Home / ಲೇಖನ / ವಿಜ್ಞಾನ / ಜೈವಿಕ ತಂತ್ರಜ್ಞಾನದ ಮೈಲುಗಲ್ಲುಗಳು

ಜೈವಿಕ ತಂತ್ರಜ್ಞಾನದ ಮೈಲುಗಲ್ಲುಗಳು

ಪ್ರತಿಸೃಷ್ಟಿಯು ಇದುವರೆಗೂ ಅಸಾಧ್ಯವಾಗಿತ್ತು. ಇಂದು ಜೀವ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆದು ವಿಸ್ಮಯಕರ ಫಲಿತಾಂಶವನ್ನು ದೃಧೀಕರಿಸಿವೆ. ಹಿಂದೆ ನಾವು ಮಾಯಾ, ಮಂತ್ರ, ಮಾಟಗಳಿಂದ ಪ್ರತಿಸೃಷ್ಟಿಸುವ ಕಾದಂಬರಿಗಳನ್ನು ಓದಿದ್ದೇವೆ. ಅದೆಲ್ಲವೂ ಕಾಲ್ಪನಿಕವಾಗಿತ್ತು. ಅದರಿಂದ ಜೈವಿಕ ತಂತ್ರಜ್ಞಾನವು ಪ್ರತಿ ಸೃಷ್ಟಿಯಾಗುತ್ತಿದ್ದು, ಮಾನವನ ಪ್ರತಿಸೃಷ್ಟಿಯ ಸಂಶೋಧನೆಯು ತಾಜಾ ಹೆಜ್ಜೆಯಲ್ಲಿದೆ.

ಸ್ಕಾಟ್ಲ್‌ಂಡಿನ ಜೀವವಿಜ್ಞಾನಿ ಇಮಾನ್‌ವಿಲ್ಮಟ್ ಅವರು ಕುರಿಯೆ ಕೆಚ್ಚಲಿನಿಂದ ಬೆಳೆದ ಜೀವಕೋಶವನ್ನು ಹೊರೆತೆಗೆದು ಸೃಷ್ಟಿಸಿದ ಜೈವಿಕ ಅದ್ಭುತಗಳಲ್ಲಿ ಒಂದಾಗಿ ‘ಡಾಲಿ’ ಜೀವ ತೆಳೆದಿದೆ. ವಿಲ್ಮಟ್‌ರ ಕ್ಲೋನಿಂಗ್‌ನಲ್ಲಿ ಜೀವಕೋಶವನ್ನು ಭ್ರೂಣದಿಂದ ಪಡೆಯದೇ ಹೊಸ ಮೈಲುಗಲ್ಲಾಗಿದೆ. ಇದರಂತೆ ಅನೇಕ ಜೀವಿಗಳ ಪ್ರತಿಸೃಷ್ಟಿಯನ್ನು ಮಾಡಿದ ದಾಖಲೆಗಳು ಈದೀಗ ಬರುತ್ತಲಿವೆ.

ಮಾನವ ಜೀವಕೋಶ ಹೊಂದಿರುವ ಮಿಶ್ರತಳಿ ಕುರಿ ‘ಪಾಲಿ’ ಡಾಲಿಯನ್ನು ಸೃಷ್ಟಿಸಿದ ವಿಜ್ಞಾನಿಗಳೇ ಇದನ್ನು ಸೃಷ್ಟಿಸಿದ್ದಾರೆ. ಪಾಲಿ ಮೊದಲ ಮಿಶ್ರತಳಿಯ ಪ್ರತಿ ಕೃತಿಯಾಗಿದೆ. ಇಲ್ಲಿ ಮಾನವ ಜೀನಮ್ನ ಕುರಿಯ ಜೀವಾಂಶ ಮಧ್ಯ ನ್ಯೂಕ್ಲಿಯಸ್‌ಗೆ ಸೇರಿಸಲಾಗುತ್ತದೆ. ಇದನ್ನು ನಂತರ ಕುರಿಯ ಈ ಮೊದಲೇ ನ್ಯೂಕ್ಲಿಯಸ್ ತೆಗೆದು ಸಿದ್ಡಪಡಿಸಿಟ್ಟಿರುವ ಭ್ರೂಣಕ್ಕೆ ಅಳವಡಿಸುವುದು. ಆಗ ಮಿಶ್ರತಳಿಯ ಪ್ರತಿಕೃತಿಯುಳ್ಳ ಕುರಿ ಜೀವ ತಳೆಯಿತು. ಮಾನವ ವಂಶಾಣುವಿನಿಂದ ‘ಜೈನಿ’ ಯ ಸೃಷ್ಟಿ ಆಶ್ಚರ್ಯವಾದರೂ ಇದು ಹಂದಿಯ ಹೊಟ್ಟೆಯಲ್ಲಿ ಜನಿಸಿದೆ. ಇದರ ರಕ್ತದಲ್ಲಿ ಮಾನವನ ಗುಣಗಳು ಸೇರಿವೆ. ಇದರ ಕೆಚ್ಚಲಿನಿಂದ ಬರುವ ಹಾಲಿನಲ್ಲಿ
ಮಾನವ ಪ್ರೋಟೀನ್ ಇರುತ್ತದೆಂದರೆ ವಿಶೇಷವೆ. ಜೈವಿಕ ತಂತ್ರಜ್ಞಾನದಲ್ಲಿ ಇದು ಮತ್ತೊಂದು ಮೈಲುಗಲ್ಲಾಗಿದೆ. ಇದರಂತೆ ಎಡಿನ್ ಬರೋ ವಿಜ್ಞಾನಿಗಳು ವಿಶ್ವದಲ್ಲಿಯೇ ಮೊದಲ ಬಾರಿಗೆ ‘ದನದ ತದ್ರೂಪಿ’ ಯನ್ನು ಸೃಷ್ಟಿ ಮಾಡಿದರು. ೧೯೯೮ ಫೆಬ್ರುವರಿ ೧೬ ರಂದು ಜನಿಸಿದ ಇದಕ್ಕೆ ‘ಜೆಫರ್‍ಸನ್’ ನಾಮಕರಣ ಮಾಡಲಾಗಿದೆ. ಡಾಲಿಯನ್ನು ಸೃಷ್ಟಿಸಿದ ವಿಧಾನವನ್ನೇ ಈ ಜೆಫರ್‍ಸನ್‌ಗೆ ಬಳಸಲಾಗಿದೆ. ಈ ರೀತಿ ಪ್ರತಿಸೃಷ್ಟಿ ಮಾಡಿದ ದನಗಳು ಹೆಚ್ಚು ರಕ್ತದ ತೆಳುವಾದ ಅಂಶವನ್ನು ಉತ್ಪಾದಿಸುತ್ತವೆ. ಇದನ್ನು ಅಪಘಾತಕ್ಕೆ ಈಡಾದ ಸಂದರ್ಭದಲ್ಲಿ ಬಳಸಲಾಗುವುದು. ಮನುಷ್ಯನಿಗೆ ‘ರೋಸಿಯ’ ವಾಸ್ತವವಾಗಿ ಹಸುವೇ ಆಗಿದ್ದರೂ ಕರೆಯುವುದು ಮಾತ್ರ ಮನುಷ್ಯರ ಹಾಲನ್ನು! ರೋಸಿಯ ಹಾಲಿನ ರಾಸಾಯನಿಕ ಸಂಯೋಜನ ನಮ್ಮ ತಾಯಂದಿರ ಹಾಲಿನಂತೆಯೇ ಇರುತ್ತದೆ. ಹುಟ್ಟಿದಾಗಲೇ ತಾಯಿಯನ್ನು ಕಳೆದುಕೊಳ್ಳುವ ನತದೃಷ್ಟ ಶಿಶುಗಳ ಜೀವಗಳನ್ನು ಉಳಿಸಬಲ್ಲ ಅಮೃತವಾಗಬಲ್ಲದು ಈ ಹಾಲು.

ಹಿಂದೆ ತಿಳಿಸಿದ ಡಾಲಿಗೆ ೧೯೯೬ ರಲ್ಲಿ ‘ಬಾನಿ’ ಎಂಬ ತದ್ರೂಪಿ ಕುರಿಯು ಜನಿಸಿದೆ. ಈ ಡಾಲಿಯ ಜತೆ ವಾಸಿಸಲು ವಾಲ್ಫ್‌ಮೌಂಟನ್ ಟಗರನ್ನು ಬಿಡಲಾಗಿತ್ತು ಸಹಜ ವಿಧಾನದಲ್ಲಿ ಡಾಲಿ ಗರ್ಭಧರಿಸಿತು. ಇದರ ಗರ್ಭಧಾರಣೆ ಯಾವುದೇ ತೊಂದರೆಗಳಿಲ್ಲದೇ ಪೂರ್ಣ ಗೊಂಡಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...