Home / ಲೇಖನ / ವಿಜ್ಞಾನ / ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ಯಾವುದೆಂಬುಂದನ್ನು ತಿಳಿದರೆ ಅದರ ಹುಟ್ಟನ್ನು ಅಡಗಿಸಬಹುದು ಅಥವಾ ಮುನ್ನಚ್ಚರಿಕೆಯ ಕ್ರಮವನ್ನು ಅನುಸರಿಸಿ ಯಾವುದೇ ಕಾಯಿಲೆ ಬರದಂತೆ ನೋಡಿಕೊಳ್ಳಬಹುದು. ಈ ವ್ಯವಸ್ಥೆ ಇದುವರೆಗೆ ಲಭ್ಯವಿರಲಿಲ್ಲ. ಆದರೆ ಸದ್ಯದಲ್ಲಿಯೇ ಮುಂಬರುವ ಕಾಯಿಲೆಯನ್ನು ಕಂಡು ಹಿಡಿಯಬಲ್ಲ ಕಂಪ್ಯೂಟರ್ ಚಿಪ್‌ಗಳು ಬರಲಿವೆ. ವ್ಯಕ್ತಿಯ ಅಂಗಾಂಗದ ಒಂದು ಕೋಶ ಒಳಗೆ ಇರುವ ಜೀನ್ ಅನ್ನು ಪರೀಕ್ಷಿಸಿ ಮುಂದೆ ಕ್ಯಾನ್ಸರ್ ಬರಲಿದೆಯೇ, ಹೃದ್ರೋಗಕ್ಕೆ ಒಳಗಾಗುವ ಸಾಧ್ಯತೆಗಳಿವೆಯೇ? ಎಂದು ಈ ಚಿಪ್‌ನಿಂದ ನಿಖರವಾಗಿ ಹೇಳಬಹುದು.

ನಿರ್ದಿಷ್ಟ ಅನುಕ್ರಮದ D.N.A.ಎಳೆಯನ್ನು ಕಂಪ್ಯೂಟರ್ ಭಾಷೆಯಲ್ಲಿ ಈ ಚಿಪ್‌ನಲ್ಲಿ ಬರೆದಿಡಲಾಗುತ್ತದೆ. ದೇಹದ ಕೋಶ ಒಂದರಲ್ಲಿ ಇರುವ ಡಿ.ಎನ್.ಎ ಎಳೆಯನ್ನು ಅದರೊಂದಿಗೆ ಹೋಲಿಸಿ ನೋಡಿ, ಯಾವ ಜೀನ್ ನ್ಯೂನ್ಯತೆಯಿಂದ ಕೂಡಿದೆ, ಎಂದು ಕ್ಷಣಾರ್ಧದೊಳಗೆ ಕಂಡು ಹಿಡಿದು ಈ ಚಿಪ್‌ನ ಸಹಾಯದಿಂದ ಯಾವ ಕಾಯಿಲೆ ಬರುತ್ತದೆಂದು ತಿಳಿಯಬಹುದು. ಒಂದು ವೇಳೆ ದೇಹದಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾದರೆ ಅದು ಯಾವ ಹಂತದಲ್ಲಿದೆ. ದೇಹದ ಯಾವೆಲ್ಲ ಭಾಗಕ್ಕೆ ಈಗಾಗಲೇ ಹರಡಿದೆ? ಎಂಬುವುದು ಕ್ಯಾನ್ಸರ್‌ಗೆ ತುತ್ತಾದ ಕೋಶಗಳು ಕಾಯಿಲೆಗಳು ಗಂಭೀರತೆಗನುಗುಣವಾಗಿ ಬೆಳಕನ್ನು ಹೊರ ಸೂಸುವ
ಮೂಲಕ ತಿಳಿಸುತ್ತವೆ.

ಎಷ್ಟೊ ಸಲ ಕೆಲವೊಂದು ಕಾಯಿಲೆಗಳು ವೈದ್ಯರು ಪರೀಕ್ಷಿಸಿ ನೋಡಿ ಮದ್ದುಕೊಟ್ಟರೂ ಗುಣವಾಗದಿರುವುದು ಉಂಟು. ವೈದ್ಯರ ಪ್ರಕಾರ ಇದು ಸಾಮಾನ್ಯ ಕಾಯಿಲೆ ಆಗಿರಬಹುದು. ಆದರೆ ಅದು ಗುಣವಾಗದಿರುವುಕ್ಕೂ ದೇಹದ ಜೀನ್‌ಗಳಿಗೂ ಪರಸ್ಪರ ಸಂಬಂಧ ಇರುತ್ತದೆ. ಯಾವ ಜೀನ್ ನ್ಯೂನ್ಯತೆಗೊಳಗಾಗಿದೆ ಎಂದು ನಿಖರವಾಗಿ ಪತ್ತೆಹಚ್ಚಿ ಅದಕ್ಕನುಗುಣವಾಗಿ ಸೂಕ್ತ ಚಿಕಿತ್ಸೆ ಕೊಟ್ಟಾಗಲಷ್ಟೇ ಆ ವ್ಯಕ್ತಿ ಗುಣಮುಖವಾಗಲು ಸಾಧ್ಯ ಎಂದು ಕಂಡು ಹಿಡಿಯಲಾಗಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...