Home / ಕವನ / ಕವಿತೆ / ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ?

ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ?

ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ?
ಸಾಕು, ಸುತ್ತಲು ನೋಡು ಕಣ್ತೆರೆದು ನಿಂದು;
ಲೋಕದಲಿ ವಂದೆ ಮಾತರಮೆಂಬುದೊಂದೆ ಮಾ
ತೀ ಕಿವಿಯನೊಡೆಯುತಿರೆ ಉಚ್ಛಳಿಸಿ ಬಂದು.

ಮತಜಾಲದಲ್ಲಿ ಸಿಲುಕಿ, ಅತಿ ಜಾತಿಯಲ್ಲಿ ಕುಲುಕಿ,
ಗತಿಗೆಟ್ಟು ಸರ್‍ವರಲಿ ನೀನಾದೆ ಹಿಂದು;
ಪತಿತರಿಗೆ ಕೈಗೊಟ್ಟು ಭಾರತ ಧ್ವಜ ನೆಟ್ಟು
ಪಥದೋರಿ ಬಂಗಾಲಿ ಕಾಯುತಿರೆ ಮುಂದು.

ನುಗ್ಗು ನುಗ್ಗುತ ಪರರು ನುಗ್ಗುತ್ತೆ ಬರುತಿಹರು;
ಬಗ್ಗಿರದೆ ಬಾಗುವುದೆ ನಿನಗಾದುದಿಂದು?
ಹಗ್ಗವಿಲ್ಲದ ಕಟ್ಟು, ಬೆತ್ತವಿಲ್ಲದ ಪೆಟ್ಟು,
ಒಗ್ಗಿತೇ ಈ ಗತಿಯು ಸವಿವಿಷವ ತಿಂದು?

ಕಿತ್ತು ಬಿಡು ಸಂದೇಹ, ಇತ್ತುಬಿಡು ಧನ ದೇಹ,
ಮಾತೃಭೂಮಿಯ ಪದಾರ್ಚನೆಗೆ ಬಲವಂದು.
ಹೊತ್ತ ಕಳೆಯಲು ಬೇಡ, ಭ್ರಾಂತಿಗೊಳದಿರು ಮೂಢ!
ಸತ್ತಿರುವೆ ಏತಕೀ ಜೀವನದೊಳಿಂದು?

ಚಿತ್ತವ್ಯಸನಾಕುಲೆಯು ಕುತ್ತಿಗೆಯ ಸಂಕಲೆಯ
ಕತ್ತರಿಸಿ ತನ್ನ ಸೆರೆ ಬಿಡಿಸಬೇಕೆಂದು,
ನೆತ್ತಿಯಲಿ ಬೊಟ್ಟಿಡದೆ, ಬಿರುದುಬಾವಲಿ ತೊಡದೆ,
ಅತ್ತತ್ತು ಹಲುಬುತಿರೆ ಭೂಮಾತೆ ನೊಂದು.

ಸತ್ತಿತೇ ಸಾಹಸವು? ಬತ್ತಿತೇ ಧೃತಿರಸವು?
ಮತ್ತೆ ಮಡಿದಾ ಕರ್ಣನಾ ಬೆನ್ನ ಹಿಂದು
ಎತ್ತ ಪೋದುದು ಪರಶುರಾಮನಾ ತೋಳ್ವಿರಿಸು?
ನೆತ್ತರೊಳಗಿಲ್ಲವೇ ವಿಕ್ರಮದ ಬಿಂದು?

ಕಳವಾದ ಮೇಲ್ನೀನು ಕಳವಳಿಸಿ ಫಲವೇನು?
ಕಳೆದಪುದು ನಿನ್ನ ಸ್ವಾತಂತ್ರ್ಯಮಣಿಯೊಂದು.
ಕೆಳಕೋಟೆ ಕೈಸೋಕೆ ಕಹಳೆ ಕೂಗುವುದೇಕೆ?
ಕಳಚಿಬಿಡು ಅಧ್ಯಾತ್ಮನಿದ್ರೆ ಮಮ ಬಂಧು.

ಎದ್ದೇಳು, ಎದ್ದೇಳು! ನಿದ್ದೆಗಣ್ಣನು ಕೀಳು;
ಹೊದ್ದಿರ್ದ ವೇದಗಂಬಳಿ ಮೂಲೆಗ್ಹೊಂದು.
ಎದ್ದು ಬರುತಿಹ ಭಾನು, ಎದ್ದಿತೈ ಜಾಪಾನು?
ಬಿದ್ದುಕೊಂಡಿರುವೇಕೆ ಕತ್ತಲೆಯೊಳಿಂದು?

ತಳರು ಭರತ ಕುಮಾರ, ಕೊಳುಗುಳದಲತಿವೀರ,
ಸೆಳೆ ಮಿಂಚಿನಸಿಯ ತೆಗೆ, ರಣಕೆ ಬಳಿಸಂದು!
ಮಳೆ ರಕುತದಲ್ಲಿ ಬೀಳೆ, ಬೆಳೆ ಕಲಿಗಳಿಂದೇಳೆ,
ಭಳಿರೇ ಭಾರತವರ್ಷ ಸೌಭಾಗ್ಯಮಂದು.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...