Home / ಕಥೆ / ಕಿರು ಕಥೆ / ಅಪರೂಪದ ಬಾಂಧವ್ಯ

ಅಪರೂಪದ ಬಾಂಧವ್ಯ

ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು.

“ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ ಅಮ್ಮ ಬೇಕಂತೆ” ಎಂದು ಪುಟ್ಟ ಸರಳ ತಂದೆಯ ಹತ್ತಿರ ಹೇಳಿದಳು.

“ಅಮ್ಮಾ! ನೀನು ನೋಡು ಬಾ, ಮುಂಗಸಿ ಮರಿಗಳು ಎಷ್ಟು ಪುಟಾಣಿಗಳಾಗಿವೆ” ಎಂದು ಕೂಗಿ ಕೂಗಿ ಸಿಂಚನ ಕರೆದಳು.

ಮಕ್ಕಳ ಕೂಗಿಗೆ ಓಡಿಬಂದರು ಶರ್ಮ ದಂಪತಿಗಳು. ಅವರ ಜೊತೆ ಒಳಗಿದ್ದ ನಾಯಿಯು ಬಂದು ಎಲ್ಲರೂ ಚೀರಾಡುತ್ತಿದ್ದ ಮುಂಗಸಿ ಮರಿಗಳಿಗೇನು ಮಾಡಬೇಕೆಂದು ಯೋಚಿಸುತ್ತಿದ್ದರು.

“ಅಮ್ಮಾ! ನಾನು ಬಿಸ್ಕಟ್ ತಂದು ಕೊಡುವೆ” ಅಂತ ಸರಳ ಒಳಗೆ ಓಡಿದಳು.

“ಅಮ್ಮಾ! ನಾನು ಬ್ರೆಡ್ ಕೊಡ್ಲಾ?” ಅಂತ ಸಿಂಚನ ಕುಣಿದು ಕುಣಿದು ಅಮ್ಮನ ಕೇಳಿದಳು. ೧೦, ೮ ವರ್ಷದ ಸರಳ ಸಿಂಚನಾರಿಗೆ ಮುಂಗಸಿ ಮರಿಗಳ ಗೋಳಾಟ ನೋಡಲಾಗಲಿಲ್ಲ.

ಶರ್ಮಾ ದಂಪತಿಗಳಿಗೂ ಕರುಳು ಚುರ್ ಅಂದಿತು. ಅಸಹಾಯಕ ಪುಟ್ಟ ಮರಿಗಳೂ ಅನಾಥವಾಗಿರುವುದು ನೋಡಿ ಹೇಗೆ ಸುಧಾರಿಸಬೇಕೆಂದು ತಿಳಿಯಲಿಲ್ಲ.

ಹುಮನಾಬಾದಿನ ಸಂತಪುರದ ಅವರ ಮನೆಯ ಮುಂದೆ ಒಂದು ಸಣ್ಣ ತೋಟವೂ ಇತ್ತು. ತೋಟದ ಕಾಂಪೌಂಡಿನಲ್ಲಿ ಬಿದ್ದಿದ್ದ ಮರಿಗಳನ್ನು ಮನೆ ಒಳಗೆ ಅಂಗಳಕ್ಕೆ ತಂದರು. ಅದಕ್ಕೆ ಹಾಲು ನೀರು ಬಿಸ್ಕತ್ ಬ್ರೆಡ್ ಎಲ್ಲಾ ಕೊಟ್ಟು ನೋಡಿದರು. ಮುಂಗಸಿಯ ಮಟ್ಟ ಕಂದಮ್ಮಗಳು ಯಾವುದನ್ನೂ ಮುಟ್ಟಲಿಲ್ಲ. ಒಂದೇ ಸಮನೆ ಚೀರಾಡಿ ಅಸಹಕಾಯತೆ ತೋರುತ್ತಿದ್ದವು.

ಶರ್ಮಾ ದಂಪತಿಗಳಿಗಾಗಲಿ ಮಕ್ಕಳ ಆರೈಕೆಯಿಂದಾಗಲಿ ಮುಂಗಸಿ ಮರಿಗಳು ಸುಮ್ಮನಾಗಲಿಲ್ಲ. ಏನು ಮಾಡಲು ತೋಚದೆ ಒದ್ದಾಡುತ್ತಿರುವಾಗ ಅವರ ಮನೆಯ ನಾಯಿ ತಾಯ್ತತನಕ್ಕೆ ಸಿದ್ಧವಾಗಿ ಮುಂದೆ ಬಂದಿತು.

ಎರಡು ಮುಂಗುಸಿ ಮರಿಗಳನ್ನು ಬಹಳ ನಾಜೂಕಾಗಿ ಮೆತ್ತಗೆ ಬಾಯಲ್ಲಿರಿಸಿಕೊಂಡು ಮನೆ ಒಳಗೆ ತಂದಿತು. ಶರ್ಮಾ ದಂಪತಿಗಳಿಗೆ ನಾಯಿರಾಣಿ ಮುಂಗಸಿ ಮರಿಗಳನ್ನು ಹಾನಿ ಮಾಡಿಬಿಡುವುದೋ ಎಂದು ಹೆದರುತ್ತಿದ್ದರು. ಆದರೆ ಅವರು ಕಂಡದ್ದೇ ಬೇರೆ ಪುಟ್ಟ ಮರಿಗಳಿಗೆಂದು ಒಂದು ಕಾರ್ಡು ಬೋರ್ಡ್ ಹಾಸಿ ಅದರ ಮೇಲೆ ಒಂದು ಹಳೆಯ ಬಟ್ಟೆ ಹಾಸಿ ಇಟ್ಟರು. ನಾಯಿ ರಾಣಿ ಮುಂಗಸಿ ಮರಿಗಳನ್ನು ಅದರ ಮೇಲೆ ಇಟ್ಟು ತಾವು ಅವುಗಳಿಗೆ ಹತ್ತಿರವಾಗಿ ಒರಗಿಕೊಂಡಿತು. ಮರಿಗಳಿಗೆ ತಾಯಿ ಸಿಕ್ಕಂತೆ ಅನಿಸಿತು. ರಾಣಿ ನಾಯಿಯ ಸ್ಪರ್ಶಕ್ಕೆ ಭದ್ರತೆ ಕೊಟ್ಟಿತು. ರಾಣಿ ನಾಯಿ ತನ್ನ ನಾಲಿಗೆಯಿಂದ ಮರಿಗಳನ್ನು ನೆಕ್ಕಿ ಸೇವರಿಸುವಾಗ ಶರ್ಮಾ ದಂಪತಿಗಳು ಹೆದರುತ್ತಿದ್ದರು. ನಾಯಿಯಲ್ಲಿ ತಾಯ್ತತನದ ಮಮತೆ ಜಾಗೃತವಾಗಿದ್ದು ಅದು ಮುಂಗಸಿ ಮರಿಗಳನ್ನು ಮರಿಗಳಂತೆ ಕಾಣತೊಡಗಿತು. ಅಂದು ರಾತ್ರಿ ಚೀರಾಟವಿಲ್ಲದೆ ಮುಂಗಸಿ ಮರಿಗಳು ರಾಣಿನಾಯಿಯ ಮಡಿಲಲ್ಲಿ ಶಾಂತವಾಗಿ ಮಲಗಿದವು.

ಸರಳ ಸಿಂಚನಾಗೆ ಬೆಳಗಾಗುತ್ತಲೇ ನಾಯಿ ಮುಂಗಸಿ ಮರಿಗಳನ್ನು ಮಲಗಿಸಿಕೊಂಡಿರುವುದನ್ನು ನೋಡಿ ಬಲು ಸಂತಸದಿಂದ ಕುಣಿದಾಡಿದರು. ಶರ್ಮಾ ದಂಪತಿಗಳಿಗಾದ ಮತ್ತೊಂದು ಆಶ್ಚರ್ಯವೆಂದರೆ ನಾಯಿ ಇನ್ನು ಮರಿಹಾಕದೇ ಇರುವಾಗ ಮುಂಗುಸಿ ಮರಿಗಳಿಗೆ ಅದು ನೆಮ್ಮದಿಯಿಂದ ಹಾಲುಣಿಸುತಿತ್ತು ಮುಂಗುಸಿ ಮೇಲೆ ರಾಣಿ ನಾಯಿ ತೋರುವ ಪ್ರೀತಿ ವಿಚಿತ್ರ ಅದ್ಭುತ ಅಪರೂಪ ಎನಿಸತೊಡಗಿತು.

ಏತನ್ಮಧ್ಯೆ ಈ ಅಪರೂಪದ ಬಾಂಧವ್ಯದ ಸುದ್ದಿ ಊರಲ್ಲೆಲ್ಲಾ ಹರಡಿತು. ಜನರು ಸಾಲುಗಟ್ಟಿ ಬಂದು “ಇದು ಹ್ಯಾಗೆ ಸಾಧ್ಯ?” ಎಂದು ಮೂಗಿನ ಮೇಲೆ ಬೆರಳಿಟ್ಟು ಕೊಳ್ಳುತ್ತಿದ್ದರು.

ಬೀದಿಯಲ್ಲಿ ಅನಾಥರಾಗಿ ಬಿದ್ದ ಮುದುಕರನ್ನಾಗಲಿ, ಮಕ್ಕಳನ್ನಾಗಲಿ ಕಣ್ಣೆತ್ತಿ ನೋಡುವ ಮನುಷ್ಯತ್ವವಿಲ್ಲದೆ ಮಾನವ ಒಂದು ಕಡೆ, ತನ್ನ ಮಗುವಲ್ಲದ ಮುಂಗುಸಿಯನ್ನು ಮಮತೆಯಿಂದ ಹಾಲುಣಿಸಿವ ನಾಯಿ ಮತ್ತೊಂದು ಕಡೆ. ಮನುಷ್ಯತ್ವವನ್ನು ಹೊಂದಿದ ನಾಯಿ ಎಲ್ಲಿ? ಸ್ವಾರ್ಥಿಯಾಗಿ ಮನುಷ್ಯತ್ವ ತೊರೆದ ಮಾನವನೆಲ್ಲಿ? ಎಂದು ನೆರೆದ ಜನರು ಮಾತಾಡಿಕೊಂಡು ರಾಣಿ ನಾಯಿಯನ್ನು ಹೊಗಳಿ ಹಾಡಿದರು.

ಮಾರನೆಯ ದಿನ ಅದು ದೇಶದ ಎಲ್ಲಾ ಪತ್ರಿಕೆಗಳಲ್ಲಿ ಟಿ.ವಿ.ಗಳಲ್ಲಿ ರಾಣಿನಾಯಿ ಮುಂಗುಸಿ ಮರಿಗಳಿಗೆ ಹಾಲುಣಿಸುವ ಚಿತ್ರ ಮತ್ತು ಅದರ ದೈವಿ ಪ್ರೀತಿ ಕರುಣೆಯ ಬಗ್ಗೆ ದೊಡ್ಡ ಸುದ್ದಿಯಾಯಿತು.

ರಾಣನಾಯಿಯ ಕೀರ್ತಿ ತಾಯ್ತನದ ಪ್ರೀತಿಯಿಂದ ಶರ್ಮಾ ದಂಪತಿಗಳು ಅತ್ಯಂತ ಹರ್ಷಿತರಾದರು. ನೀವು ಸಾಕಿದ ನಾಯಿ ನಿಮ್ಮ ಸಾತ್ವಿಕತೆ ಮಮತೆಯನ್ನೇ ಪ್ರತಿಬಿಂಬಿಸಿದೆ ಎಂದು ಎಲ್ಲರೂ ಅವರನ್ನು ಅಭಿನಂದಿಸಿದರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...