Home / ಲೇಖನ / ವಿಜ್ಞಾನ / ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ತಿಳಿಸುವ ಚಿಪ್

ಮುಂಬರುವ ಕಾಯಿಲೆ ಯಾವುದೆಂಬುಂದನ್ನು ತಿಳಿದರೆ ಅದರ ಹುಟ್ಟನ್ನು ಅಡಗಿಸಬಹುದು ಅಥವಾ ಮುನ್ನಚ್ಚರಿಕೆಯ ಕ್ರಮವನ್ನು ಅನುಸರಿಸಿ ಯಾವುದೇ ಕಾಯಿಲೆ ಬರದಂತೆ ನೋಡಿಕೊಳ್ಳಬಹುದು. ಈ ವ್ಯವಸ್ಥೆ ಇದುವರೆಗೆ ಲಭ್ಯವಿರಲಿಲ್ಲ. ಆದರೆ ಸದ್ಯದಲ್ಲಿಯೇ ಮುಂಬರುವ ಕಾಯಿಲೆಯನ್ನು ಕಂಡು ಹಿಡಿಯಬಲ್ಲ ಕಂಪ್ಯೂಟರ್ ಚಿಪ್‌ಗಳು ಬರಲಿವೆ. ವ್ಯಕ್ತಿಯ ಅಂಗಾಂಗದ ಒಂದು ಕೋಶ ಒಳಗೆ ಇರುವ ಜೀನ್ ಅನ್ನು ಪರೀಕ್ಷಿಸಿ ಮುಂದೆ ಕ್ಯಾನ್ಸರ್ ಬರಲಿದೆಯೇ, ಹೃದ್ರೋಗಕ್ಕೆ ಒಳಗಾಗುವ ಸಾಧ್ಯತೆಗಳಿವೆಯೇ? ಎಂದು ಈ ಚಿಪ್‌ನಿಂದ ನಿಖರವಾಗಿ ಹೇಳಬಹುದು.

ನಿರ್ದಿಷ್ಟ ಅನುಕ್ರಮದ D.N.A.ಎಳೆಯನ್ನು ಕಂಪ್ಯೂಟರ್ ಭಾಷೆಯಲ್ಲಿ ಈ ಚಿಪ್‌ನಲ್ಲಿ ಬರೆದಿಡಲಾಗುತ್ತದೆ. ದೇಹದ ಕೋಶ ಒಂದರಲ್ಲಿ ಇರುವ ಡಿ.ಎನ್.ಎ ಎಳೆಯನ್ನು ಅದರೊಂದಿಗೆ ಹೋಲಿಸಿ ನೋಡಿ, ಯಾವ ಜೀನ್ ನ್ಯೂನ್ಯತೆಯಿಂದ ಕೂಡಿದೆ, ಎಂದು ಕ್ಷಣಾರ್ಧದೊಳಗೆ ಕಂಡು ಹಿಡಿದು ಈ ಚಿಪ್‌ನ ಸಹಾಯದಿಂದ ಯಾವ ಕಾಯಿಲೆ ಬರುತ್ತದೆಂದು ತಿಳಿಯಬಹುದು. ಒಂದು ವೇಳೆ ದೇಹದಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾದರೆ ಅದು ಯಾವ ಹಂತದಲ್ಲಿದೆ. ದೇಹದ ಯಾವೆಲ್ಲ ಭಾಗಕ್ಕೆ ಈಗಾಗಲೇ ಹರಡಿದೆ? ಎಂಬುವುದು ಕ್ಯಾನ್ಸರ್‌ಗೆ ತುತ್ತಾದ ಕೋಶಗಳು ಕಾಯಿಲೆಗಳು ಗಂಭೀರತೆಗನುಗುಣವಾಗಿ ಬೆಳಕನ್ನು ಹೊರ ಸೂಸುವ
ಮೂಲಕ ತಿಳಿಸುತ್ತವೆ.

ಎಷ್ಟೊ ಸಲ ಕೆಲವೊಂದು ಕಾಯಿಲೆಗಳು ವೈದ್ಯರು ಪರೀಕ್ಷಿಸಿ ನೋಡಿ ಮದ್ದುಕೊಟ್ಟರೂ ಗುಣವಾಗದಿರುವುದು ಉಂಟು. ವೈದ್ಯರ ಪ್ರಕಾರ ಇದು ಸಾಮಾನ್ಯ ಕಾಯಿಲೆ ಆಗಿರಬಹುದು. ಆದರೆ ಅದು ಗುಣವಾಗದಿರುವುಕ್ಕೂ ದೇಹದ ಜೀನ್‌ಗಳಿಗೂ ಪರಸ್ಪರ ಸಂಬಂಧ ಇರುತ್ತದೆ. ಯಾವ ಜೀನ್ ನ್ಯೂನ್ಯತೆಗೊಳಗಾಗಿದೆ ಎಂದು ನಿಖರವಾಗಿ ಪತ್ತೆಹಚ್ಚಿ ಅದಕ್ಕನುಗುಣವಾಗಿ ಸೂಕ್ತ ಚಿಕಿತ್ಸೆ ಕೊಟ್ಟಾಗಲಷ್ಟೇ ಆ ವ್ಯಕ್ತಿ ಗುಣಮುಖವಾಗಲು ಸಾಧ್ಯ ಎಂದು ಕಂಡು ಹಿಡಿಯಲಾಗಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...