Home / ಲೇಖನ / ಕೃಷಿ / ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಹೊಲದ ತುಂಬೆಲ್ಲಗರಿಕೆ, ಕಲ್ಲು ನಿರುಪಯುಕ್ತ ಏನೂ ಬೆಳೆಯಲು ಸಾಧ್ಯವಿಲ್ಲ ಎಂದು ಕೈಕಟ್ಟಿ ಕುಳಿತುಕೊಳ್ಳುವ ರೈತರಿಗೆ ಇದೀಗ ಹೂಸ ‘ಕ್ಷ’ ಕಿರಣವೊಂದು ಮೂಡಿ ಬಂದಿದೆ. ಕ್ಷಾರಯುಕ್ತ ಅಥವಾ ಅಯೋಗ್ಯ ಎನ್ನುವ ಭೂಮಿಯಲ್ಲಿ ಫಲವತ್ತಾಗಿ ಸಮೃದ್ಧಿವಾಗಿ ಬೆಳೆಬರುವುದೆಂದರೆ ಬೇಡವೆಂದವರಾರು? ಇಂಥಹ ಬರಡು ಭೂಮಿಯನ್ನು ಸಂಪದ್ಭರಿತ ಗೊಳಿಸುವಲ್ಲಿ ಪ್ರಯತ್ನ ಪೂರ್ವಕವಾಗಿ ಶೋಧನೆ ನಡಿಸಿ ಫಲಕಂಡರು. ಉತ್ತರ ಪ್ರದೇಶದ ಕಬ್ಬು ಸಂಶೋಧನಾ ಮಂಡಳಿಯ ವಿಜ್ಞಾನಿಗಳು. ಸಕ್ಕರೆ ಕಾರ್ಖಾನೆಗಳಲ್ಲಿತಯಾರಾಗುವ ಅದರ ಕೊಳೆಯನ್ನು ಜೈವಿಕ ಕಾರ್ಬೋನಿಕ್ ಗೊಬ್ಬರವಾಗಿ ಪರಿವರ್ತಿಸಿ ಗದ್ದೆಹೊಲಗಳಿಗೆ ಹಾಕಿದರೆ ಸಾಕು. ಬಂಜರುತನ ಕಳೆದುಕೊಂಡು ಫಲವತ್ತೆಗೊಳ್ಳುತ್ತದೆ. ಸಕ್ಕರೆಯ ಕೊಳೆಯಲ್ಲಿ ರಾಸಾಯನಿಕ ಕ್ರಿಯೆ ಹೊಂದಿ ಶೇ. ೩೪ ಜೈವಿಕ್ ಕಾರ್ಬನ್, ಶೇ. ೧.೬೩ ನೆಟ್ರೋಜಿನ್ ಶೇ. ೨.೫೨ ಪಾಸ್ಫೇಟ್, ಶೇ. ೦.೫೫ ಪೋಟ್ಯಾಶ್, ಶೇ ೪.೭೪ ಕ್ಯಾಲ್ಸಿಯಂ ಆಕ್ಸೈಡ್ ಅಲ್ಲದೆ ಕಬ್ಬಿಣ ಮ್ಯಾಂಗನೀಸ್ ಮತ್ತು ಜಿಂಕ್ ಸಹ ಅಡಕವಾಗಿರುತ್ತದೆ.

ಈ ಸಕ್ಕರೆಯ ಕೊಳೆಯಲ್ಲಿರುವ ಜೈವಿಕ ಕಾರ್ಬನನ್ನು ಗೊಬ್ಬರವಾಗಿ ಉಪಯೋಗಿಸುವುದರಿಂದ ಭೂಮಿಯ ಭೌತಿಕ ಸ್ವರೂಪವು, ಜಲರಕ್ಷಣೆಯ ಸಾಮರ್ಥ್ಯ ಹಾಗೂ ಫಲವತ್ತತೆಯಲ್ಲಿ ಅಭಿವೃದ್ದಿ ಆಗುವುದು ಮತ್ತು ಜಮೀನಿನೊಳಗೆ ವಾಯುವಿನ ಸುಗಮ ಚಲನವಲನಕ್ಕೂ ಅನುಕೂಲವಾಗುವುದು. ಇದರ ಬಳಕೆಯ ಕುರಿತು ವಿಜ್ಞಾನಿಗಳು ರೈತರಿಗೆ ಒಂದು ಎಚ್ಚರಿಕೆಯನ್ನು ನೀಡುತ್ತಾರೆ. ಇದನ್ನು ನೇರವಾಗಿ ಹೊಲದಲ್ಲಿ ಹಾಕದೇ ಸಗಣಿ, ಸೊಪ್ಪು, ಕಸಕಡ್ಡಿ ಒಂದಿಷ್ಟು ಪಾಸ್ಫೇಟ್ ಹಾಗೂ ಜೀವಾಣು ಪಲ್ಪರ್ ಸೇರಿಸಿ ಕನಿಷ್ಟ ೯೦ ದಿನಗಳವರೆಗೆ ಕೊಳೆಯಿಸಿ ನಂತರವೇ ಗದ್ದೆಗಳಲ್ಲಿ ಪ್ರಯೋಗಿಸಬೇಕು. ಇದರಂತೆ ಒದಗಿಸಿದಲ್ಲಿ ಬಂಜರು ಭೂಮಿಯನ್ನು ಫಲವತ್ತತೆಯನ್ನಾಗಿ ಪರಿವರ್ತಿಸಬಹುದೆಂದು ವಿಜ್ಞಾನಿಗಳು ಹೇಳುತ್ತಾರೆ. ಉತ್ತರ ಪ್ರದೇಶದಲ್ಲಿ ಕಂಡು ಹಿಡಿದ ಈ ನಾಡಿನಲ್ಲಿ೩೨ ಲಕ್ಷ ರೈತರು ೨೦ ಲಕ್ಷ ಹೆಕ್ಟೇರುಗಳಲ್ಲಿ ಇದನ್ನು ಹಾಕಿ ಕೃಷಿ ಮಾಡುತ್ತಿದ್ದಾರೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...