Home / ಕವನ / ಕವಿತೆ / ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ?

ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ?

ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ?
ಸಾಕು, ಸುತ್ತಲು ನೋಡು ಕಣ್ತೆರೆದು ನಿಂದು;
ಲೋಕದಲಿ ವಂದೆ ಮಾತರಮೆಂಬುದೊಂದೆ ಮಾ
ತೀ ಕಿವಿಯನೊಡೆಯುತಿರೆ ಉಚ್ಛಳಿಸಿ ಬಂದು.

ಮತಜಾಲದಲ್ಲಿ ಸಿಲುಕಿ, ಅತಿ ಜಾತಿಯಲ್ಲಿ ಕುಲುಕಿ,
ಗತಿಗೆಟ್ಟು ಸರ್‍ವರಲಿ ನೀನಾದೆ ಹಿಂದು;
ಪತಿತರಿಗೆ ಕೈಗೊಟ್ಟು ಭಾರತ ಧ್ವಜ ನೆಟ್ಟು
ಪಥದೋರಿ ಬಂಗಾಲಿ ಕಾಯುತಿರೆ ಮುಂದು.

ನುಗ್ಗು ನುಗ್ಗುತ ಪರರು ನುಗ್ಗುತ್ತೆ ಬರುತಿಹರು;
ಬಗ್ಗಿರದೆ ಬಾಗುವುದೆ ನಿನಗಾದುದಿಂದು?
ಹಗ್ಗವಿಲ್ಲದ ಕಟ್ಟು, ಬೆತ್ತವಿಲ್ಲದ ಪೆಟ್ಟು,
ಒಗ್ಗಿತೇ ಈ ಗತಿಯು ಸವಿವಿಷವ ತಿಂದು?

ಕಿತ್ತು ಬಿಡು ಸಂದೇಹ, ಇತ್ತುಬಿಡು ಧನ ದೇಹ,
ಮಾತೃಭೂಮಿಯ ಪದಾರ್ಚನೆಗೆ ಬಲವಂದು.
ಹೊತ್ತ ಕಳೆಯಲು ಬೇಡ, ಭ್ರಾಂತಿಗೊಳದಿರು ಮೂಢ!
ಸತ್ತಿರುವೆ ಏತಕೀ ಜೀವನದೊಳಿಂದು?

ಚಿತ್ತವ್ಯಸನಾಕುಲೆಯು ಕುತ್ತಿಗೆಯ ಸಂಕಲೆಯ
ಕತ್ತರಿಸಿ ತನ್ನ ಸೆರೆ ಬಿಡಿಸಬೇಕೆಂದು,
ನೆತ್ತಿಯಲಿ ಬೊಟ್ಟಿಡದೆ, ಬಿರುದುಬಾವಲಿ ತೊಡದೆ,
ಅತ್ತತ್ತು ಹಲುಬುತಿರೆ ಭೂಮಾತೆ ನೊಂದು.

ಸತ್ತಿತೇ ಸಾಹಸವು? ಬತ್ತಿತೇ ಧೃತಿರಸವು?
ಮತ್ತೆ ಮಡಿದಾ ಕರ್ಣನಾ ಬೆನ್ನ ಹಿಂದು
ಎತ್ತ ಪೋದುದು ಪರಶುರಾಮನಾ ತೋಳ್ವಿರಿಸು?
ನೆತ್ತರೊಳಗಿಲ್ಲವೇ ವಿಕ್ರಮದ ಬಿಂದು?

ಕಳವಾದ ಮೇಲ್ನೀನು ಕಳವಳಿಸಿ ಫಲವೇನು?
ಕಳೆದಪುದು ನಿನ್ನ ಸ್ವಾತಂತ್ರ್ಯಮಣಿಯೊಂದು.
ಕೆಳಕೋಟೆ ಕೈಸೋಕೆ ಕಹಳೆ ಕೂಗುವುದೇಕೆ?
ಕಳಚಿಬಿಡು ಅಧ್ಯಾತ್ಮನಿದ್ರೆ ಮಮ ಬಂಧು.

ಎದ್ದೇಳು, ಎದ್ದೇಳು! ನಿದ್ದೆಗಣ್ಣನು ಕೀಳು;
ಹೊದ್ದಿರ್ದ ವೇದಗಂಬಳಿ ಮೂಲೆಗ್ಹೊಂದು.
ಎದ್ದು ಬರುತಿಹ ಭಾನು, ಎದ್ದಿತೈ ಜಾಪಾನು?
ಬಿದ್ದುಕೊಂಡಿರುವೇಕೆ ಕತ್ತಲೆಯೊಳಿಂದು?

ತಳರು ಭರತ ಕುಮಾರ, ಕೊಳುಗುಳದಲತಿವೀರ,
ಸೆಳೆ ಮಿಂಚಿನಸಿಯ ತೆಗೆ, ರಣಕೆ ಬಳಿಸಂದು!
ಮಳೆ ರಕುತದಲ್ಲಿ ಬೀಳೆ, ಬೆಳೆ ಕಲಿಗಳಿಂದೇಳೆ,
ಭಳಿರೇ ಭಾರತವರ್ಷ ಸೌಭಾಗ್ಯಮಂದು.
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...