Home / ಲೇಖನ / ವಿಜ್ಞಾನ / ಅಂಗೈ ಆಳತೆಯೆ ವಿಮಾನಗಳು!

ಅಂಗೈ ಆಳತೆಯೆ ವಿಮಾನಗಳು!

ಅಂಗೈ ಅಳತೆಯ ವಿಮಾನಗಳನ್ನು ಕಲ್ಪಿಸುವುದು ಅಸಾಧ್ಯ. ಆಟಿಕೆ ಸಾಮಾನಗಳಲ್ಲಿ ಇಂಥಹ ಮಾದರಿಯನ್ನು ಕಾಣಬಹುದಷ್ಟೇ. ಇದೆಲ್ಲ ವಿಜ್ಞಾನದ ಆವಿಷ್ಕಾರಗಳಿಂದ ಸಾಧ್ಯವಾಗುತ್ತಲಿದೆ. ಈ ವಿಮಾನಗಳಿಗೆ “ಮೈಕ್ರೋವೆಹಿಕಲ್ಸ್”(ಎಂ ಎ ವಿ) ಅಥವಾ “ಕಿರುವಾಯು ವಾಹನಗಳು” ಎಂದು ಹೆಸರಿಸಲಾಗಿದೆ. ದೊಡ್ಡಗಾತ್ರದ ವಿಮಾನಗಳಲ್ಲಿ ಯಾವ ಯಂತ್ರದ ಬಿಡಿಭಾಗಗಳು ಸಮುಚ್ಚಯಗೊಂಡಿರುತ್ತದೆಯೋ ಅದೆಲ್ಲಾ ಸಣ್ಣದಾಗಿ ಈ ಮೈಕ್ರೋ ವಿಮಾನದಲ್ಲಿದೆ. ಅಂಥದ್ದೇ ಯಂತ್ರ. ಪುಟಾಣಿ ವಿಡಿಯೋ ಕ್ಯಾಮರಾಗಳು ಎಲ್ಲವೂ ಇವುಗಳಲ್ಲಿ ಇರುತ್ತದೆ. ಕೇವಲ ೬ ಅಂಗುಲಗಳಷ್ಟು ಗಾತ್ರದ ಈ ವಾಯು ವಾಹನಗಳು ಅಗ್ಗವಾಗಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬರುತ್ತವೆ.

ಒಬ್ಬ ಸೈನಿಕನು ಇದನ್ನು ತನ್ನ ಹೆಗಲ ಚೀಲದ ಹಾಗೆ ಸಾಗಿಸಿಕೊಂಡು ಹೋಗಬಹುದು ಅದನ್ನು ಹೂರ ತೆಗೆದು ಹಾರಿಬಿಟ್ಟು ದೂರ ನಿಯಂತ್ರಣದಿಂದ ಇದನ್ನು ಗಮನಿಸಿಬಹುದು. ಗುಡ್ಡಬೆಟ್ಟಗಳಲ್ಲಿಯ ದುರ್ಗಮ ವಾತಾವರಣವನ್ನು, ಭೂಮಿಯಲ್ಲಿ ಅಡಗಿದ ಬಾಂಬುಗಳನ್ನು ಈ ಪುಟ್ಟ ವಿಮಾನ ಪತ್ತೆ ಹಚ್ಚುತ್ತದೆ. ರಾಸಾಯನಿಕ ಇಲ್ಲವೆ, ಜೈವಿಕ ಅಸ್ತ್ರಗಳ ಅಡಗು ಸ್ಥಾನಗಳನ್ನು ಸಹ ಇದು ಗುರುತಿಸುತ್ತದೆ.

ನಾಗರಿಕ ವಿಮಾನಯಾನಕ್ಕಾಗಿ ಇವುಗಳನ್ನು ಬಳಸಿದರೆ ಗಾಳಿಯ ಮಾಲಿನ್ಯವನ್ನು ಪರೀಕ್ಷಿಸಬಹುದು. ಬೆಂಕಿ ಹತ್ತಿದ ಕಟ್ಟಡಗಳನ್ನು ಪ್ರವೇಶಿಸಿ ಅಪಾಯಕ್ಕೊಳಗಾದವರನ್ನು ಗುರುತು ಹಚ್ಚಬಹುದು. ನಿರ್ಗಾವಣೆಗಾಗಿಯೂ ಇಂಥವುಗಳನ್ನು ಬಳಸಬಹುದು.

ಇವುಗಳ ವಿನ್ಯಾಸಗಳಲ್ಲಿ ಅನೇಕ ತೊಡಕುಗಳಿವೆ ಎಂದು ವಿನ್ಯಾಸಕರು ಹೇಳುತ್ತಾರೆ. ಸಾಮಾನ್ಯವಾಗಿ ಮಾಮೂಲ ವಿಮೂನಗಳ ರೆಕ್ಕೆಗಳು ಹಾರಾಟದಲ್ಲಿ ಒಂದೇ ಆಕಾರದಲ್ಲಿರುತ್ತವೆ. ಅದರ ಕಿರು ವಿಮಾನಗಳ ರೆಕ್ಕೆಗಳ ಆಕಾರವು ವೇಗಕ್ಕೆ ಬದಲಾಗುತ್ತವೆ. ಇಂಥಹ ಕಿರು ವಿಮಾನಗಳು ವಿಶ್ವದಲ್ಲೆಡೆ ಉಪಯೋಗಗೊಂಡರೆ ಅಸಂಖ್ಯಾತ ದುರಂತಗಳನ್ನು ತಡೆಯಬಹುದು. ಜೈ ಪುಟಾಣಿ ವಿಮಾನ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...