Home / ಲೇಖನ / ವಿಜ್ಞಾನ / ಜೈವಿಕ ತಂತ್ರಜ್ಞಾನದ ಮೈಲುಗಲ್ಲುಗಳು

ಜೈವಿಕ ತಂತ್ರಜ್ಞಾನದ ಮೈಲುಗಲ್ಲುಗಳು

ಪ್ರತಿಸೃಷ್ಟಿಯು ಇದುವರೆಗೂ ಅಸಾಧ್ಯವಾಗಿತ್ತು. ಇಂದು ಜೀವ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆದು ವಿಸ್ಮಯಕರ ಫಲಿತಾಂಶವನ್ನು ದೃಧೀಕರಿಸಿವೆ. ಹಿಂದೆ ನಾವು ಮಾಯಾ, ಮಂತ್ರ, ಮಾಟಗಳಿಂದ ಪ್ರತಿಸೃಷ್ಟಿಸುವ ಕಾದಂಬರಿಗಳನ್ನು ಓದಿದ್ದೇವೆ. ಅದೆಲ್ಲವೂ ಕಾಲ್ಪನಿಕವಾಗಿತ್ತು. ಅದರಿಂದ ಜೈವಿಕ ತಂತ್ರಜ್ಞಾನವು ಪ್ರತಿ ಸೃಷ್ಟಿಯಾಗುತ್ತಿದ್ದು, ಮಾನವನ ಪ್ರತಿಸೃಷ್ಟಿಯ ಸಂಶೋಧನೆಯು ತಾಜಾ ಹೆಜ್ಜೆಯಲ್ಲಿದೆ.

ಸ್ಕಾಟ್ಲ್‌ಂಡಿನ ಜೀವವಿಜ್ಞಾನಿ ಇಮಾನ್‌ವಿಲ್ಮಟ್ ಅವರು ಕುರಿಯೆ ಕೆಚ್ಚಲಿನಿಂದ ಬೆಳೆದ ಜೀವಕೋಶವನ್ನು ಹೊರೆತೆಗೆದು ಸೃಷ್ಟಿಸಿದ ಜೈವಿಕ ಅದ್ಭುತಗಳಲ್ಲಿ ಒಂದಾಗಿ ‘ಡಾಲಿ’ ಜೀವ ತೆಳೆದಿದೆ. ವಿಲ್ಮಟ್‌ರ ಕ್ಲೋನಿಂಗ್‌ನಲ್ಲಿ ಜೀವಕೋಶವನ್ನು ಭ್ರೂಣದಿಂದ ಪಡೆಯದೇ ಹೊಸ ಮೈಲುಗಲ್ಲಾಗಿದೆ. ಇದರಂತೆ ಅನೇಕ ಜೀವಿಗಳ ಪ್ರತಿಸೃಷ್ಟಿಯನ್ನು ಮಾಡಿದ ದಾಖಲೆಗಳು ಈದೀಗ ಬರುತ್ತಲಿವೆ.

ಮಾನವ ಜೀವಕೋಶ ಹೊಂದಿರುವ ಮಿಶ್ರತಳಿ ಕುರಿ ‘ಪಾಲಿ’ ಡಾಲಿಯನ್ನು ಸೃಷ್ಟಿಸಿದ ವಿಜ್ಞಾನಿಗಳೇ ಇದನ್ನು ಸೃಷ್ಟಿಸಿದ್ದಾರೆ. ಪಾಲಿ ಮೊದಲ ಮಿಶ್ರತಳಿಯ ಪ್ರತಿ ಕೃತಿಯಾಗಿದೆ. ಇಲ್ಲಿ ಮಾನವ ಜೀನಮ್ನ ಕುರಿಯ ಜೀವಾಂಶ ಮಧ್ಯ ನ್ಯೂಕ್ಲಿಯಸ್‌ಗೆ ಸೇರಿಸಲಾಗುತ್ತದೆ. ಇದನ್ನು ನಂತರ ಕುರಿಯ ಈ ಮೊದಲೇ ನ್ಯೂಕ್ಲಿಯಸ್ ತೆಗೆದು ಸಿದ್ಡಪಡಿಸಿಟ್ಟಿರುವ ಭ್ರೂಣಕ್ಕೆ ಅಳವಡಿಸುವುದು. ಆಗ ಮಿಶ್ರತಳಿಯ ಪ್ರತಿಕೃತಿಯುಳ್ಳ ಕುರಿ ಜೀವ ತಳೆಯಿತು. ಮಾನವ ವಂಶಾಣುವಿನಿಂದ ‘ಜೈನಿ’ ಯ ಸೃಷ್ಟಿ ಆಶ್ಚರ್ಯವಾದರೂ ಇದು ಹಂದಿಯ ಹೊಟ್ಟೆಯಲ್ಲಿ ಜನಿಸಿದೆ. ಇದರ ರಕ್ತದಲ್ಲಿ ಮಾನವನ ಗುಣಗಳು ಸೇರಿವೆ. ಇದರ ಕೆಚ್ಚಲಿನಿಂದ ಬರುವ ಹಾಲಿನಲ್ಲಿ
ಮಾನವ ಪ್ರೋಟೀನ್ ಇರುತ್ತದೆಂದರೆ ವಿಶೇಷವೆ. ಜೈವಿಕ ತಂತ್ರಜ್ಞಾನದಲ್ಲಿ ಇದು ಮತ್ತೊಂದು ಮೈಲುಗಲ್ಲಾಗಿದೆ. ಇದರಂತೆ ಎಡಿನ್ ಬರೋ ವಿಜ್ಞಾನಿಗಳು ವಿಶ್ವದಲ್ಲಿಯೇ ಮೊದಲ ಬಾರಿಗೆ ‘ದನದ ತದ್ರೂಪಿ’ ಯನ್ನು ಸೃಷ್ಟಿ ಮಾಡಿದರು. ೧೯೯೮ ಫೆಬ್ರುವರಿ ೧೬ ರಂದು ಜನಿಸಿದ ಇದಕ್ಕೆ ‘ಜೆಫರ್‍ಸನ್’ ನಾಮಕರಣ ಮಾಡಲಾಗಿದೆ. ಡಾಲಿಯನ್ನು ಸೃಷ್ಟಿಸಿದ ವಿಧಾನವನ್ನೇ ಈ ಜೆಫರ್‍ಸನ್‌ಗೆ ಬಳಸಲಾಗಿದೆ. ಈ ರೀತಿ ಪ್ರತಿಸೃಷ್ಟಿ ಮಾಡಿದ ದನಗಳು ಹೆಚ್ಚು ರಕ್ತದ ತೆಳುವಾದ ಅಂಶವನ್ನು ಉತ್ಪಾದಿಸುತ್ತವೆ. ಇದನ್ನು ಅಪಘಾತಕ್ಕೆ ಈಡಾದ ಸಂದರ್ಭದಲ್ಲಿ ಬಳಸಲಾಗುವುದು. ಮನುಷ್ಯನಿಗೆ ‘ರೋಸಿಯ’ ವಾಸ್ತವವಾಗಿ ಹಸುವೇ ಆಗಿದ್ದರೂ ಕರೆಯುವುದು ಮಾತ್ರ ಮನುಷ್ಯರ ಹಾಲನ್ನು! ರೋಸಿಯ ಹಾಲಿನ ರಾಸಾಯನಿಕ ಸಂಯೋಜನ ನಮ್ಮ ತಾಯಂದಿರ ಹಾಲಿನಂತೆಯೇ ಇರುತ್ತದೆ. ಹುಟ್ಟಿದಾಗಲೇ ತಾಯಿಯನ್ನು ಕಳೆದುಕೊಳ್ಳುವ ನತದೃಷ್ಟ ಶಿಶುಗಳ ಜೀವಗಳನ್ನು ಉಳಿಸಬಲ್ಲ ಅಮೃತವಾಗಬಲ್ಲದು ಈ ಹಾಲು.

ಹಿಂದೆ ತಿಳಿಸಿದ ಡಾಲಿಗೆ ೧೯೯೬ ರಲ್ಲಿ ‘ಬಾನಿ’ ಎಂಬ ತದ್ರೂಪಿ ಕುರಿಯು ಜನಿಸಿದೆ. ಈ ಡಾಲಿಯ ಜತೆ ವಾಸಿಸಲು ವಾಲ್ಫ್‌ಮೌಂಟನ್ ಟಗರನ್ನು ಬಿಡಲಾಗಿತ್ತು ಸಹಜ ವಿಧಾನದಲ್ಲಿ ಡಾಲಿ ಗರ್ಭಧರಿಸಿತು. ಇದರ ಗರ್ಭಧಾರಣೆ ಯಾವುದೇ ತೊಂದರೆಗಳಿಲ್ಲದೇ ಪೂರ್ಣ ಗೊಂಡಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...