Home / ಲೇಖನ / ಹಾಸ್ಯ / ಆತಿಥ್ಯ

ಆತಿಥ್ಯ

(ಹಳ್ಳಿ ಯೂರ ಸಭ್ಯಗೃಹಸ್ಥರೊಬ್ಬರ ಮನೆ; ಅತಿಥಿಗಳೊಬ್ಬರು ಮನೆಗೆ ಬರುವರು ಮನೆಯ ಯಜಮಾನನು ಗಡಬಡಿಸಿ ಎದ್ದು ನುಡಿಯುವನು)

“ಆಲಲ ರಾಯರ ಬರೋಣಾಯ್ತೇನು?…. ಬರಬೇಕ…. ಬರಬೇಕು. ಇದೇನಿದು ಬಡವರ ಮನೀಗೆ ಭಾಗೀರಥಿ ಬಂದಹಾಂಗ?…. ಇಲ್ಲೆ ,ಇಲ್ಲೆ ಮ್ಯಾಲೆ ಕೂಡ್ರಿ ರಾಯರಽ! ಎಲೋ… ಯಾರಾವರು….? ದಿಂಬೆಲ್ಲಿ ಅದನೋ….? ತಾ; ತಾ, ಲಗೂನಽ ತಾ! ಏನಪಾ… ಈ ಹುಡಗೋರು….! ಇಟ್ಟದ್ದು ಇಟ್ಟಲ್ಲಿ ಇರಗೊಡೂಹಾಂಗಽ ಇಲ್ಲ! ಕೂಡ್ರಿ ರಾಯರಽ ಕೂಡ್ರಿ….! ಹುಡುಗೂರ ಕಾಲಾಗ ಬ್ಯಾಸತ್ತು ಹೋಗಿನ್‌ ನೋಡ್ರಿ… ಅತು ಹಾಸಗೀ ಸುರಳೀಗೆ ನಂಬಿ ಕೂತುಗೊಳ್ರಿ! ಏನು ಚಹ ಆಗಬೇಕೊ, ಕಾಫಿಯೋ, ಹಾಲೊ….? ಏನುಬೇಕು ಹೇಳ್ರಿ! ಒಲ್ಲೇ ಅಂದ್ರ ಕೇಳೂಹಾಂಗಿಲ್ಲ… ಬಡವರ ಮನೀಗೆ ಬಂದು ಏನು ಹಾಂಗಽ ಹೋಗತೀರಾ? ನಾಳೆ ನಿಮ್ಮ ಮನೀ ಮುಂದ ನಾಲಗೀ ಕಿತ್ತಿಗೊಂಡು ಪ್ರಾಣಾ ಕೊಟ್ಟೇನು!”

“ಏ…! ಒಳಗ ಹೇಳೊ ರಾಯರಿಗೆ ಸ್ವಲ್ಪ ಸಜ್ಜಗೀ ಮಾಡಂತ ಹೇಳು….! ಮತ್ತ ಸಜ್ಜಗೀ ತುಪ್ಪದಾಗ ಕರೀಲಿಕ್ಕೆ ಹೇಳು….! ಇಲ್ಲದಿದ್ದರ ಏನ ಕೇಳತೀ ಅದು ಡೊಣಿಸಾಲ ಹೆಣ್ಣು! ನುಚ್ಚು ಕುದಿಸಿ ಇಟ್ಟೀತು…! ಸೀ ಸಜ್ಜಗೀ ಅಂತ ಹೇಳು ಮತ್ತೆ…! ಇಲ್ನೋಡು, ಒಮಗಿಲೆ ಓಡಬ್ಯಾಡ! ಕಿವಿ ಕಿತ್ತೇನು… ಪೂರಾ ಕೇಳಿಕೊಂಡು ಹೋಗು! ಬರೇ ಸೀ ಆದರ ನೆಟ್ಟಗಾಗೂದಿಲ್ಲ, ಸ್ಪಲ್ಪ ಅವಲಕ್ಕೀ ಒಗ್ಗರಣೀ ಹಾಕಲಿಕ್ಕೆ ಹೇಳು….! ಎಲೆಯಲ್ಲಾ! ಗೌಡರ ಹಿತ್ತಲಾಗಿಂದಽ ಕರೀಬೇವು ಇಸಗೊಂಡು ಬಾರೊ-ಅವಲಕ್ಕಿಗೆ-ಅವಲಕ್ಕಿ ಘಮಾ ಘಮಾ ಆಗಲಿ!…. ಚಹಾಕ್ಕ ಒಂದು ಬ್ಯಾರೆ ಎಸರಿಡಲಿಕ್ಕೆ ಹೇಳು ಸುಳ್ಳಽ ತಡಾ ಮಾಡಬ್ಯಾಡ್ರಿ!”

“ಎಲೊ-ಅಳಮಾರೀಗಂಡೇ! ಗಂಡಸಽ ನೀನು?…. ‘ಸಕ್ರಿಲ್ಲಾ-ಚಹಾ ಇಲ್ಲಾ-’ ಹೇಳಲಿಕ್ಕೆ ಬಂದಾನ ಅತುಗೋತ….! ಹೋಗು ಓಡು ಜಲ್‌ದಿ…, ಚೆನಬಸಪ್ಪನ ಅಂಗಡಿಗೆ ಹೋಗು, ನಾ ಹೇಳಿನಿ ಅಂತ ಹೇಳು! ಅತಗೋತಾಽ ತಿರಿಗಿ ಬರಬ್ಯಾಡ! ಕಾಲು ಮುರದೀನು, ಹಾಂಗ ಹೀಂಗ ಅಂತ ಚೆನಬಸಪ್ಪ ಅದಽ ಮಾತು ಹಚ್ಚಾನು…., ರಾಯರು ಬಂದು ಕೂತಾರಂತ ಹೇಳು, ಇಲ್ನೋಡು…. ಹಂಗಽ ನಾಲ್ಕು ಅಡಕಿ ಒಂದ್ನಾಲ್ಕು ಲವಂಗ, ಒಂದು ಕಾಚಿನ ಹಳ್ಳು ಕೊಡಂತ ಹೇಳು-ಚೆನಬಸಪ್ಪಗ… ಲಗೂ ಬಾ, ಬಿಸಲಾಯ್ತು….!

“ಏನಂತಾರೋ ಒಳಗ….? ತುಪ್ಪಿಲ್ಲಂತ….? ಇಷ್ಟೊತ್ತು ಏನು ಮಾಡತಿದ್ಲು….! ಹೇಳಲಿಕ್ಕೇನಾಗಿತ್ತು-ಹುಣ್ಣಾಗಿತ್ತೇನು ಬಾಯಿಗೆ….? ತುಪ್ಪ ತೀರಿಹೋಯ್ತೇನು? ಇದಽ, ಇಂದ ಇನ್ನೂ ಮಂಗಳವಾರ… ಶನಿವಾರ ಸಂತೀ ದಿನ ಮೂರು ಸೇರು ಬೆಣ್ಣೆ ತಂದಿತ್ತು….; ಏನು ಎರಕೋತಾಳೋ ಏನೊ ತುಪ್ಪದಲೆ! ಎಷ್ಟು ತಂದರೂ ಈಡಽ ಆಗೋದಿಲ್ಲ…! ಹೋಗೋ ದಾಮೂ; ಕುಲಕರ್ಣ್ಯಾರ ಮನ್ಯಾಗ ತುಪ್ಪಾ ಇಸಗೊಂಡು ಬಾ… ಸಂತೀ ದಿವಸ ಕೊಡತೀವಂತ್‌ ಹೇಳು! ಕೂಡ್ರಿ ರಾಯರಽ ತಡಾ ಅತ್ಯು! ಹತ್ತ ನಿಮಿಷದಾಗಽ ಚಹಾ ಆಗತದ…; ಎಂದೂ ಬಾರದವರು. ಹಂಗಽ ಕಳಿಸೂದು ನಮ್ಮ ಧರ್ಮಽ?

“ಏನದೂ….? ಗುರೂಗುರೂ ಸಪ್ಪಳ್ಯಾತರದು? ಸಜ್ಜಗೀ ಒಡೀತಾರ….? ಬೇಶ್‌ ಬೇಶ್‌ ಇದ್ದರಿಂಥಾ ಹೆಣ್ಣು ಇರಬೇಕು….; ಲಗೂ ಆಗಲೀ ಅಂತ ಹೇಳು. ರಾಯರು ಹಸದಿದ್ದರು….”

(ಒತ್ತಾಯದ ಕೆಮ್ಮನ್ನು ತಂದುಕೊಂಡು ಖೇಕರಿಸಿ ಉಗಳಲೆಂದು ಹೊರಗೆ ಹೋದ ರಾಯರು ಮೊಚ್ಚೆಯ ಪರಿವೆಯಿಲ್ಲದೆ ಊರಿನ ವರೆಗೆ ಓಡಿ ಬಿಟ್ಟರು.)
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...