Home / ಕವನ / ಕವಿತೆ / ಹೊಳಲು

ಹೊಳಲು

ಚಂದಿರನು ನಡುಗಗನ ವೊಂದಿರಲು ಮೌಕ್ತಿಕದ
ಅಂದಣವದೆತ್ತಿರಲು ಅಂದವೆನೆ ಪರರೆಲ್ಲ
ಹಿಂದಣಾ ದಿನಕಿಂತ ಸಂಧಿಸಿದ ಈ ರಜನಿ
ಭಾರತದಿ ಬಂತು ಹೊಳಲು

ಚಂದಿರನು ತಂಬೆಳಕ ನಗುವಿಡಲು ಅಪಹಾಸ
ದಂದಣವನೆತ್ತಿರಲು ಲಗುಬಿಗಿಯ ಪರರಾಳು
ಮಂದಿಗಳು ತಿಳಿದೇಳಲಗೊ! ಯೋಗಿ ಕರೆಯುತಿರೆ
ಬಾರೆನುತ ಬಂತು ಹೊಳಲು

ಕೀಳಕೀಳಲಿ ಪುಟ್ಟಿ ಮೇಲೆ ಮೇಲೇರುತಲಿ
ಆಳುತಲಿ ಜನಮನವ ಶೂಲಕೊಡ್ಡುತ ಸುರಿಸಿ
ಬಾಳ ಜೀವನ ಜಲವನಾಲಿಯರಿಯದಲಳಿಯೆ
ಜನರಿಳಿದು ಬಂದ ಹೊಳಲು

ಕಾಳು ಕಡ್ಡಿಯ ತೂರಿ ಮೇಲೆ ಮೇಲರಿಸುತ
ನಾಳಿನಾ ನವಯುಗಕೆ ಮೇಲೆನಿಪ ಬೀಜಗಳ
ಹೂಳುವರು ಬರಲಾಗಿ ಕಾಲ ಬಂದಿದೆಯೆನುತ
ಜನಜನದ ನುಡಿಯ ಹೊಳಲು

ಇದು ವಹ್ನಿಗಿರಿ ಇದುವೆ ಮಳೆವಹ್ನಿ ಹೊಳೆವಹ್ನಿ!
ಇದುವುಕ್ಕಿ ಧರೆಯೆಲ್ಲ ತಳಮಳಿಸಿ ನಡುಗುತಿದೆ
ಅದೊ! ಸೊಕ್ಕಿದಾಭಾವ! ತಳಹದಿಯು ಕುಸಿಬಿತ್ತು!
ಮರಳುತಿಹ ಯುಗದ ಹೊಳಲು

ಇದು ಸಿಡಿಲು ಕಾರ್ಮೋಡ ಪ್ರಳಯ ಜಲಧಾರೆಯಿವು
ಇದು ಝರಿಯ ಜಲಧಾರೆ ಇಳೆಗಿಳಿವ ದೇವನದಿ!
ಅದೋ! ವಹ್ನಿ ಕಬ್ಬೊಗೆಯು ಅಳಿದನಿವು ಸಿಡಿದವವು
ಚರಕದರೆ ತಿರುಗೆ! ಹೊಳಲು

ವಿಷಘಳಿಗೆ ಪರಜನಕೆ ಮಧುಯೋಗ ಭಾರತಕೆ
ಹಸಿದು ಶಂಕರಿ ನಿಲ್ಲಲದು ಪ್ರಲಯ ಪರಜನಕೆ
ಬಸಿಯಲೆಂಧಕ ರುಧಿರವದುನೆಲಕೆ ಶ್ರೀ ಶಾಂತಿ
ಎನುತೆನುವ ನರರ ಹೊಳಲು

ಹಸುಳೆಯಂದದಿ ನಕ್ಕು ಮಧುರ ಭಾವವ ಬೀರಿ
ಹೊಸತೆರನ ಜಿಹ್ವೆಯಲಿ ಸುಧೆಯ ಜಾಹ್ನವಿಯುದಿಸೆ
ಹೊಸಯುಗದ ಗಂಧವಹನಿದೊ ಗಾಂಧಿ ಏಳುತಿಹ
ಎನುತೆನುವ ನಾಡ! ಹೊಳಲು

ಅಲ್ಲೋಲ ಕಲ್ಲೋಲ ಉದಧಿಗಳು ಎಚ್ಚೆತ್ತು!
ಎಲ್ಲೆಲ್ಲು ಸಲ್ಲಾಪ ಕುದಿವ ಮನದಾಶಯದ
ಹೊಲ್ಲೆ ಹದ ಸುಳಿವಿರದ! ಮಧುಯುಗವು ಮರಳುತಿರೆ
ಉಲ್ಲಾಸದೊರೆಯ ಹೊಳಲು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...