Home / ಲೇಖನ / ವಿಜ್ಞಾನ / ಭವಿಷ್ಯದ ಮಾರಕ ರೋಗ ನಿರೋಧಕ ಶಕ್ತಿ: ಎದೆ ಹಾಲು

ಭವಿಷ್ಯದ ಮಾರಕ ರೋಗ ನಿರೋಧಕ ಶಕ್ತಿ: ಎದೆ ಹಾಲು

ಜಗತ್ತಿನಲ್ಲಿರುವ ಕೋಟ್ಯಾಂತರ ತಾಯಿಯರಿಗೆ ವಾಸ್ತವತೆಯ ಅರ್ಥವನ್ನು ಮಾಡಿಕೊಡಲೆಂದೇ “ವಿಶ್ವಸ್ತನಪಾನ” ಪೋಷಕ ಸಂಸ್ಥೆ ಜನ್ಮತಾಳಿದೆ. ವಿಶ್ವಾದಾದ್ಯಂತ ಇದರ ಶಾಖೆ, ಉಪಶಾಖೆಗಳು ಕಾರ್ಯನಿರ್ವಹಿಸುತ್ತಲಿವೆ. ಬಾಟಲಿ ಹಾಲಿನ ಬಗೆಗೆ ಬೆಳದಿರುವ ಮೋಹವನ್ನು, ಎದೆಹಾಲಿನ ಬಗೆಗೆ ಬೆಳದಿರುವ ಮೌಢ್ಯವನ್ನು ವಿಜ್ಞಾನವೆಂಬ ಹರಿತವಾದ ಕತ್ತರಿಯಿಂದ ಕತ್ತರಿಸಿ ಹಾಕಲು ಈ ಸಂಸ್ಥೆ ನಿರಂತರ ಸೇವೆ ಸಲ್ಲಿಸುತ್ತಲ್ಲಿದೆ. ಕೃತಕವಾದ ಡಬ್ಬಿಹಾಲನ್ನು ತಿರಸ್ಕರಿಸಿ ಕೇವಲ ತಾಯಿಯ ಹಾಲನ್ನೆ ಮಗುವಿಗೆ ಉಣಬಡಿಸಲು ಶ್ರಮಿಸುತ್ತಿರುವ ಆಸ್ಪತ್ರೆ, ಇತರ ಸಂಸ್ಥೆಗಳಿಗೆ (ಸ್ತನ ಪಾನ ಉತ್ತೇಜಕ ಸಂಸ್ಥೆಗಳು) ಮಕ್ಕಳ ಸ್ನೇಹ ಪರ (Baby Friendly) ಆಸ್ಪತ್ರೆ ಎಂಬ ಪ್ರಮಾಣಪತ್ರದ ಬಿರುದನ್ನು ವಿಶ್ವಮಟ್ಟದ ಸಂಸ್ಥೆ ನೀಡುತ್ತದೆ.

ತಾಯಿಯ ಹಾಲು ಜಗತ್ತಿನಲ್ಲಿಯೇ ಶ್ರೇಷ್ಠವಾದ ಮಕ್ಕಳಿಗೆ ಪೋಷಕಾಂಶ ನೀಡುವ ವಸ್ತುವಾಗಿದೆ. ಮಗುವಿನ ಸಮಸ್ತ ಪೋಷಕಾಂಶಗಳ ಖಣಜ. ನವಜಾತ ಶಿಶುವಿಗೆ ಮೊದಲು ರೋಗ ನಿರೋಧಕ ಶಕ್ತಿ ಸಂಚಯವಾಗುವುದು, ತಾಯಿಯ ಎದೆ ಹಾಲಿನಿಂದ ಮಾತ್ರ ಹೆರಿಗೆಯಾದ ನಂತರ ತಾಯಿಯ ಎದೆಯಲ್ಲಿ ವಸರುವ ಗಟ್ಟಿಹಾಲು (ಕೊಲೆಸ್ಟರಂ) ರೋಗ ನಿರೋಧಕ ಶಕ್ತಿಯ ಭಂಡಾರವೆನಿಸಿದೆ. ಈ ಗಟ್ಟಿ ಹಾಲು ‘ಗೀಬು’ ಎಂದು ಚಲ್ಲುವ ಕೆಟ್ಟ ಸಂಪ್ರದಾಯ ಬಂದಿದೆ. ಮಗು ಹುಟ್ಟಿದ ೬ ಗಂಟೆಯೊಳಗೆ ಮಗುವಿಗೆ ಎದೆ ಚೀಪಿಸಲು ಬಿಡಬೇಕು. ತಾಯಿಯ ಹಾಲನ್ನೇ ಕುಡಿದು ಬೆಳೆದ ಮಗು ದೊಡ್ಡದಾದಾಗ ಬಿ.ಪಿ. ಬೊಜ್ಜು, ಹೃದಯಾಫಾತ, ಸಕ್ಕರೆಕಾಯಿಲೆ, ಕ್ಯಾನ್ಸ್‌ರ್ ಮುಂತಾದ ಮಾರಕ ರೋಗಗಳಿಗೆ ತುತ್ತಾಗುವುದು ಅತಿವಿರಳವೆಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಧೂಮಪಾನ, ಮಧ್ಯಪಾನ, ಲೈಂಗಿಕ ಅಪರಾಧ, ಮಾಧಕ ಔಷಧಿಗಳ ಚಟ ಮುಂತಾದ ಸಮಾಜ ವಿರೋಧಿ ನಡವಳಿಕೆಗಳು ಎದೆ ಹಾಲು ಕುಡಿದು ಬೆಳೆದ ಮಕ್ಕಳಲ್ಲಿ ಕಡಿಮೆ. ಮಗು ತಾಯಿಯ ಹಾಲನ್ನು ಚೀಪಿ ಚೀಪಿ ಹೀರುವಾಗ ಮಗುವಿನ ಮುಖಕ್ಕೆ ದೊರೆಯುವ ವ್ಯಾಯಾಮದಿಂದಾಗಿ ಮಗುವಿನ ಮುಖ ಸುಂದರವಾಗಿ ರೂಪುಗೊಳ್ಳುತ್ತದೆ. ತಾಯಿಯ ಎದೆಹಾಲು ಕುಡಿದು ಬೆಳೆದ ಮಕ್ಕಳಿಗೆ ಬೇಧಿ, ಶೀತ, ಜ್ವರ, ನ್ಯೂಮೋನಿಯಾ, ಕ್ಷಯಾ ಹಾಗೂ ಜಂತು ರೋಗಗಳು ಕಡಿಮೆ ಪ್ರಮಾಣದಲ್ಲಿರುತ್ತದೆ.

ಗರ್ಭಿಣಿಯಾಗಿದ್ದಾಗ ಹಿಗ್ಗಿದ್ದ ಗರ್ಭಕೋಶ ಬೇಗನೇ ಸುಸ್ಥಿತಿಗೆ ಮರಳಲು ಸ್ತನ ಪಾನ ಸೂಕ್ತ ಪರಿಹಾರ. ತಾಯಿಗೆ ಇದರಿಂದ ಸ್ತನದ ಕ್ಯಾನರ್ ಬರುವುದಿಲ್ಲ. ಸೌಂದರ್ಯ ಕ್ಷೀಣಿಸುತ್ತದೆ ಎಂಬ ತಪ್ಪು ಕಲ್ಬನೆಯಿಂದ ಬಹಳೇ ಮಹಿಳೆಯರು ಮಕ್ಕಳಿಗೆ ಹಾಲು ಕುಡಿಸಲು ಹಿಂಜರಿಯುತ್ತಾರೆ. ವಾಸ್ತವವಾಗಿ ಸ್ತನ ಪಾನದಿಂದ ತಾಯಿಯ ದೇಹದ ಕೊಬ್ಬು ಕರಗಿ ಸೌಂದರ್ಯ ಅಧಿಕಗೊಳ್ಳುತ್ತದೆ. ಈ ಕಾರಣವಾಗಿ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕೆಂಬ ಆಕಾಂಕ್ಷೆಹೊಂದಿದ ಮಕ್ಕಳ ತಾಯಂದಿರು ಹೆಚ್ಚು ಹೆಚ್ಚು ಮಕ್ಕಳಿಗೆ ಸ್ತನ ಪಾನ, ಮಾಡಿಸುತ್ತಿರಬೇಕು. ಇದು ನಿಸರ್ಗದ ಸತ್ಯ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...