Home / ಲೇಖನ / ಅರ್ಥಶಾಸ್ತ್ರ / ಮೂಲ ಪರಿಕಲ್ಪನೆಗಳು ಮತ್ತು ಹಣದ ಕಾರ್‍ಯಗಳು

ಮೂಲ ಪರಿಕಲ್ಪನೆಗಳು ಮತ್ತು ಹಣದ ಕಾರ್‍ಯಗಳು

೧.೬ ಸಾರಾಂಶ

೧. ಹಣದ ಆವಿಷ್ಕಾರಕ್ಕೂ ಮೊದಲು ವಸ್ತುವಿನಿಮಯ ವ್ಯವಸ್ಥೆ ಅನುಷ್ಠಾನದಲ್ಲಿತ್ತು. ಸರಕುಗಳಿಗೆ ಬದಲಾಗಿ ಸರಕುಗಳನ್ನು ಮತ್ತು ಸೇವೆಗಳಿಗೆ ಬದಲಾಗಿ ಸೇವೆಗಳನ್ನು ವಿನಿಮಯ ಮಾಡುವ ವ್ಯವಸ್ಥೆಯದು.

೨. ವಸ್ತು ವಿನಿಮಯ ವ್ಯವಸ್ಥೆಯ ದೋಷಗಳಿಂದಾಗಿ ಹಣದ ಆವಿಷ್ಕಾರವಾಯಿತು. ಅದಕ್ಕೂ ಮೊದಲು ಸ್ತ್ರೀಯರನ್ನು, ಗುಲಾಮರನ್ನು, ಸಾಕುಪ್ರಾಣಿಗಳನ್ನು, ದವಸಧಾನ್ಯಗಳನ್ನು, ತಪ್ಪಳ, ಚರ್ಮ, ಆನೆದಂತ, ತಂಬಾಕು, ಚಾಹುಡಿ, ಹರಳುಕಲ್ಲು, ಉಪ್ಪು ಇತ್ಯಾದಿಗಳನ್ನು ವಿನಿಮಯ ಮಾಧ್ಯಮವಾಗಿ ಬಳಸಲಾಗುತ್ತಿತ್ತು. ಹಣದ ಉಗಮವು ಮೂರು ಹಂತದಲ್ಲಾಯಿತು.
ಅ. ಸರಕುಗಳನ್ನು ವಿನಿಮಯ ಮಾಧ್ಯಮವಾಗಿ ಬಳಸುತ್ತಿದ್ದ ಹಂತ
ಆ. ಸರಕು ರೂಪದ ಹಣ, ಲೋಹದ ಹಣ ಮತ್ತು ಕಾಗದದ ಹಣದ ಆವಿಷ್ಕಾರ
ಇ. ಉದರಿ ಹಣದ ಬಳಕೆ.

೩. ಹಣವು ಒಂದು ಸರ್ವ ಸಮ್ಮತ ವಿನಿಮಯ ಮಾಧ್ಯಮವಾಗಿದೆ. ಅದರ ಕಾರ್ಯಗಳನ್ನು ಸ್ಥಿರ ಮತ್ತು ಚಲನಾತ್ಮಕ ಕಾರ್ಯಗಳೆಂದು ವರ್ಗೀಕರಿಸಲಾಗುತ್ತದೆ. ಪ್ರಧಾನ ಮತ್ತು ಆನುಷಂಗಿಕ ಕಾರ್ಯಗಳು ಸ್ಥಿರಕಾರ್ಯಗಳಾಗಿವೆ. ಉಳಿದವುಗಳು ಚಲನಾತ್ಮಕ ಕಾರ್ಯಗಳಾಗಿವೆ.

 

*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...