Home / ಲೇಖನ / ಇತರೆ / ಮನಸಿಗೆ ಪಾಠ

ಮನಸಿಗೆ ಪಾಠ

ಪ್ರಿಯ ಸಖಿ,

ದುಃಖತಪ್ತ ಶಿಷ್ಯನೊಬ್ಬ ತನ್ನ ಗುರುವಿನ ಬಳಿಗೆ ಬಂದು ಗುರುಗಳೇ ಈ ಪ್ರಪಂಚದಲ್ಲಿ ನನ್ನನ್ನು ಯಾರೂ ಪ್ರೀತಿಸುವವರಿಲ್ಲ. ನಾನು ಯಾರಿಗೂ ಬೇಕಾಗಿಲ್ಲ. ನನ್ನನ್ನು ಯಾರೂ ಅರ್ಥಮಾಡಿಕೊಳ್ಳುತ್ತಿಲ್ಲ. ನನ್ನ ಮಾತನ್ನು ಯಾರೂ ಕೇಳುವುದಿಲ್ಲ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇನೆ ಎಂದ. ಗುರುಗಳು ಆ ಶಿಷ್ಯನನ್ನು ತೀಕ್ಷ್ಣವಾಗಿ ನೋಡಿ ಹೋಗಿ ಸಾಯಿ ಎಂದರು. ಗುರುಗಳಿಂದ ಇಂತಹ ಮಾತನ್ನು ನಿರೀಕ್ಷಸದಿದ್ದ ಶಿಷ್ಯ ಪೆಚ್ಚಾಗಿ ಹೋದ.

ತಡವರಿಸುತ್ತಾ ಇಲ್ಲಾ ಗುರುಗಳೇ….. ಅದೂ…. ನನಗೆ ಜೀವನವೇ ಬೇಸರವಾಗಿ ಹೋಗಿದೆ…. ಅದಕ್ಕೆ ಹಾಗೆಂದೆ…. ಎನ್ನುತ್ತಾ ಮತ್ತೆ ತನ್ನ ದುಃಖವನ್ನು ತೋಡಿಕೊಂಡ. ಎಲ್ಲವನ್ನು ಮತ್ತೆ ಕೇಳಿಸಿಕೊಂಡ ಗುರುಗಳು, ನೋಡಿದೆಯಾ ನೀನು ನನ್ನಿಂದ ಸಮಾಧಾನ, ಸಾಂತ್ವನವನ್ನು ಮಾತ್ರ ಬಯಸಿದ್ದೀಯ, ನಿನಗೆ ಸಾಯಲು ಸ್ವಲ್ಪವೂ ಇಷ್ಟವಿಲ್ಲ. ಏಕೆಂದರೆ ನೀನು ನಿನ್ನನ್ನೇ ತುಂಬಾ ಹೆಚ್ಚು ಪ್ರೀತಿಸಿಕೊಳ್ಳುತ್ತಿದ್ದೀಯಾ. ತನ್ನನ್ನು ತಾನು ಉತ್ಕಟವಾಗಿ ಪ್ರೀತಿಸಿಕೊಳ್ಳುವ ವ್ಯಕ್ತಿ ಸ್ವಾರ್ಥಿ ಮತ್ತು ಅಹಂಕಾರಿಯಾಗುತ್ತಾನೆ. ಅವನು ಬೇರೆಯವರನ್ನು ಹೇಗೆ ಪ್ರೀತಿಸಿಯಾನು? ಅರ್ಥಮಾಡಿಕೊಳ್ಳುತ್ತಿಲ್ಲಾ ಎನ್ನುತ್ತೀಯ. ಇಲ್ಲಿ ನೀನು ಯಾರನ್ನಾದರೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ್ದೀಯಾ ? ನನ್ನ ಮಾತನ್ನು ಯಾರೂ ಕೇಳುವುದಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ನೀನು ನುಡಿಯುತ್ತಿದ್ದರೂ ನಿನ್ನ ಮನಸ್ಸು ಹಾಗೆ ನಡೆದುಕೊಳ್ಳಲು ತಯಾರಿಲ್ಲ. ಹೀಗಿರುವಾಗ ಬೇರೆಯವರು ನಿನ್ನ ಮಾತನ್ನು ಕೇಳುತ್ತಿಲ್ಲ ಎಂದು ಆಕ್ಷೇಪಿಸುವ ಹಕ್ಕು ನಿನಗೆಲ್ಲಿದೆ? ಎಂದರು. ಇದನ್ನು ಕೇಳಿದ ಶಿಷ್ಯನಿಗೆ ತನ್ನ ತಪ್ಪಿನ ಅರಿವಾಯ್ತು.

ಸಖಿ, ನಾವು ಯಾವಾಗಲೂ ಹೀಗೇ ಅಲ್ಲವೇ? ನಾವು ಮಾತ್ರ ಸಾಚಾ, ತಪ್ಪುಗಳಿರುವುದೆಲ್ಲಾ ಇತರರಲ್ಲಿ ಎಂದುಕೊಳ್ಳುತ್ತೇವೆ. ಆದರೆ ಅದರ ಮೂಲ ನಮ್ಮಲ್ಲೇ ಇರುತ್ತದೆ. ವಿಶಾಲ ಹೃದಯದಿಂದ ಇನ್ನೊಬ್ಬರಿಗೆ ಪ್ರೀತಿಯನ್ನು ಕೊಡುವುದನ್ನು ತಿಳಿದಿಲ್ಲದ ನಾವು, ನಮ್ಮನ್ನು ಯಾರೂ ಪ್ರೀತಿಸುವುದಿಲ್ಲ ಎಂದುಕೊಳ್ಳುತ್ತೇವೆ. ಯಾರ ನೋವು ನಲಿವುಗಳನ್ನು. ಭಾವನೆಗಳನ್ನು ನಾವು ಅರ್ಥಮಾಡಿಕೊಳ್ಳಲು ಹೋಗದೇ ಬೇರೆಯವರು ಸದಾ ನಮ್ಮ ನೋವು ನಲಿವುಗಳಿಗೆ ಸ್ಪಂದಿಸಬೇಕೆಂದು ಬಯಸುತ್ತೇವೆ. ನನ್ನ ಮಾತನ್ನು ಯಾರೂ ಕೇಳುವುದಿಲ್ಲ ಎಂದುಕೊಳ್ಳುತ್ತೇವೆ. ಅವರಲ್ಲಿ ನಮಗೆ ಪ್ರೀತಿಯೇ ಇಲ್ಲವೆಂದ ಮೇಲೆ ಅವರು ನಾವು ಹೇಳಿದಂತೆ ಕೇಳಬೇಕು ಎಂದು ಹೇಳುವ ಅಧಿಕಾರವಾದರೂ ನಮಗೆಲ್ಲಿದೆ ? ಅದಕ್ಕಿಂತಾ ಹೆಚ್ಚಿನ ಗುರು ಹೇಳಿದಂತೆ ಮಂಗನಂತಾ ನಿಮ್ಮ ಮನಸ್ಸೇ ನಾವು ಹೇಳಿದ ಮಾತು ಕೇಳುವುದಿಲ್ಲ. ಇನ್ನು ಬೇರೆಯವರ ಮಾತೇನು? ಪಾಠ ಕಲಿಸುವುದೇ ಆದರೆ ನಮ್ಮ ಮನಸ್ಸಿಗೆ ಪಾಠ ಕಲಿಸಬೇಕು. ಇತರರನ್ನು ಪ್ರೀತಿಸುವುದನ್ನು ಕಲಿಸಬೇಕು. ಅರ್ಥಮಾಡುವುದನ್ನು ಕಲಿಸಬೇಕು. ಹೀಗಾದಾಗ ಮಾತ್ರ ನಾವೂ ಬೇರೆಯವರಿಂದ ಇದನ್ನೇ ನಿರೀಕ್ಷಿಸಬಹುದು. ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವುದರಲ್ಲಿಯೇ ಮುಳುಗಿರುವವರಿಗೆ, ಬೇರೆಯವರಿಗೆ ಒಂದಿಷ್ಟು ಪ್ರೀತಿಯನ್ನು ಕೊಡಲರಿಯದವರಿಗೆ ಬೇರೆಯವರಿಂದ ಅದನ್ನು ನಿರೀಕ್ಷಿಸುವ ಹಕ್ಕು ಎಲ್ಲಿರುತ್ತದೆ? ಅಲ್ಲವೇ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...