Home / ಲೇಖನ / ವಿಜ್ಞಾನ / ಭವಿಷ್ಯದ ಮಾರಕ ರೋಗ ನಿರೋಧಕ ಶಕ್ತಿ: ಎದೆ ಹಾಲು

ಭವಿಷ್ಯದ ಮಾರಕ ರೋಗ ನಿರೋಧಕ ಶಕ್ತಿ: ಎದೆ ಹಾಲು

ಜಗತ್ತಿನಲ್ಲಿರುವ ಕೋಟ್ಯಾಂತರ ತಾಯಿಯರಿಗೆ ವಾಸ್ತವತೆಯ ಅರ್ಥವನ್ನು ಮಾಡಿಕೊಡಲೆಂದೇ “ವಿಶ್ವಸ್ತನಪಾನ” ಪೋಷಕ ಸಂಸ್ಥೆ ಜನ್ಮತಾಳಿದೆ. ವಿಶ್ವಾದಾದ್ಯಂತ ಇದರ ಶಾಖೆ, ಉಪಶಾಖೆಗಳು ಕಾರ್ಯನಿರ್ವಹಿಸುತ್ತಲಿವೆ. ಬಾಟಲಿ ಹಾಲಿನ ಬಗೆಗೆ ಬೆಳದಿರುವ ಮೋಹವನ್ನು, ಎದೆಹಾಲಿನ ಬಗೆಗೆ ಬೆಳದಿರುವ ಮೌಢ್ಯವನ್ನು ವಿಜ್ಞಾನವೆಂಬ ಹರಿತವಾದ ಕತ್ತರಿಯಿಂದ ಕತ್ತರಿಸಿ ಹಾಕಲು ಈ ಸಂಸ್ಥೆ ನಿರಂತರ ಸೇವೆ ಸಲ್ಲಿಸುತ್ತಲ್ಲಿದೆ. ಕೃತಕವಾದ ಡಬ್ಬಿಹಾಲನ್ನು ತಿರಸ್ಕರಿಸಿ ಕೇವಲ ತಾಯಿಯ ಹಾಲನ್ನೆ ಮಗುವಿಗೆ ಉಣಬಡಿಸಲು ಶ್ರಮಿಸುತ್ತಿರುವ ಆಸ್ಪತ್ರೆ, ಇತರ ಸಂಸ್ಥೆಗಳಿಗೆ (ಸ್ತನ ಪಾನ ಉತ್ತೇಜಕ ಸಂಸ್ಥೆಗಳು) ಮಕ್ಕಳ ಸ್ನೇಹ ಪರ (Baby Friendly) ಆಸ್ಪತ್ರೆ ಎಂಬ ಪ್ರಮಾಣಪತ್ರದ ಬಿರುದನ್ನು ವಿಶ್ವಮಟ್ಟದ ಸಂಸ್ಥೆ ನೀಡುತ್ತದೆ.

ತಾಯಿಯ ಹಾಲು ಜಗತ್ತಿನಲ್ಲಿಯೇ ಶ್ರೇಷ್ಠವಾದ ಮಕ್ಕಳಿಗೆ ಪೋಷಕಾಂಶ ನೀಡುವ ವಸ್ತುವಾಗಿದೆ. ಮಗುವಿನ ಸಮಸ್ತ ಪೋಷಕಾಂಶಗಳ ಖಣಜ. ನವಜಾತ ಶಿಶುವಿಗೆ ಮೊದಲು ರೋಗ ನಿರೋಧಕ ಶಕ್ತಿ ಸಂಚಯವಾಗುವುದು, ತಾಯಿಯ ಎದೆ ಹಾಲಿನಿಂದ ಮಾತ್ರ ಹೆರಿಗೆಯಾದ ನಂತರ ತಾಯಿಯ ಎದೆಯಲ್ಲಿ ವಸರುವ ಗಟ್ಟಿಹಾಲು (ಕೊಲೆಸ್ಟರಂ) ರೋಗ ನಿರೋಧಕ ಶಕ್ತಿಯ ಭಂಡಾರವೆನಿಸಿದೆ. ಈ ಗಟ್ಟಿ ಹಾಲು ‘ಗೀಬು’ ಎಂದು ಚಲ್ಲುವ ಕೆಟ್ಟ ಸಂಪ್ರದಾಯ ಬಂದಿದೆ. ಮಗು ಹುಟ್ಟಿದ ೬ ಗಂಟೆಯೊಳಗೆ ಮಗುವಿಗೆ ಎದೆ ಚೀಪಿಸಲು ಬಿಡಬೇಕು. ತಾಯಿಯ ಹಾಲನ್ನೇ ಕುಡಿದು ಬೆಳೆದ ಮಗು ದೊಡ್ಡದಾದಾಗ ಬಿ.ಪಿ. ಬೊಜ್ಜು, ಹೃದಯಾಫಾತ, ಸಕ್ಕರೆಕಾಯಿಲೆ, ಕ್ಯಾನ್ಸ್‌ರ್ ಮುಂತಾದ ಮಾರಕ ರೋಗಗಳಿಗೆ ತುತ್ತಾಗುವುದು ಅತಿವಿರಳವೆಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಧೂಮಪಾನ, ಮಧ್ಯಪಾನ, ಲೈಂಗಿಕ ಅಪರಾಧ, ಮಾಧಕ ಔಷಧಿಗಳ ಚಟ ಮುಂತಾದ ಸಮಾಜ ವಿರೋಧಿ ನಡವಳಿಕೆಗಳು ಎದೆ ಹಾಲು ಕುಡಿದು ಬೆಳೆದ ಮಕ್ಕಳಲ್ಲಿ ಕಡಿಮೆ. ಮಗು ತಾಯಿಯ ಹಾಲನ್ನು ಚೀಪಿ ಚೀಪಿ ಹೀರುವಾಗ ಮಗುವಿನ ಮುಖಕ್ಕೆ ದೊರೆಯುವ ವ್ಯಾಯಾಮದಿಂದಾಗಿ ಮಗುವಿನ ಮುಖ ಸುಂದರವಾಗಿ ರೂಪುಗೊಳ್ಳುತ್ತದೆ. ತಾಯಿಯ ಎದೆಹಾಲು ಕುಡಿದು ಬೆಳೆದ ಮಕ್ಕಳಿಗೆ ಬೇಧಿ, ಶೀತ, ಜ್ವರ, ನ್ಯೂಮೋನಿಯಾ, ಕ್ಷಯಾ ಹಾಗೂ ಜಂತು ರೋಗಗಳು ಕಡಿಮೆ ಪ್ರಮಾಣದಲ್ಲಿರುತ್ತದೆ.

ಗರ್ಭಿಣಿಯಾಗಿದ್ದಾಗ ಹಿಗ್ಗಿದ್ದ ಗರ್ಭಕೋಶ ಬೇಗನೇ ಸುಸ್ಥಿತಿಗೆ ಮರಳಲು ಸ್ತನ ಪಾನ ಸೂಕ್ತ ಪರಿಹಾರ. ತಾಯಿಗೆ ಇದರಿಂದ ಸ್ತನದ ಕ್ಯಾನರ್ ಬರುವುದಿಲ್ಲ. ಸೌಂದರ್ಯ ಕ್ಷೀಣಿಸುತ್ತದೆ ಎಂಬ ತಪ್ಪು ಕಲ್ಬನೆಯಿಂದ ಬಹಳೇ ಮಹಿಳೆಯರು ಮಕ್ಕಳಿಗೆ ಹಾಲು ಕುಡಿಸಲು ಹಿಂಜರಿಯುತ್ತಾರೆ. ವಾಸ್ತವವಾಗಿ ಸ್ತನ ಪಾನದಿಂದ ತಾಯಿಯ ದೇಹದ ಕೊಬ್ಬು ಕರಗಿ ಸೌಂದರ್ಯ ಅಧಿಕಗೊಳ್ಳುತ್ತದೆ. ಈ ಕಾರಣವಾಗಿ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕೆಂಬ ಆಕಾಂಕ್ಷೆಹೊಂದಿದ ಮಕ್ಕಳ ತಾಯಂದಿರು ಹೆಚ್ಚು ಹೆಚ್ಚು ಮಕ್ಕಳಿಗೆ ಸ್ತನ ಪಾನ, ಮಾಡಿಸುತ್ತಿರಬೇಕು. ಇದು ನಿಸರ್ಗದ ಸತ್ಯ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...