Home / ಲೇಖನ / ವಿಜ್ಞಾನ / ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ “ಎಸ್ಕಾರ್ಬಿಕ್ ಆಮ್ಲ” (ವಿಟಾಮಿನ್-ಸಿ) ಕಡಿಮೆಯಾಗುವುದು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಸೀಸದಿಂದ ಕೂಡಿದ ಧೂಳು, ಸೀಸದಿಂದ ಕೂಡಿದ ಪೆಂಟ್‌ಗಳು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸುತ್ತದೆ. ವೈದ್ಯಕೀಯ ಪ್ರಯೋಗವೊಂದು ವಿಟಾಮಿನ್ – ಸಿ ಮತ್ತು ರಕ್ತದಲ್ಲಿರುವ ಸೀಸದ ಪ್ರಮಾಣದ ಸಂಬಂಧವನ್ನು ದೃಢಗೂಳಿಸಿದೆ. ಆದರೂ 1000 mg ವಿಟಾಮಿನ್-ಸಿಯು, ಧೂಮಪಾನಿಗಳ ರಕ್ತದಲ್ಲಿರುವ ಸೀಸದ ಪ್ರಮಾಣವನ್ನು ಕಡಿಮೆಗೊಳಿಸುತ್ತ ಹೋಗುತ್ತದೆ. ಧೂಮಪಾನವು ವಿಟಾಮಿನ್ ಸಿಯು ಜೈವಿಕ ವಿಭಜನೆಯನ್ನು ಅಧಿಕಗೊಳಿಸವದೇ ಹೆಚ್ಚು, ಇದರಿಂದ ಸೀಸದ ಪ್ರಮಾಣವು ದೇಹ ಸೇರುವುದೆಂದು ಸಂಶೋಧನೆಗಳಿಂದ ದೃಢಪಟ್ಟಿದೆ.

ಸೀಸದ ಪ್ರಮಾಣವು ದೇಹದಲ್ಲಿ ಹೆಚ್ಚುವುದು ಅನಾರೋಗ್ಯಕ್ಕೆ ಪ್ರಮುಖ ಕಾರಣವಾಗಿ ತಲೆನೋವು, ಅನೀಮಿಯಾ, ನೆನಪಿನ ಶಕ್ತಿಕಡಿಮೆಗೊಳಿಸುವಿಕೆ, ಕಿಡ್ನಿ-ರೋಗ, ಹೊಟ್ಟೆ ನೋವು ಮುಂತಾದವುಗಳು ಕಾಣಸಿಕೊಳ್ಳುವ ಸಾಧ್ಯತೆಗಳಿವೆ. ಮಾನವನಲ್ಲಿ ಕೆಲವು ಸಸ್ತನಿಗಳಂತೆ ವಿಟಾಮಿನ್ ‘ಸಿ’ ದೇಹದಲ್ಲಿಯೇ ಉತ್ಪತ್ತಿಯಾಗುವುದಿಲ್ಲ. ಇದು ಆಹಾರದಿಂದಲೇ ಲಭ್ಯವಾಗುತ್ತದೆ. ಧೂಮಪಾನಿಗಳಲ್ಲಿ ೬೦೦ ಮಿ. ಗ್ರಾಂ ಧೂಮಪಾನವಮ್ನ ಸೇವಿಸಿದಾಗ ೧೦೦ ಗ್ರಾಂ ವಿಟಾಮಿನ್ ಸಿ, ಅನ್ನು ಪ್ರತಿದಿನ ತೆಗೆದುಕೊಳ್ಳಬೇಕಾಗುತ್ತದೆ. (ಅದನ್ನು ಆರ್.ಡಿ ಎ. ಅಥವಾ ರೆಕಮಂಡೆಡ್ ಡೈಲಿ ಎಲಿವನ್ಸ್ ಎನ್ನುತ್ತಾರೆ) ಮಕ್ಕಳಿಗೆ ದಿನವೊಂದಕ್ಕೆ ೪೫ ಮಿ.ಗ್ರಾಂ. ವಿಟಾಮಿನ್ ‘ಸಿ’ ಆರೋಗ್ಯಕ್ಕೆ ಒಳ್ಳೆಯದು. ಸಮಗಾತ್ರದ ಕಿತ್ತಳೆ ಹಣ್ಣು ೬೦ ರಿಂದ ೮೦ ಮಿ. ಗ್ರಾ. ವಿಟಾಮಿನ್ ‘ಸಿ’ ಅನ್ನು ಹೊಂದಿರುತ್ತದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...