Home / ಲೇಖನ / ವಿಜ್ಞಾನ / ನಾವು ಎತ್ತರ ಏಕೆ ಬೆಳಯುವುದಿಲ್ಲ?

ನಾವು ಎತ್ತರ ಏಕೆ ಬೆಳಯುವುದಿಲ್ಲ?

ಭೌತಿಕವಾಗಿ ವಯಸ್ಸಾದಂತೆ ಬೆಳೆಯುತ್ತಲೇ ಹೋಗಿದ್ದರೆ ಈಗಿನ ಮನೆಗಳ ಬಾಗಿಲುಗಳು ೬೦-೭೦ ಅಡಿ ಎತ್ತರವಾಗಿರಬೇಗಿತ್ತು. ನಿಸರ್ಗದ-ದತ್ತವಾಗಿ ಮಾನವನ ಶರೀರದ ಬೆಳವಣಿಗೆಯ ನಿಯಂತ್ರಣವು ನಿಗದಿತ ವಯಸ್ಸಿಗೆ ನಿಂತು ಹೋಗುತ್ತದೆ. ಅತಿ ಕುಳ್ಳರಾಗಿ ಬೆಳೆದಿರುವ ಉದಾಹರಣೆಗಳು ಇವೆ.

ಆಗ ತಾನೆ ಜನಿಸಿದ ಶಿಶುಗಳು ಸಾಮಾನ್ಯವಾಗಿ ೫೦ ಸೆಂ.ಮೀ. ಉದ್ದವಿದ್ದರೆ ಮುಂದೆ ೨೦ ವರ್ಷಗಳಲ್ಲಿ ೧.೭ ಮೀಟರ್ ಬೆಳೆಯುತ್ತದೆ. ನಾವೇಕೆ ನಮ್ಮ ವಯಸ್ಸಿನ ಪರ್‍ಯಂತರ ಬೆಳಯುವುದಿಲ್ಲ? ಎಂಬ ಪ್ರಶ್ನೆ ಏಳದಿರದು. ಈ ಪ್ರಶ್ನೆಗೆ ಶರೀರ ವಿಜ್ಞಾನಿಗಳು ನಮ್ಮ ಶರೀರದಲ್ಲಿ ಬೆಳವಣಿಗೆಯನ್ನು ನಿಯಂತ್ರಿಸುವ “ಎಂಡೋಕೈನ್” ಗ್ರಂಥಗಳಿದ್ದು ಕುತ್ತಿಗೆಯಲ್ಲಿನ ಥೈರಾಯ್ಡ್‌ ಮಿದುಳಿಗೆ ಹೊಂದಿಕೊಂಡಿರುವ ಪಿಟ್ಯುಟರಿ, ಎದೆಯಲ್ಲಿ ಥೈಮಸ್ ಹಾಗೂ ಲೈಂಗಿಕ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳು ಮೂಳೆಯಲ್ಲಿನ ಗ್ರಂಥಿಗಳ ಬೆಳವಣಿಗೆ ಹತೋಟಿಯಲ್ಲಿಡುತ್ತವೆ. ಇವುಗಳ ಪ್ರಭಾವ ಹದ್ದು ಮೀರಿದರೆ ನಮ್ಮ ಕೈ ಕಾಲು ಭುಜ ಮುಂತಾದ ಅಂಗಗಳು ರಾಕ್ಷಸೋಪಾದಿಯಲ್ಲಿ ಬೆಳದು ಬಿಡುತ್ತವೆ. ಮತ್ತು ಇವು ಅಗತ್ಯಾನುಸಾರ ವರ್ತಿಸಿದ್ದರೂ ಮನುಷ್ಯ ಕುಳ್ಳಗಾಗುತ್ತಾನೆಂದು ವಿವರಣೆಗೊಡುತ್ತಾರೆ.

ಎಳೆಯತನದಲ್ಲಿ ಥೈಮಸ್ ಗ್ರಂಥಿಗಳ ಚಟುವಟಿಗೆ ತೀವ್ರವಾಗಿ ಸಾಗಿ ೧೩-೧೪ ರ ವಯಸ್ಸಿನಲ್ಲಿ ಕ್ಷೀಣಿಸುತ್ತವೆ. ನಂತರ ಲೈಂಗಿಕ ಗ್ರಂಥಿಗಳು ಕ್ರಿಯಾಶೀಲಗೊಳ್ಳುತ್ತವೆ. ಇದರ ಪರಿಣಾಮವಾಗಿ ವ್ಯಕ್ತಿಯ ಎತ್ತರ ೨೨ನೇ ವಯಸ್ಸಿನಲ್ಲಿ ಸ್ಥಿರಗೊಳ್ಳುತ್ತದೆ. ಒಂದು ವೇಳೆ ಲೈಂಗಿಕ ಗ್ರಂಥಿಗಳ ಉತ್ಪತ್ತಿ ಮೊದಲೇ ಆದರೆ ಎತ್ತರ ಬೆಳೆಯುವಲ್ಲಿ ಆಗುವುದಿಲ್ಲ. ಒಂದು ವೇಳೆ ಈ ಲೈಂಗಿಕ ಗ್ರಂಥಿಗಳು ಬಹಳ ತಡವಾಗಿ ಸೃಜಿಸಲಾರಂಭಿಸಿದರೆ ವ್ಯಕ್ತಿಗಳು ಬೃಹದಾಕಾರವಾದ ಎತ್ತರಕ್ಕೆ ಬೆಳೆಯುತ್ತಾರೆ. (ಥೈಮಸ್‌ನಿಂದಾಗಿ) ಒಂದು ಸಮೀಕ್ಷೆಯಂತೆ ೨೫ ನೇ ವಯಸ್ಸಿನ ನಂತರವೂ ವ್ಯಕ್ತಿಗಳು ಎತ್ತರ ಅತ್ಯಲ್ಪ ಪ್ರಮಾಣದಲ್ಲಿ ಏರುಮುಖವನ್ನೇ ಕಾಣುತ್ತದೆ. ಗರಿಷ್ಠ ಎತ್ತರವನ್ನು ನಾವು ತಲುಪುವುದು ೩೫-೪೦ ರ ಪ್ರಾಯದಲ್ಲಿ ವೈಶಿಷ್ಯವೆಂದರೆ ೪೦ ವರ್ಷ ವಯಸ್ಸಿನ ನಂತರ ನಾವು ಹತ್ತು ವರ್ಷಗಳಿಗೆ ೧೨ ಮಿಲಿ ಮೀಟರ್‌ನಂತೆ ಕುಳ್ಳರಾಗುತ್ತೇವೆ. ಕೀಲುಗಳಲ್ಲಿರುವ ‘ಕಾರ್ಟರೇಜ್’ ಎಂಬ ವಸ್ತು ಕುಗ್ಗುವುದೇ ಈ ನ್ಯೂನ್ಯತೆಗೆ ಕಾರಣವಾಗಿದೆ ಎಂದು ಶರೀರ ವಿಜ್ಞಾನಿಗಳ ಅಭಿಪ್ರಾಯವಾಗಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...