Home / ಲೇಖನ / ಹಾಸ್ಯ / ಜೀವಂತ ಜ್ವಾಲಾಮುಖಿ ಅಥವಾ ಹಳ್ಳಿಯ ಸೊಸ್ತ್ಯಾರು

ಜೀವಂತ ಜ್ವಾಲಾಮುಖಿ ಅಥವಾ ಹಳ್ಳಿಯ ಸೊಸ್ತ್ಯಾರು

“ಅಯ್ಯ ಶಿವನಽಽ….,’ ಸೊಸ್ತ್ಯಾರು ಮಕ್ಕಳು ನೂಲತಿದ್ದರ ನನ್ನ ಗತಿ ಹಿಂಗ್ಯಾಂಕ ಆಗತಿತ್ತೊ ಯಪ್ಪಾ!…….. ಇವರೆಲ್ಯಾರೇ ದಗದಾ ಮಾಡವರಽ ದಗದಾ? ಹತ್ತಿ ಅರೀಲಾಕ ಕಲ್ಲ ಇಡ್ರೇ ಅಂದರ ನಡಾ ನೂಸತೈತಿ. ಪಿಂಡ್ರಿ ನೂಸತಾವು…. ಅಂತಾರು! ಒಂದಽ ಒಂದ ಧಡೆ ಕಾಳು ಆರೂದ್ರಾಗಽ ಚರೀನ ಕಟ್ತಾರ ಮ್ಯಾಗಿಂದ ತೆಳತನಕಾ! ಇದರಾ ಬದರಾ ಕಟ್ಟೀ ಮ್ಯಾಗ ಕುಂತು ಚಕ್ಕಂದ ಆಡಲಾಕ ಕಲ್ತಾರ ಚಕ್ಕಂದಾ!!!

“ಎಮ್ಮಿ ಮೈತೊಳಕೊಂಡ ಬಾ ಅಂದರ ಹಳ್ಳದ ದಂಡಿ ಮ್ಯಾಗ ಹಿಂಬಡಾ ತಿಕ್ಕೊಂತಽ ಕೂಂಡ್ರತಾಳ ನನ್ನ ಸೊಸಿ….! ಎಮ್ಮಿ ಬಾಲಕ್ಕ ಹತ್ತಿದ್ದ ಹೆಂಡಿ (ಶೆಗಣಿ) ಹಂಗಽ ಇರತೈತಿ…ಈ ಚದುರಿಽ ಮುರಕಾ ಮಾಡಿಕೊತೇಽ ತಿರತಿರಗಿ ಹಿಂಬಡಾ ನೋಡಿಕೋತಽ ಬರತಿರತಾಳ ಓಣಿಗುಂಟ. ಇಕಿ ಹೀಂಗ ಬರೂದರೊಳಗಽ ಎಮ್ಮಿ, ಕರೀಗೆ ಹಾಲುಣಸಿ ಬಿಟ್ಟಿರತೈತಿ… ಆತಲ್ಲಾ ಮುಗದಽ ಹೋತು”

“ಇವರನ್ನ ಸಂತಿ ಮಾಡಿಕೊಂಡು ಬರಲಾಕ ಕಳಸೂದಽ ಪಂಚೇತಿ ಐತ್ರಿ…. ಮುಂಗೈ ಮ್ಯಾಲಿನ ಹಚ್ಚೀಬಟ್ಟು ನೋಡಿಕೋತ ತಕ್ಕಡೀ ಹಿಡಿದರ ಏಲ್ಯಾರೆ ತೂಕ ಆಕ್ಕೈತೆ? ಆದರಾಗೂ ಕಳಕೊಳ್ಳೊದಽ ಮಾತ್ರ. ಬೆಣ್ಣೀ ಮಾರಿ ಕಂಡ್ಹಾಳ (ಕನ್ನಡಿ) ಕೊಳ್ಳೂ ಅವರನ್ನ ನೀ ಎಲ್ಲ್ಯಾರ ನೋಡೀದೀಯಾ ಯಪ್ಪಾ? ಹುಟ್ಟಿ ಮೂರಿಪ್ಪತ್ತರ ಮ್ಯಾಲೆ ಹತ್ತವರಸ ಆದೂ……. ನಾ ಹೆಣ ಮಗಳ ಇನ್ನೂವರಿಗೂ ಒಂದಿನಾ ಕಂಡ್ಹಂಳ್ಳ ಕೈಯಾಗ ಹಿಡಿದಿಲ್ಲ…? ಈಕಿ ನನ್ನ ಸೊಸಿ!… ಮುಚ್ಚೌಲು ಕೊಟ್ಟು ಕಂಡ್ಹಳ್ಳ ಕೊಂಡುಕೊಂಡು ಬಂದಾಳ. ಇದಕ್ಕ ಏನಿನ್ನ ಹಣೀಹಣೀ ಗಟ್ಟಿಸಿಕೊಂಡ್ರನಽ ಸರಿ! ಸಂತಿಗೆ ಹೋಗೂ ದಂದರಽ ಎಲ್ಲಮ್ಮನ ಜಾತರಿಗ್ಹೋದ್ಹಾಂಗ ಮಾಡ್ತಾರ! ಇವರ ಆದವಾನೀ ಕರೆ ಅಂಚಿನಸೀರಿ ಇವರ ಜರಾಗೊಂಡೇವಹಚ್ಚಿದ ಚೆಪ್ಪಲಿ ಏನ ಹೇಳ್ಯೂ ಯಪ್ಪಾ; ಎಲ್ಲಾ ದಿವಸಾನಽ ಉಪರಾಟೇ ಬಂದಾವು!

“ಗಂಡಂದಿರ ಅಂಜಿಕ್ಯಂತ!… ಇದಕೇಳ್ರಿ ನಗ್ಗೇಡು….! ಗಂಡಂದಿರ ಅಂಜಿಕೆ ಇವರಿಗೆ ಎಲ್ಲೈತೊ ನನ್ನ ಮಗನಽ! ಹೆಂಡಂದಿರ ಸೀರಿ ಒಗೆಯೊ ಈ ಹೊಲಸ ಗೋಳು, ಹೆಣತಿನ್ನ ಅಂಜಿಕ್ಯಾಗಿಡತಾವಽ….! ಇವು ಎಲ್ಯಾರೆ ಬಲೂರೀ…. ಹಾಕ್ಕೊಂತ ಗೊಬ್ಬರ ಬಂಡೀನ ಹೊಡೀಬೇಕು. ಹೆಂಡರು ಇವರ ಮಾತ ಕೇಳಿದರ ಮಳೀಬೆಳಿ ಯಾಕ ಹೋಗತಿತ್ತು!”

“ಈಗಿನ ಕಾಲನಽ ಬ್ಯಾರೆ ಬಂದೈತಿ! ನೂಲವರೆಲ್ಲಾ ಸತ್ತಸತ್ತ ಹೋದರು….; ಇಲ್ಲೆ ಈ ನ್ಯಾಮದೇವರ ಕಟ್ಟೀಮ್ಯಾಗ ಆರಾರು ತಾಸು ರಾತ್ರೀ ತಂಕಾ ‘ರಂವ್‌ ರಂವ್‌’ ಅಂತ ನೂಲೂದಽ ನೂಲದು….; ಸೇರು ಹಂಜೀ ನೂಲೂದರೊಳಗ ಗಿರಪಾವು ಕಡ್ಲೀ ತಿಂತಿದ್ಲು ನಮ್ಮ ಅತ್ತಿ….! ಈಗಿನ ಹೆಣ್ಣಽ! ಹಾಲೂ ಅನ್ನಾ ಉಂಡು ಹಾಸು ಹೊಯ್ಯಽ ನನ್ನ ಮಗಳಽ ಅಂದರಽ ನಾ ಊರನ್ನ ನೋಡಿಕೊಂತಽ ನೀರ ತರತೀವಿ ಅಂತಾವು, ತಮ್ಮಾ…? ನೋಡೊಽ ಯಪ್ಪಾ ನೋಡು; ನಾ ಬೇದಽ ಬೆಯ್ಯತೇನು, ಅವಕ್ಕ ಏನಾರೆ ಬುದ್ದಿ ಐತೇ ನೋಡು ಹ್ಯಾಂಗ ಖಿಸಿ ಖಿಸಿ ಹಲ್ಲ ಕಿಸೂತಾವ! ಸುಟ್ಟಶಿವಾ ಮರತಾನ್ನ ನನ್ನ! ಏನು ಮಾಡೂದೈತಿ?…. ಅಷ್ಟಽ ಉಪ್ಪು ಮೆಣಸಿನಕಾಯಿ ಆದೀತು. ಬಡತನದ ಜಲಮ ಯಪ್ಪಾ….! ಕಾರಹುಣ್ಣವೀ ಆಗಾಣಾ ಜಂತ್ರಾ ಇಡತೇನಿ ತಮ್ಮಾ! ಇವರೀಗೇನ ಇಲ್ಲಿದ್ರೂ? ನನಗ್ಯಾಂಗ ಬಿಟ್ಟೀ-ತಪ್ಪಾ ನೋಡ್ರಿ!!!”
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...