Home / ಲೇಖನ / ಇತರೆ / ಅರಿತವೇನು ಅಂತರಾಳವ?

ಅರಿತವೇನು ಅಂತರಾಳವ?

ಪ್ರಿಯ ಸಖಿ,

ಬೇರೆಯವರ ಭಾವನೆಗಳನ್ನು ಅರ್ಥೈಸುವುದು ಬಹಳವೇ ಕಷ್ಟ ಎನ್ನುತ್ತಾರೆ ತಿಳಿದವರು. ಅದು ನಿಜವೂ ಹೌದು. ಆದರೆ ಅದಕ್ಕಿಂತಾ ಕಷ್ಟವಾದುದು ನಮ್ಮನ್ನು ನಾವು ಅರಿಯುವುದು ! ಅಲ್ಲವೇ ? ಕವಿ ಎಚ್. ಎಸ್. ವೆಂಕಟೇಶಮೂರ್ತಿಯವರು ತಮ್ಮ ‘ಇಷ್ಟು ಕಾಲ’, ಎಂಬ ಕವನದಲ್ಲಿ

ಇಷ್ಟು ಕಾಲ ಒಟ್ಟಿಗಿBhrameದ್ದು
ಎಷ್ಟು ಬೆರೆತರೂ
ಅರಿತೆವೇನು ನಾವು
ನಮ್ಮ ಅಂತರಾಳವ?
ಕಡಲಮೇಲೆ ಸಾವಿರಾರು ಮೈಲಿ
ಸಾಗಿಯೂ
ನೀರಿನಾಳ ತಿಳಿಯಿತೇನು
ಹಾಯಿ ದೋಣಿಗೆ ?

ಎಂದು ಪ್ರಶ್ನಿಸುತ್ತಾರೆ. ತನಗೆಲ್ಲಾ ತಿಳಿದಿದೆ ಎಂದು ಬೀಗುವ ಮಾನವ ತನ್ನನ್ನು ತಾನು ಅರ್ಥ ಮಾಡಿಕೊಂಡಿರುವುದಾದರೂ ಎಷ್ಟು ? ಇಂದು ನಾವು ಬಾಹ್ಯದೊತ್ತಡದಲ್ಲಿ ಅಂತರಾಳದ ದನಿಗೆ ಕಿವಿಗೊಡುವುದನ್ನೇ ಮರೆತಿದ್ದೇವೆ. ನೀರಿನ ಮೇಲೆ ತೇಲಿದರೆ ಕಡಲಿನ ಆಳದ ಅನುಭವವಾಗುತ್ತದೆಯೆ?

ಮೆರಿ ಸ್ಕ್ರಾಲಿಬ್ ಎನ್ನುವ ಕವಿ “Have a quiet time in which to learn your own weakness and gods strength” ನಾವೆಲ್ಲರೂ ನಮ್ಮ ನಮ್ಮ ದೌರ್ಬಲ್ಯಗಳನ್ನರಿಯಲು ಹಾಗೂ ದೇವರು ನೀಡಿದ ಶಕ್ತಿಯನ್ನರಿಯಲು ತಕ್ಕಷ್ಟು ಸಮಯ ಕೊಡಬೇಕು ಎನ್ನುತ್ತಾನೆ. ಎಷ್ಟೊಂದು ಅರ್ಥಪೂರ್ಣವಾದ ಮಾತಲ್ಲವೇ ಸಖೀ? ನಮ್ಮ ನಮ್ಮ ದೌರ್ಬಲ್ಯಗಳನ್ನು ಅರಿತಾಗ ಮಾತ್ರ ಅದನ್ನು ಮೆಟ್ಟಿ ನಿಲ್ಲಲು ಪ್ರಯತ್ನಿಸುತ್ತೇವೆ. ನಮ್ಮಲ್ಲಿರುವ ವಿಶಿಷ್ಟ ಶಕ್ತಿಯ ಅರಿವಾದಾಗ ಮಾತ್ರ ಅದನ್ನು ಉಪಯೋಗಿಸಿಕೊಂಡು ಉತ್ತಮ ವ್ಯಕ್ತಿಗಳಾಗಲು ಪ್ರಯತ್ನಿಸುತ್ತೇವೆ. ನಮ್ಮ ಮನಸ್ಸನ್ನೇ ಅರಿಯದೇ ಹೋದಾಗ ಯಾವುದೂ ಸಾಧ್ಯವಿಲ್ಲ. ನಾವೂ ಬದುಕುತ್ತೇವೆ. ಆದರೆ ಅರ್ಥಪೂರ್ಣವಾಗಿಯಲ್ಲ!

ಅಕ್ಕಮಹಾದೇವಿ ಬಹಳ ಹಿಂದೆಯೇ “ಎಲ್ಲ ಎಲ್ಲವನರಿದು ಫಲವೇನಯ್ಯ ತನ್ನ ತಾನರಿಯಬೇಕಲ್ಲವೇ?” ಎಂದಿದ್ದಾರೆ. ಇಲ್ಲಿ ಎಲ್ಲಕ್ಕಿಂತಾ ಮುಖ್ಯವಾದುದೇ ತನ್ನನ್ನು ತಾನು ಅರಿತುಕೊಳ್ಳುವುದು. ಪ್ರತಿಯೊಬ್ಬ ವ್ಯಕ್ತಿಯಲ್ಲೂ ದೌರ್ಬಲ್ಯಗಳು, ಕೆಟ್ಟ ಗುಣಗಳಿರುವಂತೆ ಉತ್ತಮ ಗುಣ, ಶಕ್ತಿಗಳು ಇದ್ದೇ ಇರುತ್ತವೆ. ಕೆಟ್ಟದ್ದನ್ನು ಹತೋಟಿಯಲ್ಲಿರಿಸಿ ಉತ್ತಮವಾದುದನ್ನು ಉದ್ದೀಪನಗೊಳಿಸುವ ವಿವೇಕ ನಮ್ಮಲ್ಲಿ ಮೂಡಬೇಕಾದರೆ ಮೊದಲು ನಮ್ಮನ್ನು ನಾವು ಅರಿಯಬೇಕು! ನೀನೇನನ್ನುತ್ತೀ ಸಖೀ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...