Home / ಲೇಖನ / ಇತರೆ / ಮದುವೆಯ ಏಜಂಟ

ಮದುವೆಯ ಏಜಂಟ

ವಿಮಾ ಏಜಂಟರಿಗಿಂತ ಎರಡು ಮಾತುಗಳನ್ನು ಹೆಚ್ಚಾಗಿ ಮಾತಾಡಿ, ಆಡಿದ ಸುಳ್ಳನ್ನು ಸತ್ಯವೆಂದೇ ಹಟ ವಿಡಿದು ವಾದಿಸುವ ಏಜಂಟರಾರೂ ಇರುವರಾದರೆ- ಅವರೇ ಇವರು ಮದುವೆಯ ಏಜಂಟರು. ಅಷ್ಟೇ ಅಲ್ಲ, ವಿಮಾ ಏಜಂಟರು ತಿಳಿಯದ ಒಂದೆರಡು ಚಿಕ್ಕ ಆಟಗಳನ್ನು ಈ ಏಜಂಟರು ಅರಿತಿರುವರು.

ರಾಮಚಂದ್ರನಾಯ್ಕರು ತಮ್ಮ ಹೆಂಡತಿಯ ಅಕಾಲ ನಿಧನವನ್ನು ಚಿಂತಿಸುತ್ತ ಈ ಐವತ್ತನೆ ವಯಸ್ಸಿನಲ್ಲಿ ತನಗೆ ಮತ್ತೊಂದು ಹೆಣ್ಣನ್ನು ಕೊಡುವ ವಿವೇಕಿಯು ಈ ಮೂಢ ಜಗತ್ತಿನಲ್ಲಿರುವನೇ ಎಂದು ಆಶ್ಚರ್ಯ ಪಡುತ್ತಿರಲು, ಹರೆ ಕಳ ಗೋವರ್ಧನರಾಯರು- ಶತ್ರು ಸೈನ್ಯದಿಂದಾವೃತನಾಗಿ ಚಿಂತಿಸುತ್ತಿದ್ದ ಅರಸನ ಸಮ್ಮುಖಕ್ಕೆ ಬರುವ ಸಾಹಸೀ ಸೇನಾ ನಾಯಕನಂತೆ ನೆಟ್ಟಗೆ ಬಂದು, “ನಮಸ್ಕಾರ!” ಎಂದರು.

ಮಾತುಕತೆಗಳು ನಡೆದುವು. ಮೂಲ್ಕಿಯಲ್ಲಿ ಸಂಪದ್ಗಿರಿರಾಯರ ಮಗಳು ಬೆಳೆದಂತೆಯೂ, ಅವರು ರಾಮಚಂದ್ರ ನಾಯ್ಕರ ಧ್ಯಾನದಲ್ಲೆ ಇದ್ದಂತೆಯೂ ತಿಳಿದು ಬಂತು. ಗೋವರ್ಧನರಾಯರು ಜತೆಯಲ್ಲಿ, ಆ ಹುಡುಗಿಯ ಫೋಟೋವನ್ನೂ ತಂದಿದ್ದರು. ಸಂಪದ್ಗಿರಿರಾಯರು ಒಂದುವರೆ ಸಾವಿರ ವರದಕ್ಷಿಣೆ ಕೊಡುವರು; ವಿವಾಹಕ್ಕೆ ಒಪ್ಪಿಗೆಯನ್ನು ಮರುದಿನವೇ ಕಳುಹಬೇಕಾಗಿ ಹೇಳಿ ಕಳುಹಿರುವರು. ಗೋವರ್ಧನರಾಯರು ಪರೋಪಕಾರಾರ್ಥ ಇತ್ತ ಬಂದಿರುವರು; – ಇವಿಷ್ಟು ಸಂಗತಿಗಳು ಹೊರಬಿದ್ದುವು.

ರಾಮಚಂದ್ರನಾಯ್ಕರು ಅವರನ್ನು ಚೆನ್ನಾಗಿ ಸತ್ಕರಿಸಿದರು. ಮದುವೆಯಾಗಲು ತನ್ನ ಆಕ್ಷೇಪವೇನೂ ಇಲ್ಲವೆಂದರು. ಆ ಮೇಲೆ ಫೋಟೋ ನೋಡಿದರು. ಆನಂತರ, ಪುನಃ ತಮ್ಮ ಆಕ್ಷೇಪವೇನೇನೂ ಇಲ್ಲವೆಂದರು.

ತನಗೆ ಸಂತೋಷವಾಯಿತೆಂದರು ಗೋವರ್ಧನ ರಾಯರು, ಆ ರಾತ್ರೆ ಅಲ್ಲೆ ಉಳಕೊಂಡು, ಮರುದಿನ ಎದ್ದು, ನಾಯ್ಕ ರೊಂದಿಗೆ ಫಲಾಹಾರ ತೀರಿಸಿ, ಮೂಲ್ಕಿಗೆ ಹೋಗಿ ಬರಲು ಹತ್ತು ರೂಪಾಯಿಗಳನ್ನು ನಾಯ್ಕರಿಂದ ಪಡೆದು, ತಾನು ತಂದ ಫೋಟೋವನ್ನು ನಾಯ್ಕರೊಡನೆ ಬಿಟ್ಟು ತೆರಳಿದರು, ಅದೇ ಅವರ ಕೊನೆಯ ಭೇಟಿ.

ಒಂದು ತಿಂಗಳ ನಂತರ, ನಾಯ್ಕರು ಸಂಪದ್ಗಿರಿರಾಯರಿಗೆ ಕಾಗದ ಬರೆದರು. ತನಗೆ ಮಗಳೇ ಇಲ್ಲವೆಂದೂ, ನಾಯ್ಕರ ಪತ್ರವನ್ನು ನೋಡಿ ತಾನು ಆಶ್ಚರ್ಯಪಟ್ಟಿರುವೆನೆಂದೂ, ಗೋವರ್ಧನ ಎಂಬ ಹೆಸರಿನವರನ್ನು ತಾನರಿಯೆನೆಂದೂ ಸಂಪದ್ಗಿರಿರಾಯರಿಂದ ಉತ್ತರ ಬಂತು.

ನಾಯ್ಕರು, ಗೋವರ್ಧನರಾಯರು ತಂದ ಫೋಟೋವನ್ನು ಸಂಪದ್ಗಿರಿರಾಯರಿಗೆ ಕಳುಹಿದರು. ಎರಡು ದಿನಗಳಲ್ಲಿ ಸಂಪದ್ಗಿರಿರಾಯರಿಂದ ಪುನಃ ಉತ್ತರ ಬಂತು:- “ನೀವು ಕಳುಹಿಸಿದ ಫೋಟೋ ನನ್ನ ಮೃತಪತ್ನಿಯದು. ಒಂದು ತಿಂಗಳ ಹಿಂದೆ ‘ಶ್ರೀಧರರಾಯ’ ಎಂಬ ಹೆಸರಿನವ ರೊಬ್ಬರು ನನ್ನ ಮನೆಗೆ ಬಂದಿದ್ದರು. ಒಂದು ದಿನ ಉಳಕೊಂಡು,
ನನಗೆ ಎರಡನೆ ಸಂಬಂಧವೊಂದನ್ನು ಸೂಚಿಸಿ, “ಉಡುಪಿ ನಾರಾಯಣರಾಯರ ಮಗಳ ಫೋಟೋ” ಎನ್ನುತ್ತ ಒಂದು ಫೋಟೋ ಕೊಟ್ಟರು. ಮರುದಿನ ೫ ರೂಪಾಯಿ ಗಳೊಂದಿಗೆ ಹೋದವರು, ಈ ತನಕ ಪತ್ತೆಯಿಲ್ಲ. ಆಗಲೇ ನನ್ನ ಮೃತಪತ್ನಿಯ ಫೋಟೋ ಕಾಣೆಯಾಗಿತ್ತು …… ಎಂದು ಮುಂತಾಗಿ ಬರೆದು, ಆ ‘ಶ್ರೀಧರರಾಯ’ರ ರೂಪವನ್ನು ಕೊಂಚ ವರ್ಣಿಸಿದ್ದರು.

ರಾಮಚಂದ್ರನಾಯ್ಕರಿಗೆ ಎದೆ ಧಸಕ್ಕೆಂದಿತು. ಒಳಗಿನ ಕೊಠಡಿಗೆ ಹೋಗಿ ತಮ್ಮ ಮಗಳ ಫೋಟೋ ಕಡೆಗೆ ನೋಡಿದರು. ಅವರೆಣಿಸಿದುದೇ- ಫೋಟೋ ಕಾಣೆಯಾಗಿದೆ!

ಇನ್ನೊಬ್ಬ ವಿವಾಹಾತುರ ವಿದುರನು ರಾಮಚಂದ್ರನಾಯ್ಕರಿಗೆ- “ನಿಮ್ಮ ಮಗಳ ಫೋಟೋ ನೋಡಿ ಒಪ್ಪಿಗೆಯಾಯಿತು. ಎಷ್ಟು ವರದಕ್ಷಿಣೆ ಕೊಡುವಿರಿ?” ಎಂದು ಪತ್ರ ಬರೆವ ತನಕ ಶ್ರೀಧರ ಯಾನೆ ಗೋವರ್ಧನ ರಾಯರ ಪತ್ತೆ ಮಾಡದೆ ಸುಮ್ಮನೆ ಕುಳಿತುಕೊಳ್ಳುವುದು ತಪ್ಪು – ಎಂದು ಕೊಳ್ಳುತ್ತ ನಾಯ್ಕರು ಪತ್ತೆಗಾರಂಭಿಸಿರುವರು.

ಆದರೆ ………!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...