Home / ಲೇಖನ / ಹಾಸ್ಯ / ಕಲಿಯುಗದ ಹರಿಶ್ಚಂದ್ರ ಅರ್ಥಾತ್ ಸಾಕ್ಷೀದಾರ

ಕಲಿಯುಗದ ಹರಿಶ್ಚಂದ್ರ ಅರ್ಥಾತ್ ಸಾಕ್ಷೀದಾರ

(ವಿಜಾಪುರ ಡೋಣಿಸಾಲಿನ ಭಾಷೆಯಲ್ಲಿದೆ)

ರಾಮಣ್ಣ- ನಟ್ಟ ಕಡದಾದ್ರೂ ಖರೇತನದಿಂದ ಹೊಟ್ಟೀ ತುಂಬಿಕೋ ಬೇಕಂತ ಶಾಸ್ತ್ರಾ ಹೇಳ್ಳಾಕ ಬಂದಾರು ಶಾಸ್ತ್ರಾನ ಏ. ಯಾರು ಕೇಳಿದ್ರ ನನ್ನ, ನಟ್ಟು ಕಡೂಮುಂದಽ. ಎಷ್ಟ ನಶಿಕ್ಲೆ ಹೋದ್ರೂ ತಡಾಯಾಕಂತ ಕೇಳವ್ರಽ ಮತ್ತ ನಟ್ಟ ಕಡದ ಮ್ಯಾಲ ಹೆಂಟಿ ಉಳಿದೂವು ಪಳಿ ಉಳಿದೂವು ಗುದ್ಲಿ ನೆಟ್ಗ ಇಳಿಸಿಲ್ಲಾಽ ಬಿಸಲ್ನೆತ್ತಿಮ್ಯಾಗ ಬಂದಿಲ್ಲಾಽ ಇನ್ನೂ ಆರತಾಸ ಆಗಿಲ್ಲಾ ಒಂದಽ ಎರಡಽ ನೂರನೆವಾ ಹೇಳಿ ಎರಡು ಸೇರ ಸರಗ ಜೋಳ ಕೂಲಿ ಅಳೀಬೇಕಾದ್ರ ಮೂರ್‍ಕೆರೀ ನೀರ್‍ಕುಸ್ಬಿಡತಿದ್ರಪಾ, ಗೋಳು. ನಟ್ಟಿನ ಹೊಲದಾಗ ಕಾಕುಳ್ಳ ಕೂಡಿಸಿ ಚಾ ಮಾಡಿ ಕುಡದ್ದ್ರ ತಮ್ಮಪ್ಪನ ಗಂಟಽ ಹೋದ್ಹಾಂಗ ಮಾಡತಿದ್ದ್ರು. ಎಕ್ಕೀ ಎಲೀ ಬತ್ತಿ ಕಟ್ಟಿ ತಂಬಾಕ ಸೇದಿದ್ರ ಕಂಣು ಕೆಂಪ ಮಾಡ್ತಿದ್ರಣ್ಣವರು. ಅವಽ.

ಈ ಗ್ಹಾಂಗಾಗೇತಿ? ಗಳಿಗ್ಗೊಮ್ಮೆ ರಾಮಣ್ಣಾ! ಚುಟ್ಟಾ ಬೇಕಽ ಬಿಳಿ ಬಿತ್ತಿಬೇಕಽ ಅಂತ ಕೇಳೇ ಕೇಳ್ಸೂದು. ಹರ್‍ಯಾಗ ಎಳಾಣ ಚಾದಂಗ್ಡಿ ತಿಂದಷ್ಟ ಕಾರಾ, ಕುಡದಟ್ಟಚಾ. ಎರಡೂ ಹೊತ್ತು ಕಾನಾವಳಿ ಊಟಾ ಕಟ್ಟೀ ತುದಿಗೆ ನಿಂದ್ರಗೊಡ್ತಿದ್ದಿಲ್ಲ ನಮ್ಮನ್ನ ವಕೀಲರಮನ್ಯಾಗ. ಅದಽ ಈಗ ವಕೀಲರ ಮನೀಗೆ ಹೋಗಾಣಾ. “ಮ್ಯಾಲೆ ಬಾ ರಾಮಣ್ಣಾ ಇಲ್ಲಿ ಕೂಡಬಾ ಅಲ್ಲಿ ಕೂಡ ಬಾ. ಅಂತ ವಕೀಲರು ಕಾರಕೂನರು ಎಲ್ಲಾರು ಕ್ಯೂವರಽ. ನನಗೂ ಇದೆಲ್ಲಾ ಗತ್ತು ಗೊತ್ತೈತಿ. ಹಗರ ಎದ್ದು ಈಗ ಒಂಜರಾ ಪ್ಯಾಟ್ಯ್ಯಾಗ ದಗದೈತಿ ಹೋಗಿ ಬರ್‍ತೀನಂತ ಎದ್ದ ಏಳತೀನು. ಏಳಾಣ ಹೀಂಗ ಮಜಾಆಗ್ತೈತಿ, ಎಲ್ಯಾರೆ ಸಾಕ್ಷೀ ಒಡದಗಿಡದೀತಂತ ಬೆನ್ನ ಹತ್ತತಾರ.

ಎಲ್ಹೊಂಟಿ ರಾಮಣ್ಣಾ ಅಂತ ಕುಂಡ್ರ ಸತಾರ. ಇಲ್ಲಪಾ. ಹಿರ್‍ಯಾಳಿಗೊಂದು ಗಚ್ಚಿನ್ದಡೀ ಸೀರಿ ಬೇಕು. ಪ್ಯಾಟ್ಯಾಗ ಹೋಗ್ಬರ್‍ತೀನಂತ ಅಂತಿದೇನು. ನನ್ನ ಬೆನ್ಹತ್ತಿ ಬಂದು ಸೀರಿ ಕೊಡಸ್ತಾರು ಖಣಽ ಕೊಡಸ್ತಾರು. ಎಲ್ಲಾ ಕೊಡಿಸಿ ಮತ್ತ ತಿರಗಿ ವಕೀಲರ ಮನೀಗೆ ಕರಕೊಂಡು ಬರತಾರ. ಈಗತ್ತು, ಮಾಡದ ಹೊರ್‍ತ ಗತೀನ ಇಲ್ಲಾ. ಇಲ್ದಿದ್ರ ಮನೀಖರ್ಚ ನಡಿಯೂ ಬಗೀ ಹ್ಯಾಂಗ?

ಹೌದು ಹೌದು ನಾವು ರೊಕ್ಕಾತಗೊಂಡ ಸಾಕ್ಷೀಬರ್‍ತೀವಿ. ನಮ್ಮನೀ ಅನ್ನ ಉಂಡು, ನೋಡದ ಕೇಳದ ನೋಡಿದ್ಹಾಂಗ ಕೇಳಿದ್ಹಾಂಗ ಹೇಳ ಬೇಕಾದ್ರ ಪುಗಸಟ್ಟೆ ಐತೆ? ಅದರಾಗ ಅವರ ವಕೀಲ ಹಡ್ಡಿ ಹಡ್ಡಿ ಕೇಳಾಂವಾ. ಎಲ್ನಿಂತ್ತಿದ್ದಿ? ಎಲ್ಕುಂತಿದ್ದಿ? ಮಾರಿ ಯಾವ ದಿಕ್ಕಿಗಿತ್ತು? ಬೆನ್ನಯಾವ ದಿಕ್ಕಿಗಿತ್ತು? ಮಾಡಹಾಕಿತ್ತೋ? ಬಿಸಲ್ಬಿದ್ದಿತ್ತೋ? ಏಡಕ್ಯಾರಿದ್ರು? ಬಲಕ್ಯಾರಿದ್ರು? ಹಿಂದೇನಿತ್ತು? ಮುಂದೇನಿತ್ತು? ಅಂತ ಒಂದಽ ಎರಡಽ ಸಾವಿರ ಕೇಳಾಂವಾ. ಅದಕ್ಕೆಲ್ಲಾಕೂ ಜವಾಬ ಕೂಡಬೇಕಾದ್ರ ಮನಿಷ್ಯಾ ಹುಶ್ಯಾರ ಇರಬೇಕು.

ಇಲ್ಲಿದ್ರ ಅಂದಾಕರಾ ಬೆರಕಿ ಮಕ್ಕಳು ವಕೀಲರು. ಹಗರಕಽ ಒಯ್ದು ತೆಗ್ಗಿನ್ಯಾಗ ಹಾಕ್ತಾರು. ಸಾಕ್ಷಿದಾರನ ದಗದ ಬಲು ಬೆಂಡ್ಲ ದಗದ. ಸುಳ್ಳಿಂದು ಖರೇ ಹಾಂಗ ಹೇಳಬೇಕು. ಖರೇ ಇದ್ರೂ ಸುಳ್ಳು ಕಾಣ್ಣಾಂಗಿದ್ರ, ಅದನ್ನು ಹೇಳಬಾರದು. ಹಿಂಗ ಮಾಡಿದ್ರನ ರಾಮಣ್ಣಾ, ರಾಮಣ್ಣಾ ಅಂತ ಕರಕೊಂಡು ಹೋಗಿ ಗೋದಿರೊಟ್ಟಿ ಬಾಳೀಹಣ್ಣ ತಿನಸ್ತಾರ, ಇಲ್ದಿದ್ರ ಪುಂಡೀಪಲ್ಯಾ ತಂಗಳ ರೊಟ್ಟಿ ಸಿಗಬೇಕಾದ್ರ ಕಣ್ಣೀರ ಕಪಾಳಿಗೆ ಬರ್‍ತಾವ. ತಿಳಿತಽ, ನಟ್ಟ ಗಿಟ್ಟು ಎಲ್ಲಾಸುಳ್ಳು. ಸುಳ್ಳ ಸಾಕ್ಷೀ ನುಡೀಲಾಕ ಕಲೀಬೇಕು ಆಂದ್ರನಽ ನಾಕೊಪ್ಪತ್ತು ದೇವರು ಹೊಟ್ಟಿ ಸಾಗಸ್ತಾನ, ತೀಳೀತಽ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...