Home / ಲೇಖನ / ಇತರೆ / ಮೈ ಝುಮ್ಮಾಗುವ ಸುಳ್ಳು

ಮೈ ಝುಮ್ಮಾಗುವ ಸುಳ್ಳು

ರಘುವೀರನು ನನ್ನ ಗೆಳೆಯ, ನಮಗೆ ಪರಿಚಯವಾದುದು ಮೊದಲು ಲೇಖನಿಯಿಂದ, ಅವನು ಸಂಪಾದಕನು. ನಾನು, ‘ಸಂಪಾದಕ’ರೆಂಬವರನ್ನು ಪ್ರೀತಿಯಿಂದ ನೋಡುವವನು. “ಹೃದಯರಂಜನ” ಪತ್ರಿಕೆಯನ್ನು ರಘುವೀರನು ಆರಂಭಿಸಿದ ಮೇಲೆ ನಮ್ಮ ಪರಿಚಯವೂ ಫಕ್ಕನೆ ಉಂಟಾಗಿ, ಕೆಲವೇ ಕಾಲದಲ್ಲಿ ಬಲವಾಯಿತು. ಈಗ ರಘುವೀರನು ‘ಸಂಪಾದಕ’ನಲ್ಲ; “ಭೂತಪೂರ್ವ….”ವಾಗಿದ್ದಾನೆ. ಅವನ “ಹೃದಯರಂಜನ”ವು ಹೃದಯಭೇದಕವೆನಿಸುವಂತೆ ಹುಟ್ಟಿದ ದಿನವೇ ಸತ್ತಿತೆಂಬುದು ದುಖಃಪೂರ್ಣವಾದ ‘ಬಹಿರಂಗ ರಹಸ್ಯ.’

ನಿಂತು ಹೋಗಲು ಕಾರಣವೇನು? –
(೧) ಕನ್ನಡಿಗರ ಆದರದ ಅಭಾವ
(೨) ಆರ್ಥಿಕ ದುರ್ದಶೆ
(೩) ಪ್ರಚಾರ ಕಾರ್ಯದ ಅಪೂರ್ಣತೆ
(೪) ಪತ್ರಿಕೆಯು ಆಕರ್ಷಕವಾಗಿಲ್ಲದಿರುವದು

– ಇವು ಒಂದು ಪ್ರತಿಕೆಯ ‘ಅಕಾಲ ನಿಧನ’ಕ್ಕೆ ಕಾರಣವೆಂದು ನಿಮ್ಮ ತರ್ಕವಿರಬಹುದು. ಆದರೆ, ರಘುವೀರನ ಪತ್ರಿಕೆಯ ಅವಸಾನವು ಆತನ ದುಂದುವ್ಯಯದಿಂದಲೇ ಉಂಟಾಯಿತು.

ಹೇಗೆ? – ಒಂದು ಉದಾಹರಣೆಯೇ ಇದು.

ಪತ್ರಿಕೆಗೆ ಚಂದಾದಾರರನ್ನು ಕೂಡಿಸಲು ಆತನು ಸರ್ವೋತ್ತಮನೆಂಬವನ ಸಹಾಯ ಪಡೆದನು. ಸರ್ವೊತ್ತಮನು ಸರ್ವ ವಿದ್ಯೆಗಳಲ್ಲೂ ನಿಷ್ಣಾತನು. ಅವನ ನಾಲಗೆಯೂ, ಅದರಂತೆ ಕೈಯೂ ಹರಿತವಾಗಿವೆ. “ಚಂದಾದಾರರನ್ನು ಕೂಡಿಸುತ್ತ ದಣಿವ ಬದಲಾಗಿ ನಿಮ್ಮನ್ನು ಒಂದೇ ಒಂದು ಹತ್ತು ರೂಪಾಯಿ ನೋಟಿನಲ್ಲಿ ಭಾಗ್ಯವಂತನನ್ನಾಗಿ ಮಾಡಬಲ್ಲೆ” ಎಂದು ಆತನು ರಘುವೀರನಿಗೆ ಭಾಷೆಕೊಟ್ಟನು. ಹೇಗೆಂದು ರಘುವೀರನು ಪ್ರಶ್ನಿಸಲಾಗಿ, “ತಾಯಿತ! ನನ್ನ ಅಜ್ಜನು . . .ಲ್ಲಿ ಕಲಿತು ಬಂದು ನನಗೆ ಹೇಳಿಕೊಟ್ಟನು. ಮಹಾರಹಸ್ಯ; ಖಂಡಿತ ಫಲ!” ಎಂದನು.

‘ಸುಶಿಕ್ಷಿತ’ನು ರಘುವು; ಒಂದು ಪತ್ರಿಕೆಯ ಸಂಪಾದಕನು; ಆದರೆ ಮನುಷ್ಯನು. ಆದುದರಿಂದ ಸರ್ವೋತ್ತಮನು ತೆಳ್ಳಗಿನ ನಾಲಗೆಯಿಂದಾಡಿದ ಮಾತುಗಳನ್ನು ತೆಳ್ಳಗಿನ ಕೈಯಿಂದ ಭಾಷೆಯ ವೆಟ್ಟನ್ನಿತ್ತುದೇ – ನಂಬಿದನು. ‘ಸುಶಿಕ್ಷಿತ’ ರೆಂಬವರಲ್ಲಿ ಹೆಚ್ಚಿನವರು ತಾಯಿತವನ್ನು ತಾಯಿಗಿಂತ ಹೆಚ್ಚು ನಂಬುವರೆಂಬುದು ನಿಮಗರಿತಿರಬಹುದು.

ರಘುವು ಕುಂದಾಪುರದಲ್ಲಿ ಚಂದಾದಾರರನ್ನು ಕೂಡಿಸುವ ಮಹಾಯತ್ನದಲ್ಲಿದ್ದನು. ಅಲ್ಲಿಗೆ ಸರ್ವೋತ್ತಮನ ಹತ್ತು ರೂಪಾಯಿ ಮೌಲ್ಯದ ವಿ. ಪಿ. ತಲಪಿತು. ಮೌಲ್ಯ ತೆತ್ತು, ರಘುವು ಅದನ್ನೊಡೆಯಲು ಒಂದು ಉಂಗುರವು ಸಿಕ್ಕಿತು, ಅದನ್ನು ಬೆರಳಿಗೆ ಸಿಕ್ಕಿಸುತ್ತಲೇ ಮೈ ಝುಮ್ಮೆನ್ನುವುದೆಂದೂ, ಆಗಲೇ ಅದರ ಪ್ರಭಾವವು ಆರಂಭವಾಗಿದೆ ಎಂಒ ಲೆಕ್ಕವೆಂದೂ ಸರ್ವೊತ್ತಮನು ಬರೆದಿದ್ದನು. ಇನ್ನಿದನ್ನು ಕೈಗೆ ಸಿಕ್ಕಿಸಿ ಚಂದಾದಾರರನ್ನು ಕೂಡಿಸ ಹೋಗುವೆನೆಂದು ರಘುವು, ಆ ಕೂಡಲೇ ಕೈಗೆ ಸಿಕ್ಕಿಸಿ, ನಡುಗುವ ಹೃದಯದಿಂದ ಮೈ ಜುಮ್ಮನ್ನು ಕಾಯುತ್ತ ಕುಳಿತನು. ಘಂಟೆ- ದಿನ……. ತಿಂಗಳ ತನಕ ಕಾಯ್ದನು.
ಝುಮ್ಮೇ ಇಲ್ಲ. ವಿಷಾದದ ಸಂಗ್ತಿಯೆಂದ್ರೆ-ಕುಂದಾಪುರದಲ್ಲಿ ಇವನಿಗೆ ಒಬ್ಬನಾದರೂ ಚಂದಾದಾರನು ದೊರೆಯಲಿಲ್ಲ.

ಒಂದು ತಿಂಗಳ ನಂತರ ಸರ್ವೋತ್ತಮನು ಸಿಕ್ಕಲು, ರಘವು ಕೋಪದಿಂದ ಆತನನ್ನು ಕುರಿತು – “ಏನಯಾ – ಈ ನೀಚತನವೇ?”

ಸರ್ವ – “ಏನು ನೀಚತನ?”
ರಘು – “ಉಂಗುರದ ಜುಮ್ಮು? ಇಲ್ಲವೇ ಇಲ್ಲ!”
ಸರ್ವ -ನೀನು ಅದನ್ನು ಹೇಗೆ ಕೈಗೆ ಹಾಕಿಕೊಂಡೆ?”
ರಘು- “ಟಪ್ಪಾಲಿನವನ ಕೈಯಿಂದ ಪಡೆದ ಕೂಡಲೇ.”
ಸರ್ವ – “ಆಗ ಊಟಗೀಟವಾಗಿತ್ತೇ?”
ರಘು- “ಇಲ್ಲಪ್ಪಾ -ಸ್ನಾನ ಕೂಡಾ ಆಗಿರಲಿಲ್ಲ.”
ಸರ್ವ (ಸಂತೋಷದಿಂದ) – “ಸರಿ! ನಿನ್ನಂತಹ ಮೂರ್ಖನು ನೀನೆ! ಸ್ನಾನ ಮಾಡದೆ ಕೈಬೆರಳಿಗೆ ತಾಯಿತದ ಉಂಗುರವನ್ನು ಹಾಕಿಕೊಳ್ಳುವ ಬ್ರಾಹ್ಮಣರೂ ಇರುವರೇ? ಹತ್ತು ರೂಪಾಯಿಗಳನ್ನು ನೀರಿಗೆ ಹಾಕಿದಿಯಲ್ಲ!”

ರಘುವಿಗೆ (ಆಗ ಕೈಯ್ಯಲ್ಲಿ ಉಂಗುರವಿರಲಿಲ್ಲ.) ಮೈ ಝುಮ್ಮೆಂದಿತು.

ರಘುವಿನ ೧೯೩೩ನೇ ಇಸವಿಯ ಡೈರಿಯನ್ನು ತೆಗೆದು, ದಶಂಬರ ತಿಂಗಳ ಪುಟವೊಂದರಲ್ಲಿ ನೋಡಿರಿ- “ಮೈ ಝುಮ್ಮಾಗುವ ಸುಳ್ಳಿಗೆ ಕೊಟ್ಟ ಹಣ- ಹತ್ತು ರೂಪಾಯಿ” ಎಂದು ಬರೆದಿದೆ.

ಈಗ ವರ್ಷವೇ ಕಳೆದರೂ, ಆ ತಾಯಿತವಿಲ್ಲದೆ ಅವನ ಮೈ ಆಗಾಗ ಇದನ್ನು ನೆನೆದಾಗಲೆಲ್ಲಾ ಝುಮ್ಮೆನ್ನುತ್ತಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...