ಶಕುತಿಯ ದಳವೆದ್ದಿತು! ಈ ದಿನ ಜನುಮದಿನ

ಸುಳಿಸುಳಿ ಕಂಪಿನ ಸುಳಿಯಲಿ ಪ್ರಜೆಗಳು
ಕಳಕಳ ರವದಲಿ ಕೂಡುತ ಹರಿದರು
ಇಳೆಯೊಳು ಹೊಸದಿನ ವೊಂದುರಿಯುತಲಿದೆ ಕಾಂತಿಯ ನೋಡೆನುತ

ವನವನಾಂ ತರದಿಂದ ಹೊರಸೂಸು ತಿರಸುರಭಿ
ಘನಪಥದಲತಿಥಿ ಜನ ಮನಮರೆದು ಸುಳಿಸುಳಿಯೆ
ಸನುಮತದ ಸುಳಿಯಿಡುತ ಚಿರದಿನದ ಗೆಳೆತನವು
ಬಲು ಬಿರಿದು ಸುರಿಯೆ ಮಧುವು

ಮನವರಳಿ ಕಂಪೊಗೆಯೆ ಮಹಿಷೂರ ನಾಡೊಳಗೆ
ಜನುಮದಿನ ಜನವಿದಕೆ! ಜನುಮದಿನ ಯಾದವರ
ಘನಜೋತಿಲತೆಗಿದುವೆ! ಜನುಮದಿನ ವೈಭವಕೆ!
ಜನುಮದಿನ! ಸುಖಶಾಂತಿಗೆ

ಜಗದಲಿ ಕೋಲಾ ಹಲವಿದು ಹೊಳಲಿಡೆ
ಚಿಗುರಲು ಹೊಸದಿನ ವರಳಲು ರವಿಸುಮ
ಬಗೆಬಗೆ ನಿಧಿಗಳ ನೊಗೆದಿಡೆ ಧರಣಿಯು ಕೈಗಾಣಿಕೆಯೆನುತ

ಮಿಗೆಸವಿ ಪುರುಳನು ಪ್ರಜೆಗಳು ತರುತಿರೆ
ಸೊಗೆಯಿಪ ನೆನಹವು ಹಾರುತಬರುತಿರೆ
ಗಗನಕೆ ನೆಗೆದಿತು ಹಳದಿನದಂಚೆಯು ಹೊಸದಿನ ದನಿಗೊಡಲು

ನುಂಗುತಲಿ ಮಲಗೆದ್ದು ಹಳೆದಿನದ ದುಗುಡಗಳ
ಸಂಗಡಲೆ ಚಿಗಿದೆದ್ದು ಗಂಡಭೇರುಂಡವದು
ಕಂಗಳಿರೆ ಭರವಸೆಯ ಜೋತಿಯೆರಡೆನುವಂತೆ ಮೀಯುತಿರೆ ಆಗಸದಲಿ

ಕೆಂಗಿರುಣದಲಿ ಮಿಂದು ಯದುಮಣಿಯ ಮನವಿಂದು
ಸಿಂಗರಿಸಿ ಕೈಬಿಗಿದ ಜನವೃಂದವನು ಬಿಗಿದು
ಕಂಗಳಾಹೊಳಹಿನಲಿ! ಕಂಬನಿಯ ಮಿಡಿಯೆ! ನವ
ಜೀವಕಾದಿಯಿದು! ಎನುತ

ಮಂಜುಳ ರವವೇ ನೆನ್ನುತ ಚಿನನ
ಕಂಜಗಳರಳಲು ಕೇಶವಗವಿಯಿಂ
ದಂಜುತ ಬರುತಲೆ ಗೊಂದಲ ವೇನನೆ! ಚಂಡಿಯು ನಸುನಗಲು

“ನಂಜಿನ ಕೋರೆಯು ಸಡಲಿವೆಕಾಲಗೆ!
ಆಂಜದಿರಂಜದಿರವಮುಳಿದರೆ! ನೀ”
ನಂಜನಗೂಡಲಿ ಧೈರ್ಯದ ನುಡಿಬರೆ ಕೊಂಡಿಯು ಸಡಲಿದವು

ದಿನದೇರು ಬಹಮುಂದೆ ಬಿಳಿಗೊಳದ ಕಳಶದಲಿ
ಹನಿಸಿಡುವೆ ಸೈಕತವ ಗೋದೆಯಲಿ ನಾಮಿಂದು
ಮನವಾಜಿಯೇರುತಲಿ ತುಂಬುವೆನು ತುಂಗೆಯಲಿ
ಭದ್ರೆಯಲಿ ಶುಭಜಲವನು

ವನಪಥವ ಕಾವೇರಿ ಬಿಡುವುದರ ಮುಮ್ಮುಂದೆ
ಹನಿಸಿಡುವೆ ಕಳಶಕ್ಕೆ! ಶಿರಿಯುಗದ ಜೀವನವ!
ಘನಪಾದವೆರಡನ್ನು ತೊಳೆಯುವೆನು ಬಾ! ವಿಭುವೆ!
ಕರುನಾಡ ಹೃದಯದಲ್ಲಿ

ನಲಿದೆದ್ದು ಹಂಪೆಯಲಿ ಶಿಖಿಯೆತ್ತೆ ಕೊಳಲನ್ನು
ಜಲ! ಜೋಗ ಪಾತ್ರದಲ್ಲಿ ಜಯಘೋಷ ಮಾಡುತಿರೆ
ತಿಳಿನೆನಹ ಗಂಗರಸ ಚಾಲುಕ್ಯ ಹೊಯ್ಸಳರು
ಶುಭದಿನವು ! ಸಾಧುವೆನಲು

ಅಲೆಯೆದ್ದು ತೀರಗಳ ನಪ್ಪುತಲೆ ಬೆಳೆಯಿರೆನೆ
ಕಳಕಳವು ಕಾಳೆಯಿಡಲರಿವಿನಟಿವಿಯ ದೂರಿ
ಘಳಿರನಿದೂ! ವೈತಾಳಿ! ಮಹಿಷೂರಮಂಗಳಕೆ
ಶ್ರೀ ಕೃಷ್ಣ ಏಳೆನುತಿದೆ
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...