Home / ಲೇಖನ / ವಿಜ್ಞಾನ / ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ಯಾವುದೆಂಬುಂದನ್ನು ತಿಳಿದರೆ ಅದರ ಹುಟ್ಟನ್ನು ಅಡಗಿಸಬಹುದು ಅಥವಾ ಮುನ್ನಚ್ಚರಿಕೆಯ ಕ್ರಮವನ್ನು ಅನುಸರಿಸಿ ಯಾವುದೇ ಕಾಯಿಲೆ ಬರದಂತೆ ನೋಡಿಕೊಳ್ಳಬಹುದು. ಈ ವ್ಯವಸ್ಥೆ ಇದುವರೆಗೆ ಲಭ್ಯವಿರಲಿಲ್ಲ. ಆದರೆ ಸದ್ಯದಲ್ಲಿಯೇ ಮುಂಬರುವ ಕಾಯಿಲೆಯನ್ನು ಕಂಡು ಹಿಡಿಯಬಲ್ಲ ಕಂಪ್ಯೂಟರ್ ಚಿಪ್‌ಗಳು ಬರಲಿವೆ. ವ್ಯಕ್ತಿಯ ಅಂಗಾಂಗದ ಒಂದು ಕೋಶ ಒಳಗೆ ಇರುವ ಜೀನ್ ಅನ್ನು ಪರೀಕ್ಷಿಸಿ ಮುಂದೆ ಕ್ಯಾನ್ಸರ್ ಬರಲಿದೆಯೇ, ಹೃದ್ರೋಗಕ್ಕೆ ಒಳಗಾಗುವ ಸಾಧ್ಯತೆಗಳಿವೆಯೇ? ಎಂದು ಈ ಚಿಪ್‌ನಿಂದ ನಿಖರವಾಗಿ ಹೇಳಬಹುದು.

ನಿರ್ದಿಷ್ಟ ಅನುಕ್ರಮದ D.N.A.ಎಳೆಯನ್ನು ಕಂಪ್ಯೂಟರ್ ಭಾಷೆಯಲ್ಲಿ ಈ ಚಿಪ್‌ನಲ್ಲಿ ಬರೆದಿಡಲಾಗುತ್ತದೆ. ದೇಹದ ಕೋಶ ಒಂದರಲ್ಲಿ ಇರುವ ಡಿ.ಎನ್.ಎ ಎಳೆಯನ್ನು ಅದರೊಂದಿಗೆ ಹೋಲಿಸಿ ನೋಡಿ, ಯಾವ ಜೀನ್ ನ್ಯೂನ್ಯತೆಯಿಂದ ಕೂಡಿದೆ, ಎಂದು ಕ್ಷಣಾರ್ಧದೊಳಗೆ ಕಂಡು ಹಿಡಿದು ಈ ಚಿಪ್‌ನ ಸಹಾಯದಿಂದ ಯಾವ ಕಾಯಿಲೆ ಬರುತ್ತದೆಂದು ತಿಳಿಯಬಹುದು. ಒಂದು ವೇಳೆ ದೇಹದಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾದರೆ ಅದು ಯಾವ ಹಂತದಲ್ಲಿದೆ. ದೇಹದ ಯಾವೆಲ್ಲ ಭಾಗಕ್ಕೆ ಈಗಾಗಲೇ ಹರಡಿದೆ? ಎಂಬುವುದು ಕ್ಯಾನ್ಸರ್‌ಗೆ ತುತ್ತಾದ ಕೋಶಗಳು ಕಾಯಿಲೆಗಳು ಗಂಭೀರತೆಗನುಗುಣವಾಗಿ ಬೆಳಕನ್ನು ಹೊರ ಸೂಸುವ
ಮೂಲಕ ತಿಳಿಸುತ್ತವೆ.

ಎಷ್ಟೊ ಸಲ ಕೆಲವೊಂದು ಕಾಯಿಲೆಗಳು ವೈದ್ಯರು ಪರೀಕ್ಷಿಸಿ ನೋಡಿ ಮದ್ದುಕೊಟ್ಟರೂ ಗುಣವಾಗದಿರುವುದು ಉಂಟು. ವೈದ್ಯರ ಪ್ರಕಾರ ಇದು ಸಾಮಾನ್ಯ ಕಾಯಿಲೆ ಆಗಿರಬಹುದು. ಆದರೆ ಅದು ಗುಣವಾಗದಿರುವುಕ್ಕೂ ದೇಹದ ಜೀನ್‌ಗಳಿಗೂ ಪರಸ್ಪರ ಸಂಬಂಧ ಇರುತ್ತದೆ. ಯಾವ ಜೀನ್ ನ್ಯೂನ್ಯತೆಗೊಳಗಾಗಿದೆ ಎಂದು ನಿಖರವಾಗಿ ಪತ್ತೆಹಚ್ಚಿ ಅದಕ್ಕನುಗುಣವಾಗಿ ಸೂಕ್ತ ಚಿಕಿತ್ಸೆ ಕೊಟ್ಟಾಗಲಷ್ಟೇ ಆ ವ್ಯಕ್ತಿ ಗುಣಮುಖವಾಗಲು ಸಾಧ್ಯ ಎಂದು ಕಂಡು ಹಿಡಿಯಲಾಗಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...