Home / ಕವನ / ಕವಿತೆ / ಕನ್ನಡಿ

ಕನ್ನಡಿ

ಕಳವಳವು ಕನಸಿಂದ ಬೆಳಗಾಗಿ ಬಲುಕಾಲ
ಕಳೆದು ಹೋಯ್ತೆನುತಾಗ ತಿಳಿವಿನಾ ರಾಣಿತಾ
ನಿಳಿದು ಮಂಚವ ಬೇಗ ತಿಳಿನೀರ ಮಿಂದೆದ್ದು
ಬಿಳಿ ಮಡಿಯ ಶೆಳೆದುಡುತಲೆ

ತರಣಿಗರ್ಘ್ಯವನಿತ್ತು ಅರಿವಿನಾರಾಣಿ ಜಪ
ಸರವ ಪಿಡಿದಾಗ ಕುಳಿತಿರುತಲರ ಘಳಿಗೆಯುರು
ತರದ ಶಾಂತಿಯ ಸವಿದು ತೆರೆದು ಕಂಗಳ ದೇವಿ
ಸರಸತಿಯು ನಸು ನಗುತಲೆ

ಪದುಮ ಪೀಠವನಿಳಿದು ಇದುಗೊ ಸಿಂಗರವಾಗಿ
ಮುದದಿ ಮನದಿನಿಯನಡಿಗೆರಗಿ ಬರುವೆ
ಹದಿನೆಂಟು ಶತಮಾನ ಪುದಿದ ದುಮ್ಮಾನದಲಿ
ಮುದ ಹಾಸವರಿಯದಲೆ ಕೊರಗಿ ಕುಳಿತೆ

ಗುಜರಾತ ಗಗ್ಗರವು ಪದಪದಕೆ ಧನಿಗೊಡಲು
ಗಜಬಜಿಯ ಮಗುವಂತೆ ಮುದವಿಟ್ಟು ಅನುಸರಿಸಿ
ವಿಜಯ ವಂಗದ ಶಂಖದಂದವಹ ಚೂಡಿಗಳು
ಕಿಂಕಿಣನೆ ಧನಿಗೈಯುತ

ಭಾರತಿಯ ಬಲು ಮಧುರ ಹಾವ ಭಾವಗಳನ್ನು
ತೋರಿ ನಲಿದೊಲಿಯೆ ಮಾರರವದಿಂಪಿನಲಿ
ಪೂರವದ ನೆನಹೆಂಬ ಹಿರಿಶೆರಗಿನಂಬರವ
ನಿರಿ ಹಿಡಿದು ತಾನುಟ್ಟಳು

ಸಂಸ್ಕೃತದ ಕಾಂಚಿಯ! ಹೊಳೆವ ಗೆಜ್ಜೆಗಳಲುಗೆ
ಝೇಂಕರಿಸೆ ಜಯಕೆನುತ ಬಳೆಗಗ್ಗರಗಳೆಲ್ಲ
ಬಿಂಕದಲಿ ಗಂಟಿಕ್ಕಿ ರಸಗಬ್ಬ ಕುಪ್ಪುಸವ
ಬಿಗಿಯು ಹಳದೆನುತ ನಗುತ!

ಅಂದವಿದು ಕುಂಕುಮವು ಹಿಂದಿಯಾ ನವ ರಾಗ
ದಿಂದ ಕೂಡಿಹುದೆನುತ ಒಂದು ಬೆರಳಲಿ ತೇದು
ಎಂದಿನಾ ನೆಪ್ಪಿನಲಿ ಹಣೆಗಿಟ್ಟಳವಸರದಿ
ಬಳಿಕ ತಿದ್ದುವೆನೆನ್ನುತ.

ಮಹರಾಷ್ಟ್ರ ಮುಖುರವದು ಬಿಗಿದ ಮುತ್ತುಗಳಿಂದ
ಗಹಗಹಿಸಿ ಯಲುಗುತ್ತ ದೇವಿ ನಗಲು! ನಗಲು!
ಬಹು ಕೆಂಪಿನಾವೊಲೆ ತೆನುಗನ್ನು ಹೋಲುತಲಿ
ಮಿನುಗಿ ಮೃಗಶಿರನ ಹಳಿಯೆ!

ತಮಿಳು ಕಂಠಿಯ ಕೀಲನಮಿತ ಪ್ರೇಮದಲೊತ್ತಿ
ರಮಣಿ ಯುಳಿದಾಭರಣಗಳ ಧರಿಸೆ
ಉಡಿಗೆ ತೊಡಿಗೆಗಳೆಲ್ಲ ಪಡೆಯುತಿರೆ ತಿಳಿ ಹೊಳಪ
ಸಿರಿ ಮೈಯ ತೇಜದಿಂದ

ಸಿಂಗರವು ಮುಗಿಯಿತಿದು ಮುಂಬೆಳಗಿ ಬೆಳೆಯುತಿದೆ
ಅಂಗಾಂಗಳ ಕಾಂತಿ! ಇಂಬಾಯ್ತು ಉಡಿಗೆ ತೊಡಿಗೆ!
ಸಂಗಡಲೆ ತಿದ್ದುವೆನು ತಿಲಕವನು ಎನ್ನುತಲೆ
ಅರಸಿ! ರನ್ನ ಗನ್ನಡಿಯ!

ಬಲುದಿನದ ರತುನವಿದು ಚಿರಕಾಲವಾಯ್ತಿದನು
ತೆರೆದು ನೋಡಿಲ್ಲೆಂದು ಒಲಿದು ನೋಡುತ ರಮ್ಯೆ!
ಒರೆಸಿದಳು ಶರಗಲ್ಲಿ ಅಬ್ಬಬ ಬಲುಮಂಕು
ಮೊಬ್ಬಾಯ್ತು ಎನುತೆನುತಲೆ!

ಶರಗೆಳೆದು ಭಾರತಿಯು
ಒರೆಸುತ್ತ ನೋಡುತ್ತ
ಸಿರಿಗನಡಿ ಏತಕಿದು ಒಲಿಯದಿಹುದು!
ವರಪತಿಯ ಕಾಣಲಿಹೆ
ಸರಿ‌ಇಲ್ಲ! ಇದು ತಿಲಕ!
ಸಿರಿಗನಡ ವದನವನು ತೋರದಿಹುದು

ಚಿರದಿನದ ರತುನವಿದು
ಸಿರಿಗನಡ ಕನಡಿಯಿದು!
ಶೆರಗೆಳೆದು ಭಾರತಿಯು
ಒರೆಸುತ್ತ ನೋಡುತ್ತ!
ಸಿರಿಗನಡಿ! ಏತಕಿದು
ಮೊಗಛವಿಯ ತೋರದೆನುತ
ಹಿರಿಹೊಲಸ ನೊರಸುತ್ತ
ಮರುಗುತಿಹಳು!
ಮರು ಮರುಗುತಿಹಳು!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...