Home / ಲೇಖನ / ವಿಜ್ಞಾನ / ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಮಹಾತ್ಮ ಗಾಂಧೀಜಿಯವರು ಆಡಿನ ಹಾಲನ್ನು ಕುಡಿಯುತ್ತ ಆದರ್ಶವಾಗಿ ಬಾಳಿದ ಚರಿತ್ರೆಯನ್ನು ಓದಲಾಗಿದೆ. ಆಡಿನ ಹಾಲಿನಲ್ಲಿರುವ ಅನೇಕ ಮಹಾತ್ಮೆಗಳು ಆರೋಗ್ಯಕ್ಕೆ ಪುಷ್ಟಿದಾಯಕವೆಂದೇ ಮಹಾತ್ಮರು ಬಳಸಿದ್ದು ಸತ್ಯದ ಸಂಗತಿ. ಈಗ ಪ್ರಸ್ತುತ ಆಡಿನ ಹಾಲಿಗೆ ನೇರವಾಗಿ ಬರುವುದಾದರೆ ಈ ಹಾಲಿನಲ್ಲಿ ಒಂದು ವಿಶೇಷವಾದ ಪ್ರೋಟಿನ್ ಇದೆ. ಇದು ಬ್ಯಾಕ್ಟೀರಿಯಾಗಳಿಂದ ಬರುವ ರೋಗಗಳನ್ನು ತಡೆಯುತ್ತದೆ. ಆಡಿನ ಹಾಲಿನಲ್ಲಿ ‘ಲ್ಯಕ್ಟೋಪೆರಾಕಿಸಡೇಜ’ ನ್ನೂ ಬ್ಯಾಕ್ಟೀರಿಯಾ ಕಾರಣದಿಂದ ಉಂಟಾಗುವ ರೋಗಗಳಾದ ಹೈಜಾ, ಟೈಪಾಯಿಡಾ, ನಿಮೋನಿಯಾ ಹೈಸ್ಟ್ರೋ, ಅತಿಸಾರ ಮತ್ತು ಪುಡ್ ಪ್ಯಾ ನಿಂಗಿನ ವಿರುದ್ಧ ಹೋರಾಡುವ ಪ್ರಭಾವಶಾಲಿ ಆಸ್ತ್ರವೆಂದು ಸಂಶೋಧಕರು ಹೇಳುತ್ತಾರೆ.

ಕೊಟ್ಟಾಯಂನಲ್ಲಿರುವ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಸಂಶೋಧಕರು ಆಡಿನ ಹಾಲಿನಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕಂಡು ಹಿಡಿದಿದ್ದಾರೆ. ಯಾವ ದುರ್ಬಲ ರೋಗಿಗಳಿಗೆ ಔಷಧಿಗಳು ಪಚನವಾಗುವದಿಲ್ಲವೋ ಅಂಥವರ ಶರೀರದೊಳಕ್ಕೆ ಔಷಧಿಯನ್ನು ತಲುಪಿಸಲು ವೈದ್ಯರು ಈ ವಿಶೇಷ ಮತ್ತು ಉಪಯುಕ್ತ ಪದ್ಧತಿಯನ್ನು ಕಂಡು ಹಿಡಿದಿದ್ದಆರೆ. ವೈದ್ಯರು ಆಡಿನ ಮೇವಿನಲ್ಲಿ ಕೆಲವು ಗಿಡ ಮೂಲಕೆ ಭಸ್ಮಗಳನ್ನು ಬೆರೆಸಿ ತಿನ್ನಿಸುತ್ತಾರೆ. ಮೂರನೆ ದಿನದಿಂದ ಆಡಿನ ಹಾಲಿನಲ್ಲಿ ಆ ಔಷಧಿಯ ಗುಣಗಳು ಕಂಡು ಬರುತ್ತವೆ. ಔಷಧಿಯ ಗುಪ್ತ ಗಾಮಾನಿಶಕ್ತಿಯು ಆಡಿನ ಜೀವಸತ್ವದೊಂದಿಗೆ ಸಮೀಕರಣಗೊಂಡಿರುತ್ತದೆ. ಕಠಿಣಶಕ್ತಿಯನ್ನು ಸಹಿಸಲು ಸಾಧ್ಯವಾಗುತ್ತದೆ.

ಆಡಿನ ಹಾಲು ಕಂಡರೆ ಸಿಂಡರಿಸಿಕೊಳ್ಳುವ, ವಾಸನೆಯನ್ನೂ ಕಂಡು ದೂರ ಹೋಗುವ ಜನ ವೈಜ್ಞಾನಿಕವಾಗಿ ಈ ಸಂಶೋಧನೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...