Home / ಲೇಖನ / ಕೃಷಿ / ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಬರಡು ನೆಲವನ್ನು ಖಸುಗೊಳಿಸುವ ಶೋಧನೆ

ಹೊಲದ ತುಂಬೆಲ್ಲಗರಿಕೆ, ಕಲ್ಲು ನಿರುಪಯುಕ್ತ ಏನೂ ಬೆಳೆಯಲು ಸಾಧ್ಯವಿಲ್ಲ ಎಂದು ಕೈಕಟ್ಟಿ ಕುಳಿತುಕೊಳ್ಳುವ ರೈತರಿಗೆ ಇದೀಗ ಹೂಸ ‘ಕ್ಷ’ ಕಿರಣವೊಂದು ಮೂಡಿ ಬಂದಿದೆ. ಕ್ಷಾರಯುಕ್ತ ಅಥವಾ ಅಯೋಗ್ಯ ಎನ್ನುವ ಭೂಮಿಯಲ್ಲಿ ಫಲವತ್ತಾಗಿ ಸಮೃದ್ಧಿವಾಗಿ ಬೆಳೆಬರುವುದೆಂದರೆ ಬೇಡವೆಂದವರಾರು? ಇಂಥಹ ಬರಡು ಭೂಮಿಯನ್ನು ಸಂಪದ್ಭರಿತ ಗೊಳಿಸುವಲ್ಲಿ ಪ್ರಯತ್ನ ಪೂರ್ವಕವಾಗಿ ಶೋಧನೆ ನಡಿಸಿ ಫಲಕಂಡರು. ಉತ್ತರ ಪ್ರದೇಶದ ಕಬ್ಬು ಸಂಶೋಧನಾ ಮಂಡಳಿಯ ವಿಜ್ಞಾನಿಗಳು. ಸಕ್ಕರೆ ಕಾರ್ಖಾನೆಗಳಲ್ಲಿತಯಾರಾಗುವ ಅದರ ಕೊಳೆಯನ್ನು ಜೈವಿಕ ಕಾರ್ಬೋನಿಕ್ ಗೊಬ್ಬರವಾಗಿ ಪರಿವರ್ತಿಸಿ ಗದ್ದೆಹೊಲಗಳಿಗೆ ಹಾಕಿದರೆ ಸಾಕು. ಬಂಜರುತನ ಕಳೆದುಕೊಂಡು ಫಲವತ್ತೆಗೊಳ್ಳುತ್ತದೆ. ಸಕ್ಕರೆಯ ಕೊಳೆಯಲ್ಲಿ ರಾಸಾಯನಿಕ ಕ್ರಿಯೆ ಹೊಂದಿ ಶೇ. ೩೪ ಜೈವಿಕ್ ಕಾರ್ಬನ್, ಶೇ. ೧.೬೩ ನೆಟ್ರೋಜಿನ್ ಶೇ. ೨.೫೨ ಪಾಸ್ಫೇಟ್, ಶೇ. ೦.೫೫ ಪೋಟ್ಯಾಶ್, ಶೇ ೪.೭೪ ಕ್ಯಾಲ್ಸಿಯಂ ಆಕ್ಸೈಡ್ ಅಲ್ಲದೆ ಕಬ್ಬಿಣ ಮ್ಯಾಂಗನೀಸ್ ಮತ್ತು ಜಿಂಕ್ ಸಹ ಅಡಕವಾಗಿರುತ್ತದೆ.

ಈ ಸಕ್ಕರೆಯ ಕೊಳೆಯಲ್ಲಿರುವ ಜೈವಿಕ ಕಾರ್ಬನನ್ನು ಗೊಬ್ಬರವಾಗಿ ಉಪಯೋಗಿಸುವುದರಿಂದ ಭೂಮಿಯ ಭೌತಿಕ ಸ್ವರೂಪವು, ಜಲರಕ್ಷಣೆಯ ಸಾಮರ್ಥ್ಯ ಹಾಗೂ ಫಲವತ್ತತೆಯಲ್ಲಿ ಅಭಿವೃದ್ದಿ ಆಗುವುದು ಮತ್ತು ಜಮೀನಿನೊಳಗೆ ವಾಯುವಿನ ಸುಗಮ ಚಲನವಲನಕ್ಕೂ ಅನುಕೂಲವಾಗುವುದು. ಇದರ ಬಳಕೆಯ ಕುರಿತು ವಿಜ್ಞಾನಿಗಳು ರೈತರಿಗೆ ಒಂದು ಎಚ್ಚರಿಕೆಯನ್ನು ನೀಡುತ್ತಾರೆ. ಇದನ್ನು ನೇರವಾಗಿ ಹೊಲದಲ್ಲಿ ಹಾಕದೇ ಸಗಣಿ, ಸೊಪ್ಪು, ಕಸಕಡ್ಡಿ ಒಂದಿಷ್ಟು ಪಾಸ್ಫೇಟ್ ಹಾಗೂ ಜೀವಾಣು ಪಲ್ಪರ್ ಸೇರಿಸಿ ಕನಿಷ್ಟ ೯೦ ದಿನಗಳವರೆಗೆ ಕೊಳೆಯಿಸಿ ನಂತರವೇ ಗದ್ದೆಗಳಲ್ಲಿ ಪ್ರಯೋಗಿಸಬೇಕು. ಇದರಂತೆ ಒದಗಿಸಿದಲ್ಲಿ ಬಂಜರು ಭೂಮಿಯನ್ನು ಫಲವತ್ತತೆಯನ್ನಾಗಿ ಪರಿವರ್ತಿಸಬಹುದೆಂದು ವಿಜ್ಞಾನಿಗಳು ಹೇಳುತ್ತಾರೆ. ಉತ್ತರ ಪ್ರದೇಶದಲ್ಲಿ ಕಂಡು ಹಿಡಿದ ಈ ನಾಡಿನಲ್ಲಿ೩೨ ಲಕ್ಷ ರೈತರು ೨೦ ಲಕ್ಷ ಹೆಕ್ಟೇರುಗಳಲ್ಲಿ ಇದನ್ನು ಹಾಕಿ ಕೃಷಿ ಮಾಡುತ್ತಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...